ಬೆಂಗಳೂರಲ್ಲೂ ರಾಮಮಂದಿರ ನಿರ್ಮಾಣ: ಆರ್ ಅಶೋಕ್
ಬೆಂಗಳೂರು, ನವೆಂಬರ್ 5: ಬೆಂಗಳೂರಲ್ಲೂ ರಾಮಮಂದಿರ ನಿರ್ಮಿಸುವ ಚಿಂತನೆ ಇದೆ ಎಂದು ಬಿಜೆಪಿ ಮುಖಂಡ ಆರ್ ಅಶೋಕ್ ಹೇಳಿದ್ದಾರೆ.
ಇದೀಗ ಅಯೋಧ್ಯೆಯಲ್ಲಿ ಶೀಘ್ರ ರಾಮಮಂದಿರ ನಿರ್ಮಾಣ ಕಾರ್ಯ ಆರಂಭವಾಗಲಿದೆ, ಬೆಂಗಳೂರಲ್ಲೂ ರಾಮಮಂದಿರವನ್ನು ನಿರ್ಮಾಣ ಮಾಡುವ ಚಿಂತನೆ ಇದೆ, ರಾಮನನ್ನು ಇಡೀ ದೇಶವೇ ಪೂಜಿಸುತ್ತದೆ, ಗೌರವ ಇದೆ, ಈ ಕುರಿತು ಚರ್ಚೆ ನಡೆಸಿ ಶೀಘ್ರ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದರು.
ಧಾಂಧೂಂ ಅಂತ ರಾಮ ಮಂದಿರದ ನಿರ್ಮಾಣ : ಸಾಧುಸಂತರ ಘೋಷಣೆ
ಮರ್ಯಾದ ಪುರುಷೋತ್ತಮ ರಾಮನಿಗೆ ಇಡೀ ಭಾರತ ಗೌರವ ನೀಡುತ್ತೆ, ಟೀಂ ನಮ್ಮ ಜೊತೆ ಚರ್ಚೆ ಸನಡೆಸಲಿದ್ದೇವೆ, ಈ ಕುರಿತು ಇಡೀ ಭಾರತ ಸಹಕಾರ ನೀಡಲಿದೆ ಎಂದರು. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ನಾನಾ ತೊಡಕುಗಳು ಹಲವಾರು ವರ್ಷಗಳಿಂದ ಬರುತ್ತಿದೆ. ಮಂದಿರ ನಿರ್ಮಾಣ ಮಾಡಲು ಬೇಕಾದ ಎಲ್ಲಾ ಪರಿಕರಗಳು ಸುಮಾರು 7 ವರ್ಷಗಳಿಂದ ಸಿದ್ಧವಿದೆ. ಆದರೂ ಮಂದಿರ ನಿರ್ಮಾಣ ಮಾಡಲು ಸಾಧ್ಯವಾಗುತ್ತಿಲ್ಲ.
ರಾಮಮಂದಿರಕ್ಕಾಗಿ 1992 ರ ಮಾದರಿ ಹೋರಾಟ ಮಾಡಲು ಸಿದ್ಧ: RSS
ಒಂದೆಡೆ ಅಯೋಧ್ಯೆ ರಾಮಮಂದಿರ-ಬಾಬ್ರಿ ಮಸೀದಿ ವಿವಾದವನ್ನು ನ್ಯಾಯಾಲಯದ ಹೊರಗೆ ಬಗೆಹರಿಸಿಕೊಳ್ಳಲು ನಾವು ಸಿದ್ಧರಿದ್ದೇವೆ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೇಳಿದೆ. 15 ನೇ ಶತಮಾನದ ಬಾಬ್ರಿ ಮದೀಸಿಯನ್ನು ಕರ ಸೇವಕರು 1992ರಲ್ಲಿ ನೆಲಸಮಗೊಳಿಸಿದರು. ನಂತರ ಈ ವಿವಾದಾತ್ಮಕ ನಿವೇಶನವನ್ನು ನಿರ್ಮೋಹಿ ಅಖಾಡ, ರಾಮ ಲಲ್ಲಾ ಮತ್ತು ಸುನ್ನಿ ವಕ್ಫ್ ಮಂಡಳಿಗೆ ಸಮನಾಗಿ ಹಂಚಿಕೆ ಮಾಡುವಂತೆ ಅಲಹಬಾದ್ ಹೈಕೋರ್ಟ್ ತೀರ್ಪು ನೀಡಿತ್ತು.