Ram Navami 2023 : ರಾಮ ನವಮಿ: ನಾಳೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧಿಸಿದ ಬಿಬಿಎಂಪಿ
ಬೆಂಗಳೂರು, ಮಾರ್ಚ್. 29: ರಾಮನವಮಿ ಹಿನ್ನೆಲೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಾರ್ಚ್ 30 ರ ಗುರುವಾರದಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿ ಹತ್ಯೆಯನ್ನು ನಿಷೇಧಿಸಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಸಂಪೂರ್ಣ ಮಾಂಸ ಮಾರಾಟ ನಿಷೇಧಿಸಿ ಸೂಚನೆ ಹೊರಡಿಸಿದೆ.
'ಮಾರ್ಚ್ 30ರಂದು ರಾಮನವಮಿ ಪ್ರಯುಕ್ತ ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿ ಹತ್ಯೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ' ಎಂದು ಬಿಬಿಎಂಪಿ ಸೋಮವಾರ ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಿದೆ. ಸುತ್ತೋಲೆಯನ್ನು ಜಂಟಿ ನಿರ್ದೇಶಕರು (ಪ್ರಾಣಿ ಕಲ್ಯಾಣ) ಹೊರಡಿಸಿದ್ದಾರೆ.

ಇನ್ನು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆದೇಶಕ್ಕೆ ಹಲವರು ಆಕ್ರೋಶ ಹೊರಹಾಕಿದ್ದಾರೆ. ಇಂತಹ ನಿಷೇಧಗಳು ಇಂಟರ್ನೆಟ್ ಆಧಾರಿತ ಮಾಂಸ ಮಾರಾಟಗಾರರಿಗೆ ಸಹಾಯ ಮಾಡಲು ಹೊರಡಿಸಲಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಫೆಬ್ರವರಿಯಲ್ಲಿ, ಮಹಾ ಶಿವರಾತ್ರಿ ಸಂದರ್ಭದಲ್ಲಿ ಮಾಂಸ ಮಾರಾಟ ಮತ್ತು ವಧೆ ನಿಷೇಧಿಸಿ ಬಿಬಿಎಂಪಿ ಇದೇ ರೀತಿಯ ಆದೇಶವನ್ನು ಹೊರಡಿಸಿತು.
"ಬೆಂಗಳೂರಿನಲ್ಲಿ ರಾಮ ನವಮಿಯಂದು ಬಿಬಿಎಂಪಿಯಿಂದ ಮಾಂಸ, ಕೋಳಿ ಮತ್ತು ಮೀನು ಮಾರಾಟವನ್ನು ನಿಷೇಧಿಸಲಾಗಿದೆ. ಈ ನಿಯಮಿತ ನಿಷೇಧಗಳು ಲೂಷಿಯಸ್ ಫುಡ್ಸ್ ತರಹದ ಇಂಟರ್ನೆಟ್ ಆಧಾರಿತ ಪೂರೈಕೆದಾರರಿಗೆ ಸಹಾಯ ಮಾಡುವ ತಂತ್ರವಾಗಿದೆಯೇ...? ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರೊಬ್ಬರು ಪ್ರಶ್ನಿಸಿದ್ದಾರೆ.
ಇದರ ಜೊತೆಗೆ ಈ ಇಂಟರ್ನೆಟ್ ಆಧಾರಿತ ಪೂರೈಕೆದಾರರು ನೀಡುವ ಮಾಂಸ, ಟೆಂಡರ್ ಚಿಕನ್ ಇತ್ಯಾದಿ ಹಲಾಲ್ ಪ್ರಮಾಣೀಕರಿಸಲಾಗಿದೆ..? ಎಂದು ಪ್ರಶ್ನಿಸಿದ್ದಾರೆ. ಕಳೆದ ಬಾರಿ ಹಲಾಲ್ ಮಾಂಸ ಮಾಡುವುದಾಗಿ ಲೂಷಿಯಸ್ ಮಾಡಿದ್ದ ಟ್ವೀಟ್ ಒಂದರ ಸ್ಕ್ರೀನ್ ಶಾಟ್ ಕೂಡ ಹಾಕಿದ್ದಾರೆ. ಇನ್ನು ರಾಮ ನವಮಿಗೆ ಮಾಂಸವನ್ನು ಮಾರುವವನುವನ್ನು ನೀಷೇಧಿಸಿರುವುದಕ್ಕೆ ರಾಮ ಕಾಡಿನಲ್ಲಿ ಬೇಟಿಯಾಡುತ್ತಿರುವ ಚಿತ್ರ ಹಾಕಿ ಪ್ರಶ್ನಿಸಲಾಗಿದೆ.

ಕೃಷ್ಣ ಜನ್ಮಾಷ್ಟಮಿಯಂತಹ ಇತರ ಹಬ್ಬಗಳು ಮತ್ತು ಗಾಂಧಿ ಜಯಂತಿಯಂತಹ ಸರ್ಕಾರಿ ರಜಾದಿನಗಳಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿ ಹತ್ಯೆಯ ಮೇಲೆ ನಾಗರಿಕ ಸಂಸ್ಥೆ ಇದೇ ರೀತಿಯ ನಿಷೇಧವನ್ನು ವಿಧಿಸುತ್ತದೆ. ಬಿಬಿಎಂಪಿ ಪ್ರಕಾರ, ಬೆಂಗಳೂರಿನಲ್ಲಿ ಸುಮಾರು 3,000 ಪರವಾನಗಿ ಹೊಂದಿರುವ ಮಾಂಸದ ಅಂಗಡಿಗಳು ಮತ್ತು ಮೂರು ಕಸಾಯಿಖಾನೆಗಳು ಅಧಿಕೃತವಾಗಿವೆ.
ಇತ್ತೀಚೆಗೆ ನಡೆದ ಬೆಂಗಳೂರಿನ ಯಲಹಂಕದಲ್ಲಿರುವ ವಾಯುನೆಲೆಯಲ್ಲಿನ ಅಂತಾರಾಷ್ಟ್ರೀಯ ಏರೋ ಇಂಡಿಯಾ 2023ರ ಹಿನ್ನೆಲೆಯೂ ಮಾಂಸಾಹಾರ ನಿಷೇಧ ಮಾಡಲಾಗಿತ್ತು. ಯಲಹಂಕ ವಲಯ ವ್ಯಾಪ್ತಿಯಲ್ಲಿರುವ ಎಲ್ಲ ಮಾಂಸದ ಮಳಿಗೆಗಳಲ್ಲಿ ಜನವರಿ 30 ರಿಂದಲೇ ರಿಂದ ಫೆಬ್ರುವರಿ 20ರವರೆಗೆ ಎಲ್ಲ ತರಹದ ಮಾಂಸ ಮಾರಾಟ ನಿಷೇಧಿಸಲಾಗಿತ್ತು. ಇಷ್ಟೇ ಅಲ್ಲದೇ ಹೋಟೇಲ್ ಹಾಗೂ ರೆಸ್ಟೋರೆಂಟ್/ಡಾಬಾಗಳಲ್ಲಿ ಮಾಂಸಾಹಾರ ತಯಾರಿಕೆ ಮತ್ತು ಮಾರಾಟವನ್ನೂ ಸಹ ಬಿಬಿಎಂಪಿ ನಿಷೇಧಿಸಿತ್ತು. ಆದರೆ, ಜನರ ಆಕ್ರೋಶದ ಹಿನ್ನೆಲೆ ಆದೇಶವನ್ನು ವಾಪಸ್ ಪಡೆಯಲಾಗಿತ್ತು.
ಈ ಬಾರಿಯ ರಾಮನವಮಿ ಮಾರ್ಚ್ 30ರಂದು ಇದೆ. ಚೈತ್ರ ನವರಾತ್ರಿಯ ಒಂಬತ್ತನೇ ದಿನ ನವರಾತ್ರಿ ವ್ರತ ಕೊನೆಗೊಂಡು ಉಪವಾಸ ಆಚರಿಸಲಾಗುತ್ತದೆ. ಈ ದಿನ ರಾಮ ನವಮಿಯ ಹಬ್ಬವನ್ನು ಸಹ ಆಚರಿಸಲಾಗುತ್ತದೆ. ಚೈತ್ರ ಮಾಸದ ಶುಕ್ಲ ಪಕ್ಷದ ನವಮಿ ದಿನಾಂಕದಂದು ರಾಮನು ಭೂಮಿಯ ಮೇಲೆ ಜನಿಸಿದನು ಎಂದು ನಂಬಲಾಗಿದೆ. ಆದ್ದರಿಂದ ಈ ದಿನವನ್ನು ರಾಮ ನವಮಿ ಎಂದು ಕರೆಯಲಾಗುತ್ತದೆ.
ಈ ದಿನದಂದು ಶ್ರೀರಾಮನನ್ನು ವಿಶೇಷವಾಗಿ ಪೂಜಿಸಲಾಗುತ್ತದೆ. ಮನೆಗಳಲ್ಲಿ ಮತ್ತು ದೇವಸ್ಥಾನಗಳಲ್ಲಿ ವಿಶೇಷ ಕಾರ್ಯಕ್ರಮಗಳು ನಡೆಯುತ್ತವೆ. ಈ ವರ್ಷ ರಾಮ ನವಮಿಯಂದು 4 ವಿಶೇಷ ಯೋಗಗಳ ಸಂಯೋಜನೆ ನಡೆಯುತ್ತಿದೆ. ಈ ಬಾರಿ ರಾಮನವಮಿಯ ದಿನದಂದು ಗುರು ಪುಷ್ಯ ಯೋಗ, ಅಮೃತ ಸಿದ್ಧಿ ಯೋಗ, ಸರ್ವಾರ್ಥ ಸಿದ್ಧಿ ಯೋಗ, ರವಿ ಯೋಗ ಸೃಷ್ಟಿಯಾಗುತ್ತಿದೆ. ಈ ಎಲ್ಲಾ ಯೋಗಗಳನ್ನು ಬಹಳ ಮಂಗಳಕರವೆಂದು ಪರಿಗಣಿಸಲಾಗುತ್ತದೆ.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ.












Click it and Unblock the Notifications