ಸತ್ಯಪರರೇ, ನ್ಯಾಯನಿಷ್ಠರೇ ಸಿಡಿದೇಳಿ : ರಾಘವೇಶ್ವರ ಭಾರತಿ ಸ್ವಾಮಿ
ಬೆಂಗಳೂರು, ಸೆಪ್ಟೆಂಬರ್ 21: ಗೋಕರ್ಣ ಮಹಾಬಲೇಶ್ವರ ದೇವಾಲಯದ ಆಡಳಿತವನ್ನು ಸುಪ್ರೀಂ ಕೋರ್ಟ್ ಆದೇಶವನ್ನೂ ಲೆಕ್ಕಿಸದೆ ತನ್ನ ಸುಪರ್ದಿಗೆ ಪಡೆದ ರಾಜ್ಯ ಸರ್ಕಾರದ ವಿರುದ್ಧ ರಾಮಚಂದ್ರಾಪುರ ಮಠ ನ್ಯಾಯಾಂಗ ನಿಂದನೆಯ ದೂರು ದಾಖಲಿಸಿದೆ.
ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ ಬಂದು ಎಂಟು ವಾರಗಳ ಕಾಲ ದೇವಾಲಯದ ಉಸ್ತುವಾರಿಯನ್ನು ಮಠವೇ ವಹಿಸಿಕೊಳ್ಳಬೇಕು ಎಂದು ಕೋರ್ಟ್ ಹೇಳಿದ್ದರೂ, ಎಂಟು ವಾರ ಕಳೆಯುವ ಮೊದಲೇ ಉತ್ತರ ಕನ್ನಡ ಜಿಲ್ಲಾಡಳಿತ ಮಠವನ್ನು ತನ್ನ ಸುಪರ್ದಿಗೆ ಪಡೆದುಕೊಂಡಿದೆ. ಸರ್ಕಾರದ ಈ ಕ್ರಮವನ್ನು ಮಠ ವಿರೋಧಿಸಿ, ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದೆ.
ಈ ಕುರಿತು ರಾಮಚಂದ್ರಾಪುರ ಮಠ ಟ್ವಿಟ್ಟರ್ ಅಭಿಯಾನ ಸಹ ಆರಂಭಿಸಿದ್ದು, ಸರ್ಕಾರದ ನಡೆಯ ವಿರುದ್ಧ ಜನ ಸಿಡಿದೇಳಬೇಕೆಂದು ಮನವಿ ಮಾಡಿದೆ.

"ಸತ್ಯಪರರೇ! ನ್ಯಾಯನಿಷ್ಠರೇ! ಸಿಡಿದೇಳಿ! ಸಜ್ಜನಶಕ್ತಿಯ ಮೇಲೆ ನಿರಂತರ-ನಿಷ್ಕಾರಣ ಪ್ರಹಾರ ನಡೆಸುತ್ತಿರುವ ಅಸುರರ ವಿರುದ್ಧ ಸಂಘಟಿತ ಸಮರ ಸಾರೋಣ. ಸಾತ್ತ್ವಿಕ ಶಕ್ತಿಯ ಸಾಮರ್ಥ್ಯವೇನೆಂಬುದನ್ನು ಜಗತ್ತು ನೋಡಲಿ..." ಎಂದು ರಾಮಚಂದ್ರ ಮಠಾಧೀಶ ಶ್ರೀ ರಾಘವೇಶ್ವರ ಭಾರತಿ ಸ್ವಾಮಿ ಅವರ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡಲಾಗಿದೆ.
ಸತ್ಯಪರರೇ! ನ್ಯಾಯನಿಷ್ಠರೇ! ಸಿಡಿದೇಳಿ! ಸಜ್ಜನಶಕ್ತಿಯ ಮೇಲೆ ನಿರಂತರ-ನಿಷ್ಕಾರಣ ಪ್ರಹಾರ ನಡೆಸುತ್ತಿರುವ ಅಸುರರ ವಿರುದ್ಧ ಸಂಘಟಿತ ಸಮರ ಸಾರೋಣ.
— RaghaveshwaraBharati (@SriSamsthana) September 21, 2018
ಸಾತ್ತ್ವಿಕ ಶಕ್ತಿಯ ಸಾಮರ್ಥ್ಯವೇನೆಂಬುದನ್ನು ಜಗತ್ತು ನೋಡಲಿ...#MuttAttacked #TempleLooted
ಜೊತೆಗೆ #TempleLooted ಮತ್ತು #MuttAttacked ಎಂಬ ಎರಡು ಹ್ಯಾಶ್ ಟ್ಯಾಗ್ ಗಳ ಮೂಲಕ ಟ್ವಿಟ್ಟರ್ ಅಭಿಯಾನ ಆರಂಭಿಸಿದೆ.
-
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications