ಜಯಾ ಬೆನ್ನಿಗೆ ನಿಂತ ನ್ಯಾಯವಾದಿ ರಾಮ್ ಜೇಠ್ಮಲಾನಿ
ಬೆಂಗಳೂರು, ಸೆ.28: ಸಮಸ್ಯೆಯ ಸುಳಿಯಲ್ಲಿ ಸಿಲುಕಿರುವ ಹತ್ತು ಹಲವು ರಾಜಕಾರಣಿಗಳು, ಉದ್ಯಮಿಗಳು, ಖ್ಯಾತನಾಮರ ನೆಚ್ಚಿನ ಆಯ್ಕೆಯಾಗಿರುವ ಭಾರತದ ಪ್ರತಿಷ್ಠಿತ ನ್ಯಾಯವಾದಿ ರಾಮ್ ಜೇಠ್ಮಲಾನಿ ಮತ್ತೆ ಸುದ್ದಿಯಲ್ಲಿದ್ದಾರೆ. ಅಕ್ರಮ ಆಸ್ತಿ ಪ್ರಕರಣದಲ್ಲಿ ಅಪರಾಧಿಯಾಗಿರುವ ಜೆ.ಜಯಲಲಿತಾ ಪರವಾಗಿ ಜೇಠ್ಮಲಾನಿ ವಾದಿಸಲಿದ್ದು, ಸೋಮವಾರ ಹೈಕೋರ್ಟಿನಲ್ಲಿ ಜಾಮೀನು ಅರ್ಜಿ ಹಾಕಲಿದ್ದಾರೆ.
ವಿವಾದಿತ ಪ್ರಕರಣಗಳನ್ನು ಕೈಗೆತ್ತಿಕೊಳ್ಳುವ ರಾಮ್ ಜೇಠ್ಮಲಾನಿ ಅವರನ್ನು ಭಾನುವಾರ ಎಐಎಡಿಎಂಕೆ ಪ್ರಮುಖ ನಾಯಕರು ಸಂಪರ್ಕಿಸಿ ಕೇಸಿನ ವಿಚಾರ ಮಾತುಕತೆ ನಡೆಸಿದ್ದಾರೆ. 18 ವರ್ಷಗಳ ಕಾನೂನು ಹೋರಾಟದ ನಂತರ ಜಯಲಲಿತಾ ಅವರು ಪ್ರಕರಣದಲ್ಲಿ ಶಿಕ್ಷೆ ಅನುಭವಿಸಬೇಕಾಯಿತು.
ಜಯಲಲಿತಾ ಹಾಗೂ ಅವರ ಮೂವರು ಸಹಚರರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು 4 ವರ್ಷ ಜೈಲು ಶಿಕ್ಷೆ ಹಾಗೂ 100 ಕೋಟಿ ರು ದಂಡ ತೆರಬೇಕಾಗಿದೆ. ಸಿಬಿಐ ವಿಶೇಷ ನ್ಯಾಯಲಯ ನೀಡಿರುವ ಈ ತೀರ್ಪನ್ನು ಪ್ರಶ್ನಿಸಿ ಸೋಮವಾರ(ಸೆ.29) ಹೈಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಲು ಎಐಎಡಿಎಂಕೆ ನಿರ್ಧರಿಸಿದೆ.[ಜಯಲಲಿತಾ ಆಪ್ತ ಪನ್ನೀರ್ ಸೆಲ್ವಂಗೆ ಸಿಎಂ ಪಟ್ಟ]

ದಸರಾ ರಜೆ: ನ್ಯಾಯಾಲಯಗಳಿಗೆ 10 ದಿನಗಳ ದಸರಾ ರಜೆ ಇದೆ. ಅದರೆ, ಸೋಮವಾರದಂದು ಜಯಲಲಿತಾ ಅವರ ಜಾಮೀನು ಅರ್ಜಿ ಸಲ್ಲಿಸಬಹುದಾಗಿದ್ದು, ಹೈಕೋರ್ಟಿನಲ್ಲಿ ರಜಾದಿನಗಳ ನ್ಯಾಯಾಧೀಶರೊಬ್ಬರು ಅರ್ಜಿ ಸ್ವೀಕರಿಸಿ ವಿಚಾರಣೆ ನಡೆಸಲಿದ್ದಾರೆ. ಮಂಗಳವಾರ ಹಾಗೂ ಬುಧವಾರದಂದು ಜಯಲಲಿತಾ ಅವರಿಗೆ ಅದೃಷ್ಟವಿದ್ದರೆ ಜಾಮೀನು ಅರ್ಜಿ ವಿಚಾರಣೆ ಇತ್ಯರ್ಥವಾಗಲಿದೆ. ಇಲ್ಲದಿದ್ದರೆ ಇನ್ನಷ್ಟು ದಿನಗಳ ಕಾಲ ಜೈಲಿನಲ್ಲೇ ಕಾಲ ದೂಡಬೇಕಾಗಿದೆ.[ಯಡಿಯೂರಪ್ಪ ಪರಿಶುದ್ಧ, ಪ್ರಾಮಾಣಿಕ: ಜೇಠ್ಮಲಾನಿ]
ಈ ನಡುವೆ ತಮಿಳುನಾಡಿನ ವಿತ್ತ ಸಚಿವ ಪನ್ನೀರ್ ಸೆಲ್ವಂ ಅವರು ಮುಂದಿನ ಮುಖ್ಯಮಂತ್ರಿಯಾಗಿ ಜಯಲಲಿತಾ ಅವರ ಸ್ಥಾನದಲ್ಲಿ ಕೂರುವುದು ಖಾತ್ರಿಯಾಗಿದೆ. ಎಐಎಡಿಎಂಕೆ ಶಾಸಕರು ಭಾನುವಾರ ಸಂಜೆ ರಾಜ್ಯಪಾಲ ರೋಸಯ್ಯ ಅವರನ್ನು ಭೇಟಿ ಸರ್ಕಾರ ರಚನೆಯ ಹಕ್ಕು ಮಂಡನೆ ಮಾಡಿದ್ದಾರೆ. ಎಲ್ಲಾ ಅಂದುಕೊಂಡಂತೆ ನಡೆದರೆ ನಾಳೆ ಮಧ್ಯಾಹ್ನ 12ರೊಳಗೆ ಪನ್ನೀರ್ ಸೆಲ್ವಂ ಅವರು ನೂತನ ಸಿಎಂ ಆಗಲಿದ್ದಾರೆ. ಇದೇ ವೇಳೆಗೆ ರಾಮ್ ಜೇಠ್ಮಲಾನಿ ಅವರು ತಮ್ಮ ಶಿಷ್ಯಂದಿರ ಮೂಲಕ ಕರ್ನಾಟಕ ಹೈಕೋರ್ಟಿನಲ್ಲಿ ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications