Ramzan food fair: ಬೆಂಗಳೂರು 'ರಂಜಾನ್ ಆಹಾರ ಮೇಳ' ನಿಷೇಧಕ್ಕೆ ಆಗ್ರಹ: ಕಾರಣವೇನು?
ಬೆಂಗಳೂರು, ಫೆಬ್ರವರಿ 21: ಮುಸ್ಲಿಮರ ಪ್ರಮುಖ ಆಚರಣೆಗಳಲ್ಲಿ ಒಂದಾಗಿರುವ ರಂಜಾನ್ ಪ್ರಯುಕ್ತ (Ramadan) ಈ ಭಾಗದ ಸುತ್ತಮುತ್ತ 'ವಾರ್ಷಿಕ ಆಹಾರ ಮೇಳ' ನಿಷೇಧಿಸುವಂತೆ ಬೆಂಗಳೂರಿನ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಮನವಿ ಸಲ್ಲಿಸಿದ್ದಾರೆ.
ಮುಂದಿನ ಮಾರ್ಚ್ 10ರಿಂದ ಏಪ್ರಿಲ್ 9ರವರೆಗೆ ಒಂದು ತಿಂಗಳ ಕಾಲ ರಂಜಾನ್ ಆಚರಣೆ ನಡೆಯಲಿದೆ. ಈ ಹಬ್ಬದ ಪ್ರಯುಕ್ತ ಮಸೀದಿ ರಸ್ತೆ, ಎಂಎಂ ರಸ್ತೆ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಾರ್ಷಿಕ ಆಹಾರ ಮೇಳ ಹಮ್ಮಿಕೊಳ್ಳಬಾರದು. ಅದನ್ನು ನಿಷೇಧಿಸುವಂತೆ ಒತ್ತಾಯಿಸಿ ಬೆಂಗಳೂರಿನ ಫ್ರೇಸರ್ ಟೌನ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ (FTRWA) ಸದಸ್ಯರು ಪುಲಕೇಶಿನಗರ ಶಾಸಕ ಎಸಿ ಶ್ರೀನಿವಾಸ ಅವರಿಗೆ ಮಂಗಳವಾರ ಮನವಿ ಪತ್ರ ಸಲ್ಲಿಸಿದ್ದಾರೆ.

ರಂಜಾನ್ ಹಬ್ಬದ ಪ್ರಯುಕ್ತ ಮಾರ್ಚ್ 12 ರಂದು ಈ ವಾರ್ಷಿಕ ಆಹಾರ ಮೇಳ ಪ್ರಾರಂಭವಾಗುವ ಸಾಧ್ಯತೆ ಇದೆ. ಇದ ಜಾತ್ರೆ ರೀತಿಯಲ್ಲಿ ನಡೆಯುತ್ತದೆ. ಈ ಜಾತ್ರೆಗೆ ಸಾವಿರಗಟ್ಟಲೇ ಜನರು ಬರುತ್ತಾರೆ. ಆಚರಣೆ ಬಳಿಕ ಉಂಟಾದ ಅವ್ಯವಸ್ಥೆಯಿಂದ ನಿವಾಸಿಗಳು ರೋಸಿಹೋಗಿದ್ದಾರೆ. ಸಾಕಷ್ಟು ಸಮಸ್ಯೆ, ನೋವು ಅನುಭವಿಸಿದ್ದರ ಕುರಿತು ಉಲ್ಲೇಖಿಸಲಾಗಿದೆ.
ಆಹಾರ ಮೇಳ ತಡೆಯಲು ಮುಂದಾಗಿಲ್ಲ
ಕಳೆದ ಐದಾರು ವರ್ಷಗಳಿಂದ ಈ ಬಗ್ಗೆ ಹಲವು ಕುಟುಂಬಗಳು ಕಳವಳ ವ್ಯಕ್ತಪಡಿಸಿದ್ದಾರೆ. ಈ ವಾರ್ಷಿಕ ಆಹಾರ ಮೇಳ ನಡೆಸದಂತೆ ಕೊನೆಗೊಳಿಸುವಂತೆ ಒತ್ತಾಯಿಸಿದ್ದಾರೆ. ಆದರೆ ಇಲ್ಲಿಯವರೆಗೆ ಯಾವುದೇ ಸಂಘಟಿತ ಪ್ರಯತ್ನ ನಡೆದಿಲ್ಲ" ಎಂದು ಫ್ರೇಸರ್ ಟೌನ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ (FTRWA) ಜಂಟಿ ಕಾರ್ಯದರ್ಶಿ ದೌಲತ್ ರಾವ್ ವಿವರಿಸಿದರು.
ಈ ಕುರಿತು ಅಭಿಯಾನ ಆರಂಭಿಸಲಾಗಿದೆ. ಅಭಿಯಾನದ ನೇತೃತ್ವ ವಹಿಸಿರುವ ಸಂಘದ ಸೌದ್ ದಸ್ತಗಿರ್ ಅವರು, ಈ ವರ್ಷದ ರಂಜಾನ್ಗೆ ಮೊದಲೇ ಜಾತ್ರೆ ನಡೆಸದಿರುವ ಕುರಿತು ಖಚಿತಪಡಿಸುವ ಸಲುವಾಗಿ ಅಭಿಯಾನ ನಡೆಸಲಾಗುತ್ತಿದೆ. ಕಳೆದ ವರ್ಷವೇ ಜಾತ್ರೆ ನಿಲ್ಲಿಸುವ ಚಳುವಳಿ ಆರಂಭವಾಗಿತ್ತು.

ಆಹಾರ ಜಾತ್ರೆಯಿಂದ ಹಾನಿಯೇ ಹೆಚ್ಚು
ಈ ಜಾತ್ರೆಯು ಒಳಿತಿಗಿಂತ ಹೆಚ್ಚು ಹಾನಿ ಉಂಟು ಮಾಡುತ್ತದೆ ಎಂದು ಆರೋಪಿಸಿದರು. ಜಾತ್ರೆ ನಡೆದರೆ ಇದು ರಸ್ತೆಗಳಲ್ಲಿ ಸಂಚಾರ ದಟ್ಟಣೆ ಏರಿಕೆ ಆಗಿ, ಉಸಿರುಗಟ್ಟಿದ ವಾತಾವರಣ ನಿರ್ಮಾಣವಾಗುತ್ತದೆ. ಅಲ್ಲದೆ ಇಲ್ಲಿ ಪ್ರದೇಶ ಕಲುಷಿತಗೊಳಿಸುತ್ತದೆ. "ಅನೈರ್ಮಲ್ಯ" ಆಹಾರ ತಯಾರಿಕೆಯಿಂದಾಗಿ ವಿಶೇಷವಾಗಿ ಮಕ್ಕಳಲ್ಲಿ ಅನಾರೋಗ್ಯ ಉಂಟಾಗಲು ಕಾರಣವಾಗುತ್ತದೆ ಎಂದು ತಿಳಿಸಿದರು.
ಈ ಅವಧಿಯಲ್ಲಿ ಅಪರಾಧಗಳು ಕೂಡ ಹೆಚ್ಚಾಗುತ್ತವೆ. ಹಿಂದಿನ ವರ್ಷ ಈ ಭಾಗದಲ್ಲಿ ಸಿಲಿಂಡರ್ ಸ್ಫೋಟಗೊಂಡಿತ್ತು. ಈ ವೇಳೆ ಜಾತ್ರೆ ಮಾರ್ಗವಾಗಿ ಆಂಬ್ಯುಲೆನ್ಸ್ಗಳ ಸಂಚಾರ ಆಗದಷ್ಟು ತೊಂದರೆ ಆಗಿತ್ತು. ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ದೂರಿದರು.
ಸ್ಥಳೀಯರಿಂದ 3,500 ಕ್ಕೂ ಹೆಚ್ಚು ಸಹಿ ಸಂಗ್ರಹ
ಆಹಾರ ಮೇಳವನ್ನು ನಡೆಸದಂತೆ ಇಲ್ಲಿನ ನಿವಾಸಿಗಳಿಂದ 3,500 ಕ್ಕೂ ಹೆಚ್ಚು ಸಹಿಗಳನ್ನು ಸಂಗ್ರಹಿಸಲಾಗಿದೆ. ನಮ್ಮ ಸಂಘವು ಜಾತ್ರೆ ಮತ್ತು ಅದಕ್ಕೆ ಸಂಬಂಧಿಸಿದ ಆಯೋಜನೆ ತಡೆಯುವ ಗುರಿ ಹೊಂದಿದೆ. ಮೇಲಿನ ಎಲ್ಲ ಅಂಶಗಳನ್ನು ಗಮನಿಸಿ ಶಾಸಕರು ಮನವಿ ಪರಿಗಣಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ ಎಂದು 'ಡಿಎಚ್' ವರದಿ ಮಾಡಿದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ












Click it and Unblock the Notifications