ದೀಪಕ್ ಪ್ರಕರಣ ಎನ್ಐಎ ಗೆ ಒಪ್ಪಿಸಲು ಅಭ್ಯಂತರವಿಲ್ಲ: ರಾಮಲಿಂಗಾ ರೆಡ್ಡಿ
ಬೆಂಗಳೂರು, ಜನವರಿ 05: ಮಂಗಳೂರಿನಲ್ಲಿ ಅನ್ಯಕೋಮಿನವರಿಂದ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಕೊಲೆ ಪ್ರಕರಣವನ್ನು ಎನ್ಐಎಗೆ ವಹಿಸಲು ನಮ್ಮ ಅಭ್ಯಂತರ ಇಲ್ಲ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ತಮ್ಮ ಟ್ವಿಟರ್ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿರುವ ಗೃಹ ಸಚಿವರು 'ನಮಗೆ ಸಿಬಿಐ ಮೆಲೂ ವಿಶ್ವಾಸವಿದೆ, ಎನ್ಐಎ ಮೇಲೂ ವಿಶ್ವಾಸವಿದೆ ನಮ್ಮ ಪೊಲೀಸರ ಮೇಲೂ ನಂಬಿಕೆ ಇದೆ, ದೀಪಕ್ ರಾವ್ ಕೊಲೆ ಪ್ರಕರಣವನ್ನು ಎನ್ಐಎಗೆ ವಹಿಸಲು ನಮ್ಮ ಅಭ್ಯಂತರ ಇಲ್ಲ' ಎಂದು ಬರೆದುಕೊಂಡಿದ್ದಾರೆ.
ದೀಪಕ್ ರಾವ್ ಕೊಲೆ ಆದಾಗಿನಿಂದಲೂ ಬಿಜೆಪಿ ಮುಖಂಡರು ಕೊಲೆ ಪ್ರಕರಣವನ್ನು ಎನ್ಐಎಗೆ ವಹಿಸುವಂತೆ ಒತ್ತಾಯಿಸಿದ್ದರು, ರಾಮಲಿಂಗಾ ರೆಡ್ಡಿ ಅವರ ಈಗಿನ ಹೇಳಿಕೆ ಗಮನಿಸಿದರೆ ಪ್ರಕರಣವನ್ನು ಎನ್ಐಎ ಗೆ ವಹಿಸುವ ಸಾಧ್ಯತೆ ದಟ್ಟವಾಗಿದೆ.

ಕೇವಲ ಟ್ವಿಟರ್ ನಲ್ಲಿ ಈ ಅಭಿಪ್ರಾಯವನ್ನು ಗೃಹಸಚಿವರು ಹಂಚಿಕೊಂಡಿದ್ದು, ಅಧಿಕೃತವಾಗಿ ಈ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ.
ಕೋಮು ಸಂಘರ್ಷ ಹಾಗೂ ಹತ್ಯೆಯಂತಹ ಘಟನೆಗಳಿಗೆ ಕುಮ್ಮಕ್ಕು ನೀಡುವ ಎಲ್ಲ ಸಂಘಟನೆಗಳೂ ನಿಷೇಧವಾಗಲಿ ದೀಪಕ್ರಾವ್ ಹತ್ಯೆ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಲು ನಮಗೇನೂ ಅಭ್ಯಂತರವಿಲ್ಲ. ನಮಗೆ ಸಿಬಿಐ ಮೇಲೂ ವಿಶ್ವಾಸವಿದೆ, ಎನ್ಐಎ ಮೇಲೂ ವಿಶ್ವಾಸವಿದೆ. ನಮ್ಮ ಪೊಲೀಸರ ಮೇಲೂ ವಿಶ್ವಾಸವಿದೆ.
— Ramalinga Reddy (@RLR_BTM) January 5, 2018
- ರಾಮಲಿಂಗಾರೆಡ್ಡಿ, ಗೃಹ ಸಚಿವ#DeepakRao pic.twitter.com/DkQ3wfgRpm
ದೀಪಕ್ ರಾವ್ ಕೊಲೆಯ ನಂತರ ಪಿಎಫ್ಐ, ಎಸ್ಡಿಎಫ್ಐ ಸಂಘಟನೆಗಳ ನಿಷೇಧಕ್ಕೂ ಬಿಜೆಪಿ ಪಟ್ಟು ಹಿಡಿದಿದ್ದು, ಆ ಬಗ್ಗೆಯೂ ರಾಮಲಿಂಗಾ ರೆಡ್ಡಿ ಅವರು ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದು, ಕೋಮು ದ್ವೇಷ ಹರಡುವ ಎಲ್ಲಾ ಸಂಘಟನೆಗಳೂ ನಿಷೇಧವಾಗಬೇಕು ಎಂದಿದ್ದಾರೆ. ಈ ಮೂಲಕ ಪರೋಕ್ಷವಾಗಿ ಪಿಎಫ್ಐ, ಎಸ್ಡಿಎಫ್ಐ ಸಂಘಟನೆಗಳ ಜೊತೆಗೆ ಭಜರಂಗದಳ ಸಂಘಟನೆಯೂ ನಿಷೇಧವಾಗಲಿ ಎಂಬುದನ್ನು ಸೂಚಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
ಸ್ವಾವಲಂಬಿ ಬದುಕಿಗೆ ರಾಮಲಿಂಗಾ ರೆಡ್ಡಿ ಸಾಥ್: ಮಂಗಳಮುಖಿಯರು ಮತ್ತು ಮಹಿಳೆಯರಿಗೆ 20 EV ಆಟೋ ಭಾಗ್ಯ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್












Click it and Unblock the Notifications