ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ರಾಮಲಿಂಗಾರೆಡ್ಡಿ ಪತ್ರ!

|
Google Oneindia Kannada News

ಬೆಂಗಳೂರು, ಅ. 15: ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ಕೊರೊನಾ ವೈರಸ್ ಸಂಕಷ್ಟದ ಕಾಲದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಸತಿ, ವಾಣಿಜ್ಯ ಹಾಗೂ ಕೈಗಾರಿಕಾ ಕಟ್ಟಡಗಳ ಕಂದಾಯವನ್ನು ಶೇಕಡಾ 15 ರಿಂದ 30ರಷ್ಟು ಹೆಚ್ಚಿಸಲಾಗಿರುವ ನಿರ್ಧಾರ ಸರಿಯಲ್ಲ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

ಉದ್ಯೋಗ ಅರಸಿ ಸಾವಿರಾರು ಜ‌ನರು ಬೆಂಗಳೂರಿಗೆ ಬಂದು ನೆಲಸಿದ್ದಾರೆ. ಕೋವಿಡ್‌ನಿಂದಾಗಿ ಅವರೆಲ್ಲರ ವ್ಯಾಪಾರ ವಹಿವಾಟು ಸಂಪೂರ್ಣ ತಟಸ್ಥವಾಗಿದೆ. ವಾಣಿಜ್ಯ ಕಟ್ಟಡಗಳ ಬಾಡಿಗೆ ಕಟ್ಟಲಾಗದೇ ವ್ಯಾಪಾರಸ್ಥರು, ಖಾಸಗಿ ಕಂಪನಿಗಳು, ಅಂತಾರಾಷ್ಟ್ರೀಯ ಕಂಪನಿಗಳ ಶೋ ರೂಂಗಳು ವ್ಯಾಪಾರ ವಹಿವಾಟು ಕುಂಠಿತವಾಗಿರುವುದರಿಂದ ಬಾಡಿಗೆ ಕಟ್ಟಲಾಗದೇ ನಷ್ಠ ಅನುಭವಿಸಿ ಬಾಡಿಗೆ ಕಟ್ಟಲಾಗದೇ ಬಂದ್ ಮಾಡಿದ್ದಾರೆ. ಇಂತಹ ಸಂದರ್ಭದಲ್ಲಿ ಕಂದಾಯ ಹೆಚ್ಚಿಸಿದರೆ ಸಮಸ್ಯೆ ಆಗಲಿದೆ. ಹೀಗಾಗಿ ಈ ಹೆಚ್ಚಳದ ಪ್ರಸ್ಥಾವನೆ ಕೈಬಿಡಬೇಕು ಎಂದು ಪತ್ರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ರಾಮಲಿಂಗಾರೆಡ್ಡಿ ಒತ್ತಾಯಿಸಿದ್ದಾರೆ.

ramalinga reddy letter to yediyurappa regarding building tax increase in bbmp limits

ಬಿಬಿಎಂಪಿ ಅಕ್ರಮ ತನಿಖೆಗೆ ನಾಗರಿಕರ ಸಮಿತಿ ರಚಿಸಿ: ಎಎಪಿ

ಬೆಂಗಳೂರಿನಲ್ಲಿ ಕಟ್ಟಡಗಳ ಮಾಲೀಕರು ಬಾಡಿಗೆಯನ್ನೇ ಜೀವನಾಧಾರವಾಗಿ ಬಂದಿದ್ದಾರೆ. ಈಗ ಬಾಡಿಗೆದಾರರಿಲ್ಲದೆ, ನಿಗದಿತ ಆದಾಯವಿಲ್ಲದೆ ಬ್ಯಾಂಕ್‌ಗಳ ಕಂತು ಕಟ್ಟಲಾರದೇ ಪರಿತಪಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕಂದಾಯ ಹೆಚ್ಚಿಸುವುದನ್ನು ಮುಂದೂಡಬೇಕು. ಈ ಕುರಿತು ಸಂಬಂಧಿಸಿದವರಿಗೆ ಸೂಕ್ತ ನಿರ್ದೇಶನ ನೀಡಿ ಎಂದು ಸಿಎಂ ಯಡಿಯೂರಪ್ಪ ಅವರಿಗೆ ಬರೆದ ಪತ್ರದಲ್ಲಿ ರಾಮಲಿಂಗಾರೆಡ್ಡಿ ಒತ್ತಾಯ ಮಾಡಿದ್ದಾರೆ.

Recommended Video

Cinema Halls to Re-open : ಸಿನಿ ಪ್ರೇಕ್ಷಕರಿಗೆ ಸಿಹಿ ಸುದ್ದಿ! | Oneindia Kannada

English summary
Former minister Ramalingareddy has written a letter to chief minister B.S. Yediyurappa. In the letter he explained that the decision to increase the revenue of residential, commercial and industrial buildings in BBMP limits during the Coronavirus hardship period is not good decision. Know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X