Lorry Strike in Karnataka: ಇಂದು ಮಧ್ಯಾಹ್ನ ತುರ್ತು ಸಭೆ: ಲಾರಿ ಮಾಲೀಕರ ಮುಷ್ಕರ ನಿಲ್ಲುತ್ತಾ...?
ಬೆಂಗಳೂರು, ಏಪ್ರಿಲ್ 15: ಕರ್ನಾಟಕದಾದ್ಯಂತ ಲಾರಿ ಮಾಲೀಕರ ಸಂಘದಿಂದ ಈಗಾಗಲೇ ಮುಷ್ಕರ ಆರಂಭವಾಗಿದೆ. ದರ ಹೆಚ್ಚಳ, ಆರ್ಥಿಕ ಹೊರೆ ವಿರುದ್ಧ 'ಕರ್ನಾಟಕ ಲಾರಿ ಮಾಲೀಕರ ಫೆಡರೇಷನ್' ವತಿಯಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಯುತ್ತಿದೆ. ಸ್ಟ್ರೈಕ್ಗೆ ರಾಜ್ಯದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಇದರ ಬೆನ್ನಲ್ಲೆ ಎಚ್ಚೆತ್ತ ರಾಜ್ಯ ಸರ್ಕಾರ ಇಂದು ಮಧ್ಯಾಹ್ನ ತುರ್ತು ಸಭೆ ಕರೆದಿದೆ.
ಹೌದು, ಲಾರಿ ಮುಷ್ಕರ ಆರಂಭವಾಗಿದ್ದು ಸಾರಿಗೆ ಸಚಿವರ ರಾಮಲಿಂಗಾ ರೆಡ್ಡಿ ಅವರು ಇಂದು ಮಂಗಳವಾರ ಏಪ್ರಿಲ್ 15 ರಂದು ಮಧ್ಯಾಹ್ನ 1.15ಕ್ಕೆ ಬೆಂಗಳೂರಿನ ಶಾಂತಿನಗರ ಟಿಟಿಎಂಸಿ ಕಚೇರಿಯಲ್ಲಿ ತುರ್ತು ಸಭೆ ಕರೆದಿದ್ದಾರೆ. ಲಾರಿ ಮಾಲೀಕರೊಂದಿಗೆ ಸಚಿವರು ಮಾತುಕತೆ ನಡೆಸಿ, ಮುಷ್ಕರ ಕೈ ಬಿಡುವಂತೆ ಮನವಿ ಮಾಡಲಿದ್ದಾರೆ. ಸರಕು, ಗೂಡ್ಸ್ ವಾಹನಗಳ ಮಾಲೀರಿಗೆ ಒಂದಷ್ಟು ಬೇಡಿಕೆ ಈಡೇರಿಗೆ ಭರವಸೆ ನೀಡಿ ಮನವೊಲಿಸುವ ಪ್ರಯತ್ನ ನಡೆಯಲಿದೆ ಎನ್ನಲಾಗಿದೆ.

ಸಚಿವ ಮನವಿ, ಭರವಸೆಗಳಿಗೆ ರಾಜ್ಯ ಲಾರಿ ಮಾಲೀಕರು ಒಪ್ಪುತ್ತಾರಾ? ಎಂದು ಕಾದು ನೋಡಬೇಕಿದೆ. ಒಪ್ಪಿದರೆ ಒಂದೇ ದಿನಕ್ಕೆ ಮುಷ್ಕರ ನಿಂತು ಎಂದಿನಂತೆ ಸರಕು ಸೇವೆ ಪೂರೈಕೆ ಲಭ್ಯವಾಗಲಿವೆ. ಇಲ್ಲವಾದಲ್ಲಿ ಪರಿಸ್ಥಿತಿ ಕಷ್ಟವಾಗಲಿದೆ. ಸರಕು ಸೇವೆ ನಿಂತು, ಪೂರೈಕೆ ಕೊರತೆಯಿಂದಾಗಿ ಅಗತ್ಯ ವಸ್ತುಗಳ ಬೆಲೆ ದಿಢೀರ್ ಏರಿಕೆ ಆಗಲಿವೆ. ಈ ಸಂಬಂಧ ರಾಜ್ಯ ಸರ್ಕಾರ ಮಧ್ಯಸ್ಥಿಕೆ ವಹಿಸಲು ಮುಂದಾಗಿದೆ.
ಸದ್ಯ ಚಾಮರಾಜನಗರ ಜಿಲ್ಲೆ ಗಡಿ ಭಾಗದಲ್ಲಿ, ಮಂಗಳೂರು, ಬಳ್ಳಾರಿ, ಹುಬ್ಬಳ್ಳಿ, ಬೆಳಗಾವಿ, ಬೆಂಗಳೂರು ಸೇರಿದಂತೆ ರಾಜ್ಯ ಮೂಲೆ ಮೂಲೆಗಳಲ್ಲಿ ಸರಕು ಮತ್ತು ಗೂಡ್ಸ್ ವಾಹನಗಳು ನಿಂತಲ್ಲೇ ನಿಂತಿವೆ. ರಸ್ತೆ ಬಸಿ, ಎಪಿಎಂಸಿ, ಶೆಡ್, ಮೈದಾನಗಳಲ್ಲಿ ಅಲ್ಲಲ್ಲಿ ಲಾರಿಗಳು ಸಂಚರಿಸದೇ ನಿಂತಲ್ಲೇ ನಿಂತಿವೆ. ತಿಂಗಳುಗಳಿಂದ ಮನವಿ ಮಾಡಿದರೂ ಖ್ಯಾರೆ ಎನ್ನದ ಸರ್ಕಾರದ ವಿರುದ್ಧ ಲಾರಿ ಮಾಲೀಕರು ಕಠಿಣ ನಿಲುವು ತಾಳಿದಂತಿದೆ. ಸಭೆ ಬಳಿಕ ಮುಂದಿನ ಅವರ ನಡೆ ಏನೆಂಬುದು ಗೊತ್ತಾಗಲಿದೆ.

-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications