ಶಿರಾದಲ್ಲಿ ಶಾಸಕ ಹಾಸನ ಪ್ರೀತಂ ಗೌಡ ಹಣ ಹಂಚುತ್ತಿರುವ ವಿಡಿಯೋ ಬಹಿರಂಗ!
ಬೆಂಗಳೂರು, ಅ. 28: ರಾಜ್ಯದಲ್ಲಿ ಉಪ ಚುನಾವಣೆಯ ಜಿದ್ದಾಜಿದ್ದಿ ಹೆಚ್ಚಾಗಿದ್ದು, ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಇದೆಯೋ ಇಲ್ಲವೋ ಎಂದು ಅನುಮಾನ ಮೂಡುತ್ತಿದೆ ಎಂದು ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರು ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ.
ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷದವರೂ ಚುನಾವಣೆಯಲ್ಲಿ ಸ್ಪರ್ಧೆ ಮಾಡಬಹುದು. ಕಾನೂನು ಬದ್ದವಾಗಿ ಎಲ್ಲರು ಪ್ರಚಾರ ಮಾಡುವ ಹಕ್ಕಿದೆ. ಪೊಲೀಸರು ಕೆಲಸ ಮಾಡುತ್ತಿದ್ದಾರೋ ಇಲ್ಲವೊ ಗೊತ್ತಾಗುತ್ತಿಲ್ಲ. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಪ್ರಚಾರದ ವೇಳೆ ಮಾಜಿ ಕಾರ್ಪೊರೇಟರ್ ವೆಂಕಟೇಶ ಸಿದ್ದರಾಮಯ್ಯ ಕಾರಿಗೇ ಅಡ್ಡ ಹಾಕುತ್ತಾರೆ ಅಂದರೆ ಏನು ಅರ್ಥ? ಎಂದು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮೋದಿ, ಮೋದಿ ಅಂತಾ ಕೂಗುವ ಅವಶ್ಯಕತೆ ಏನಿದೆ?. ಬಿಜೆಪಿ ಕಾರ್ಯಕ್ರಮದಲ್ಲಿ ಮೋದಿ ಅಂತಾ ಬಾಯಿಬಡ್ಕೋಳ್ಳಲಿ. ನಾವು ಬಿಜೆಪಿ ಕಾರ್ಯಕ್ರಮದಲ್ಲಿ ಹೋಗಿ ರಾಹುಲ್ ರಾಹುಲ್ ಅಂತಾ ಕೂಗಬಹುದಾ ? ಮಾಜಿ ಮುಖ್ಯಮಂತ್ರಿಗಳ ಕಾರಿಗೆ ಅಡ್ಡ ಹಾಕುತ್ತಾರಂದರೆ ಪೊಲೀಸರು ಇದ್ದಾರೋ ಇಲ್ವೋ ಗೊತ್ತಾಗುತ್ತಿಲ್ಲ ಎಂದರು.

ಶಾಂತಿಯುತವಾಗಿ ಚುನಾವಣೆ ನಡೆಸಲು ಅರೆಸೇನಾ ಪಡೆ ಕರೆಸಿದ್ದಾರೆ. ಬಿಜೆಪಿಯವರು ಬದಲಾಗಬೇಕಾಗುತ್ತದೆ. ಇಲ್ಲ ಅಂದೆರೆ, ನಾವು ಕೂಡ ಹೀಗೆ ಮಾಡಬೇಕಾಗುತ್ತದೆ. ಪೊಲೀಸ್ ಕಮಿಷನರ್ ಏನು ಮಾಡುತ್ತಿದ್ದಾರೆ? ಎಂದು ಪ್ರಶ್ನಿಸಿದರು.
ಬಿಜೆಪಿ ಶಾಸಕ ಪ್ರೀತಂ ಗೌಡ ಹಣ ಹಂಚುತ್ತಿರುವ ವಿಡಿಯೋ ಬಹಿರಂಗ: ಶಿರಾದಲ್ಲಿ ಹಾಸನ ಬಿಜೆಪಿ ಶಾಸಕ ಪ್ರೀತಂ ಗೌಡ ಹಣ ಹಂಚುತ್ತಿರುವ ವಿಡಿಯೋ ಬಹಿರಂಗಗೊಡಿದೆ. ಆದರೆ ಯಾರ ಮೇಲೂ ಕ್ರಮ ತೆಗೆದುಕೊಂಡಿಲ್ಲ. ಚುನಾವಣಾ ಆಯೋಗ ಇದೆಯೋ ಇಲ್ಲವೊ ತಿಳಿಯುತ್ತಿಲ್ಲ. ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲವೇ?

ಸಚಿವರಾದ ಅಶೋಕ, ಅಶ್ವಥ್ ನಾರಾಯಣ ಬುದ್ದಿ ಹೇಳಬೇಕು. ಮುಖ್ಯಮಂತ್ರಿ ಯಡಿಯೂರಪ್ಪ ಪ್ರಚಾರಕ್ಕೆ ಬಂದಾಗ ಕಾಂಗ್ರೆಸ್ ಕಾರ್ಯಕರ್ತರೂ ಹೀಗೆ ಅವರ ಕಾರಿಗೆ ಅಡ್ಡ ಹಾಕಬೇಕಾ ? ನಾವು ಅವರ ರೀತಿ ಕೀಳು ಮಟ್ಟದ ರಾಜಕೀಯ ಮಾಡುವುದಿಲ್ಲ. ಬಿಜೆಪಿಯವರು ಧರ್ಮ, ಜಾತಿ ಒಡೆದು ರಾಜಕಾರಣ ಮಾಡುತ್ತಾರೆ ಎಂದು ಆರೋಪಿಸಿದರು.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications