ಟಿಪ್ಪು ಜಯಂತಿ: ಬಿಗಿ ಭದ್ರತೆ ಕೈಗೊಳ್ಳುವಂತೆ ರಾಮಲಿಂಗಾ ರೆಡ್ಡಿ ಸೂಚನೆ
ಬೆಂಗಳೂರು, ನವೆಂಬರ್ 08 : ವಿರೋಧದ ನಡುವೆಯೂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಟಿಪ್ಪು ಜಯಂತಿ ಆಚರಣೆಗೆ ಸಕಲ ಸಿದ್ಧತೆ ನಡೆಸಿದೆ.
ನವೆಂಬರ್ 10 ಟಿಪ್ಪು ಜಯಂತಿ ದಿದಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನಲ್ಲಿ ಬಿಗಿ ಭದ್ರತೆ ಕೈಗೊಳ್ಳಿ, ಯಾವುದೇ ಪ್ರತಿಭಟನೆಗೆ ಅವಕಾಶ ನೀಡಬೇಡಿ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಟಿಪ್ಪು ಜಯಂತಿ ಮೆರವಣಿಗೆ ಅವಕಾಶ ಕೊಡದಂತೆ ಬೆಂಗಳೂರು ನಗರದ ಎಲ್ಲಾ ವಲಯದ ಡಿಸಿಪಿಗಳಿಗೆ ಸೂಚನೆ ನೀಡಲಾಗಿದೆ. 30 ಕೆಎಸ್ ಆರ್ ಪಿ ತುಕಡಿ, 25 ಸಿಆರ್ ಬೆಟಲಿಯನ್, ಗರುಡ ಫೋರ್ಸ್ ನಿಯೋಜನೆ ಮಾಡಲಾಗಿದೆ.
ಟಿಪ್ಪು ಜಯಂತಿ ದಿನ ಸೂಕ್ಷ ಪ್ರದೇಶಗಳಲ್ಲಿ 144ಸೆಕ್ಷನ್ ಜಾರಿ ಮಾಡಲಾಗುತ್ತದೆ. ಟಿಪ್ಪು ಜಯಂತಿ ಆಚರಣೆ ಮಾಡುವವರು ಮೆರವಣಿಗೆ ಮಾಡುವಂತಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಟಿ ಸುನೀಲ್ ಕುಮಾರ್ ಹೇಳಿದ್ದಾರೆ.












Click it and Unblock the Notifications