ಬೆಂಗಳೂರಿನಲ್ಲಿ ವಿಶ್ವದಾಖಲೆ ಸೇರಲಿದೆ ರಕ್ಷಾ ಬಂಧನ
ಬೆಂಗಳೂರು, ಆಗಸ್ಟ್ 16 : ಆಗಸ್ಟ್ 18, ಗುರುವಾರ ಶ್ರಾವಣ ಹುಣ್ಣಿಮೆ. ಅಂದು ಸಹೋದರತೆಯನ್ನ ಸಾರುವ ರಕ್ಷಾಬಂಧನ. ಪರಸ್ಪರ ಭ್ರಾತೃತ್ವವನ್ನು ಸಾರುವ ರಾಖಿ ಹಬ್ಬದ ಮೂಲಕ ವಿಶ್ವದಾಖಲೆ ನಿರ್ಮಿಸ ಹೊರಟಿದ್ದಾರೆ ಪರಮಪೂಜ್ಯ ದಿಗಂಬರ ಸಂತಶ್ರೇಷ್ಠ ಅಂತರ್ಮನ ಶ್ರೀ 108 ಪ್ರಸನ್ನ ಸಾಗರಜೀ ಮಹಾರಾಜರು.
ಅಸೂಯೆ ಬದಲು ಸ್ನೇಹ, ಅಹಂ ಬದಲು ವಿನಮ್ರತೆ, ದ್ವೇಷಿಸುವ ಬದಲು ಪ್ರೀತಿಸುವ; ಮುರಿಯುವ ಬದಲು ಮನಸ್ಸುಗಳನ್ನು ಸೇರಿಸುವ, ಒಂದಾಗಿಸುವ ಈ ಅಭೂತಪೂರ್ವ ಕಾರ್ಯಕ್ರಮಕ್ಕೆ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನ ಸಾಕ್ಷಿಯಾಗಲಿದೆ. ಮುನಿಶ್ರೀ 108 ಪಿಯೂಷ ಸಾಗರಜೀ ಮಹಾರಾಜ್ ಈ ಕಾರ್ಯಕ್ರಮಕ್ಕೆ ಮಾರ್ಗದರ್ಶನ ನೀಡಲಿದ್ದಾರೆ. [ಪ್ರೀತಿಯ ಸೋದರನಿಗೆ ರಾಖಿಯ ಉಡುಗೊರೆ]

ತ್ಯಾಗಿ ಸೇವಾ ಸಮಿತಿ ಟ್ರಸ್ಟ್ ಆಯೋಜಿಸಿರುವ ಈ ವಿಶ್ವದಾಖಲೆಯ ರಾಖಿ ಹಬ್ಬದ ಆಚರಣೆಗೆ ಕರ್ನಾಟಕ ಜೈನ ಅಸೋಷಿಯೇಷನ್, ಶ್ರೀ ಚಕ್ರೇಶ್ವರಿ ಮಹಿಳಾ ಸಮಾಜ, ಶ್ರೀಖಂಡೇವಾಲಾ ಜೈನ ಸಮಾಜ ಹಾಗೂ ಸಕಲ ಜೈನ ಸಮಾಜ, ತ್ಯಾಗಿ ಸೇವಾ ಸಮಿತಿಗೆ ಕೈಜೋಡಿಸುತ್ತಿದೆ.
ಈ ಅಭೂತಪೂರ್ವ ರಾಖಿ ಹಬ್ಬವನ್ನು ದಾಖಲಿಸಲೆಂದೇ ವಿಶ್ವದಾಖಲೆಯ ಅಧಿಕಾರಿಗಳ ತಂಡ ಬೆಂಗಳೂರಿಗೆ ಆಗಮಿಸಲಿದ್ದು, ಈ ತಂಡದ ಉಪಸ್ಥಿತಿಯಲ್ಲಿ ಎರಡು ವಿಶ್ವ ದಾಖಲೆಗಳು ಸೃಷ್ಟಿಯಾಗಲಿವೆ. ಮೊದಲ ಸುತ್ತಿನಲ್ಲಿ 400ಕ್ಕೂ ಹೆಚ್ಚು ಯುವತಿಯರು ಏಕಕಾಲಕ್ಕೆ ತಮ್ಮ ಒಡಹುಟ್ಟಿದ ಅಣ್ಣಂದಿರಿಗೆ ರಾಖಿ ಕಟ್ಟಿ ದಾಖಲೆ ಬರೆಯಲಿದ್ದಾರೆ.
2ನೇ ಸುತ್ತಿನಲ್ಲಿ 400ಕ್ಕೂ ಹೆಚ್ಚು ಅಣ್ಣಂದಿರು ತಮ್ಮ ಒಡಹುಟ್ಟಿದ ಪ್ರೀತಿಯ ತಂಗಿಯರಿಗೆ ರಕ್ಷೆ ಕಟ್ಟಿ ಸಹೋದರತೆಯ ಸಂದೇಶ ಸಾರಲಿದ್ದಾರೆ. ಮೂರನೇ ಸುತ್ತಿನಲ್ಲಿ 400ಕ್ಕೂ ಹೆಚ್ಚು ಸಹೋದರಿಯರು ತಮ್ಮ ಸಹೋದರಿಯರಿಗೆ ರಕ್ಷೆ ಕಟ್ಟಲಿದ್ದು, ಕೊನೆಯದಾಗಿ ಸಹೋದರರು, ತಮ್ಮ ಸ್ನೇಹಿತರು, ಆತ್ಮೀಯರಿಗೆ ರಾಖಿ ಕಟ್ಟಿ ದಾಖಲೆ ಬರೆಯಲಿದ್ದಾರೆ.[ಭಾರತದಾದ್ಯಂತ ರಕ್ಷಾ ಬಂಧನಕ್ಕೆ ಭಾರೀ ತಯಾರಿ]

ಧರ್ಮ ಧ್ವಜಾರೋಹಣದೊಂದಿಗೆ ವಿಶ್ವದಾಖಲೆಯ ರಕ್ಷಾಬಂಧನ
ಇದಕ್ಕೂ ಮುನ್ನ ಅಂತರ್ಮನ ಶ್ರೀ 108 ಪ್ರಸನ್ನ ಸಾಗರಜೀ ಮಹಾರಾಜ್, ಮುನಿಶ್ರೀ 108 ಪಿಯೂಷ ಸಾಗರಜೀ ಮಹಾರಾಜ್, ಕ್ಷುಲ್ಲಕ 105 ಶ್ರೀ ಪರ್ವಸಾಗರ್ಜೀ ಮಹಾರಾಜ್ ಅವರಿಂದ 'ಅಹಿಂಸಾ ಸಂಸ್ಕಾರ ಪಾದಯಾತ್ರೆ' ನಡೆಯಲಿದೆ.
ವಿವಿಪುರಂನ ಮಹಾವೀರ ಧರ್ಮಶಾಲಾದಿಂದ ಆರಂಭಗೊಳ್ಳುವ ಈ ಪವಿತ್ರ ಯಾತ್ರೆ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಮುಕ್ತಾಯಗೊಳ್ಳಲಿದೆ. ನಂತರ ಮಧ್ಯಾಹ್ನ 1 ಗಂಟೆಗೆ ಜೈನ ಮನಿಶ್ರೀಗಳಿಂದ ಧರ್ಮ ಧ್ವಜಾರೋಹಣ ನಡೆಯಲಿದ್ದು, ಈ ಮೂಲಕ ವಿಶ್ವದಾಖಲೆಯ 'ಅಂತರ್ಮನ ರಕ್ಷಾಬಂಧನ ಮಹೋತ್ಸವ'ಕ್ಕೆ ಚಾಲನೆ ದೊರೆಯಲಿದೆ. [ಅಣ್ಣ-ತಂಗಿ ಬಾಂಧವ್ಯ ಬೆಸೆವ ರಕ್ಷಾ ಬಂಧನ ಸಂಭ್ರಮ]

ಇದೇವೇಳೆ, ಅಂತರ್ಮನ ಶ್ರೀ 108 ಪ್ರಸನ್ನ ಸಾಗರಜೀ ಮಹಾರಾಜ್ಜೀ ಅವರಿಗೆ ಜೈನ ಬಂಧುಗಳು ಚಿನ್ನ ಮತ್ತ ಬೆಳ್ಳಿಯ ಎಳೆಗಳಿಂದ ಮಾಡಿದ ರಾಖಿಯನ್ನು ಕಟ್ಟಿ ಆಶೀರ್ವಾದ ಪಡೆಯಲಿದ್ದಾರೆ. ಬಳಿಕ ಶ್ರೀ 108 ಪ್ರಸನ್ನ ಸಾಗರಜೀ ಮಹಾರಾಜ್ಜೀ ಅವರು ರಕ್ಷಾಬಂಧನದ ಮಹತ್ವದ ಬಗ್ಗೆ ಮಾತನಾಡಲಿದ್ದಾರೆ.
ಸಂಜೆ 5 ಗಂಟೆಯವರೆಗೆ ನಡೆಯಲಿರುವ ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಯಾರು ಬೇಕಾದರೂ ಭಾಗವಹಿಸಬಹುದು. ನೀವೂ ಸಹ ನಿಮ್ಮ ಒಡಹುಟ್ಟಿದ ಸಹೋದರಿಗೆ/ ಸಹೋದರನಿಗೆ ರಾಖಿ ಕಟ್ಟುವ ಮೂಲಕ ವಿಶ್ವ ದಾಖಲೆಗೆ ಸೇರ್ಪಡೆಗೊಳ್ಳಬಹುದು.
ಈ ಬೃಹತ್ ವಿಶೇಷ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಎಲ್ಲರಿಗೂ ಭಾಗವಹಿಸಲು ಅವಕಾಶವಿದ್ದು, ಹೆಚ್ಚಿನ ಮಾಹಿತಿಗೆ ಸಂಘಟಕ ಗುಣಪಾಲ್ ಜೈನ್ - 98451 30374, ಸಮಂತ ಜೈನ್ - 90360 23568, ಕೆ. ಜಯರಾಜ ಆರಿಗಾ - 99452 57575, ಆಶಾ ಪ್ರಭು - 80955 88466 ಸಂಪರ್ಕಿಸಲು ಕೋರಲಾಗಿದೆ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications