ಡಿವಿಎಸ್ ಗೆ ಸುಳ್ಳು ಹೇಳಿಕೆ ನೀಡುವುದೇ ಖಯಾಲಿ: ರಾಮಲಿಂಗಾರೆಡ್ಡಿ
ಬೆಂಗಳೂರು, ಫೆಬ್ರವರಿ 01: ಕೇಂದ್ರ ಸಚಿವ ಡಿವಿ ಸದಾನಂದಗೌಡರಿಗೆ ಚುನಾವಣೆಗಾಗಿ ಸುಳ್ಳು ಹೇಳಿಕೆ ನೀಡುವುದನ್ನೇ ಖಯಾಲಿ ಮಾಡಿಕೊಂಡಿದ್ದಾರೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ತಿರುಗೇಟು ನೀಡಿದ್ದಾರೆ.
ಬಿಜೆಪಿ ಕಾರ್ಯಕರ್ತ ಸಂತೋಷ್ ಕೊಲೆ ಕುರಿತಾಗಿ ಪಂಚ ಮುಗ್ಧರಿಗೆ ಪಂಚ ಪ್ರಶ್ನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆಗೆ ರಾಮಲಿಂಗಾರೆಡ್ಡಿ ಅವರನ್ನು ಟ್ಯಾಗ್ ಮಾಡಿ ಟ್ವಿಟ್ಟರ್ ನಲ್ಲಿ ಐದು ಪ್ರಶ್ನೆಗಳನ್ನು ಕೇಳಿದ್ದರು. ಅದರಕ್ಕೆ ಪ್ರತಿಕ್ರಿಯೆ ನೀಡಿದ ಅವರು ಸದಾನಂದ ಗೌಡ ಅವರು ಚುನಾವಣೆಗಾಗಿ ಹೇಳಿಕೆಯನ್ನು ನೀಡುವುದನ್ನು ಖಯಾಲಿ ಮಾಡಿಕೊಂಡಿದ್ದಾರೆ. ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡಿರುವುದು ಹಾಸ್ಯಾಸ್ಪದವೆನಿಸಿದೆ ಎಂದು ಬರೆದುಕೊಂಡಿದ್ದಾರೆ.
ಕೇಂದ್ರ ಸಚಿವರಾದ @DVSBJP ಚುನಾವಣೆಗಾಗಿ ರಾಜಕೀಯ ಹೇಳಿಕೆಗಳನ್ನು ನೀಡುವುದನ್ನು ಖಯಾಲಿ ಮಾಡಿಕೊಂಡಿದ್ದಾರೆ. ಹಿಂದುಕಾರ್ಯಕರ್ತರ ಕೊಲೆ ಎಂದು ಚುನಾವಣೆಗಾಗಿ ಸರ್ಕಾರದ ವಿರುದ್ದ ಸುಳ್ಳು ಆರೋಪ ಮಾಡಿರುವುದು ಹಾಸ್ಯಾಸ್ಪದ ಎನಿಸಿದೆ. pic.twitter.com/Uj0SpWc3Fv
— Ramalinga Reddy (@RLR_BTM) February 1, 2018
ಇಷ್ಟೇ ಅಲ್ಲದೆ ವಿಜಯಪುರದ ದಾನಮ್ಮ ಅವರನ್ನು ಕೊಲೆ ಮಾಡಿದ್ದು ಬಿಜೆಪಿಯ ಕಾರ್ಯಕರ್ತನಲ್ಲವೇ, ಮೂಡಿಗೆರೆಯ ಧನ್ಯಶ್ರೀ ಸಾವಿಗೆ ಕಾರಣವಾಗಿದ್ದು, ನಿಮ್ಮ ಮುಖಂಡನಲ್ಲವೇ, ಉಡುಪಿಯ ಪ್ರವೀಣ್ ಪೂಜಾರಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದು ನಿಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತನಲಲ್ವೇ ಎಂದು ಡಿವಿ ಸದಾನಂದ ಗೌಡ ಅವರನ್ನು ಪ್ರಶ್ನಿಸಿದ್ದಾರೆ.
ಬಂಟ್ವಾಳದ ಹರೀಶ ಪೂಜಾರಿ ಕೊಲೆ ಪ್ರಕರಣದಲ್ಲಿ ನಿಮ್ಮ ಸಂಘಪರಿವಾರದ ನಾಯಕ ಬಂಧನಕ್ಕೆ ಒಳಗಾಗಲಿಲ್ಲವೇ, ಮಂಗಳೂರಿಗೆ ಬೆಂಕಿ ಹಚ್ಚುವುದಾಗಿ ಹೇಳಿಕೆ ನೀಡಿ ಕಾರ್ತಿಕ್ ರಾಜ್ ಕೊಲೆ ಪ್ರಕರಣದಲ್ಲಿ ತನಿಖೆಯನ್ನು ದಾರಿ ತಪ್ಪಿಸಲು ಪ್ರಯತ್ನಿಸಿದ್ದು ನಿಮ್ಮ ಪಕ್ಷದ ಸಂಸದರಲ್ಲವೇ ಎಂದಿದ್ದಾರೆ.

ವಿನಾಯಕ ಬಾಳಿಗ ಸೇರಿದಂತೆ ಕೊಲೆಯಾದ ದಲಿತ, ಹಿಂದುಗಳ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳುವ ದೊಡ್ಡ ಮನಸ್ಸು ನಿಮಗಿಲ್ಲವೇ, ಕೊಲೆಯನ್ನು ಅಪರಾಧವಾಗಿಯೇ ನೋಡಿದ ಕಾರಣಕ್ಕಾಗಿ ಬಹುತೇಕ ಎಲ್ಲಾ ಕೊಲೆ ಪ್ರಕರಣದ ಅಪರಾಧಿಯನ್ನು ಇಂದು ಜೈಲಿಗಟ್ಟಿದೆ.
ರಾಜ್ಯಕ್ಕೆ ಬಿಜೆಪಿಯ ಬೆಂಕಿ ಹಚ್ಚುವಂತಹ ನಾಯಕರು ಬೇಕೋ ಅಥವಾ ಬೆಂಕಿ ಆರಿಸುವ ನಾಯಕರು ಬೇಕೋ ಎಂಬುದನ್ನು ಜನ ನಿರ್ಧರಿಸುತ್ತಾರೆ. ಮತ್ತೊಮ್ಮೆ ಸಿದ್ದರಾಮಯ್ಯ ಅವರ ಸರ್ಕಾರವೇ ಅಧಿಕಾರಕ್ಕೇರಲಿದೆ. ಯಾವುದೇ ಕೊಲೆ ಪ್ರಕರಣವಿರಲಿ ಅಪರಾಧಿಗಳಿಗೆ ಶಿಕ್ಷೆ ನೀಡಲು ನಮ್ಮ ಪೊಲೀಸರು ಮತ್ತು ನಮ್ಮ ಸರ್ಕಾರ ಸಶಕ್ತವಾಗಿದೆ ಎಂದಿದ್ದಾರೆ.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
Annamalai: ಅಣ್ಣಾಮಲೈ ಮತ್ತು ರಾಜಕೀಯ ಉನ್ಮಾದ: ಶಿವಕುಮಾರ್ ಮೆಣಸಿನಕಾಯಿ ಬರಹ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
By Election: ಒಬ್ಬರಿಂದ ಪಕ್ಷ ಗೆಲ್ಲಲ್ಲ, ಇದು ಕಾಂಗ್ರೆಸ್ ಸಿದ್ಧಾಂತಕ್ಕೆ ಸಿಗುವ ಜಯ: ಸಲೀಂ ಅಹ್ಮದ್ ಟಾಂಗ್ ಕೊಟ್ಟಿದ್ಯಾರಿಗೆ? -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral










Click it and Unblock the Notifications