ಡಿವಿಎಸ್ ಗೆ ಸುಳ್ಳು ಹೇಳಿಕೆ ನೀಡುವುದೇ ಖಯಾಲಿ: ರಾಮಲಿಂಗಾರೆಡ್ಡಿ
ಬೆಂಗಳೂರು, ಫೆಬ್ರವರಿ 01: ಕೇಂದ್ರ ಸಚಿವ ಡಿವಿ ಸದಾನಂದಗೌಡರಿಗೆ ಚುನಾವಣೆಗಾಗಿ ಸುಳ್ಳು ಹೇಳಿಕೆ ನೀಡುವುದನ್ನೇ ಖಯಾಲಿ ಮಾಡಿಕೊಂಡಿದ್ದಾರೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ತಿರುಗೇಟು ನೀಡಿದ್ದಾರೆ.
ಬಿಜೆಪಿ ಕಾರ್ಯಕರ್ತ ಸಂತೋಷ್ ಕೊಲೆ ಕುರಿತಾಗಿ ಪಂಚ ಮುಗ್ಧರಿಗೆ ಪಂಚ ಪ್ರಶ್ನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆಗೆ ರಾಮಲಿಂಗಾರೆಡ್ಡಿ ಅವರನ್ನು ಟ್ಯಾಗ್ ಮಾಡಿ ಟ್ವಿಟ್ಟರ್ ನಲ್ಲಿ ಐದು ಪ್ರಶ್ನೆಗಳನ್ನು ಕೇಳಿದ್ದರು. ಅದರಕ್ಕೆ ಪ್ರತಿಕ್ರಿಯೆ ನೀಡಿದ ಅವರು ಸದಾನಂದ ಗೌಡ ಅವರು ಚುನಾವಣೆಗಾಗಿ ಹೇಳಿಕೆಯನ್ನು ನೀಡುವುದನ್ನು ಖಯಾಲಿ ಮಾಡಿಕೊಂಡಿದ್ದಾರೆ. ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡಿರುವುದು ಹಾಸ್ಯಾಸ್ಪದವೆನಿಸಿದೆ ಎಂದು ಬರೆದುಕೊಂಡಿದ್ದಾರೆ.
ಕೇಂದ್ರ ಸಚಿವರಾದ @DVSBJP ಚುನಾವಣೆಗಾಗಿ ರಾಜಕೀಯ ಹೇಳಿಕೆಗಳನ್ನು ನೀಡುವುದನ್ನು ಖಯಾಲಿ ಮಾಡಿಕೊಂಡಿದ್ದಾರೆ. ಹಿಂದುಕಾರ್ಯಕರ್ತರ ಕೊಲೆ ಎಂದು ಚುನಾವಣೆಗಾಗಿ ಸರ್ಕಾರದ ವಿರುದ್ದ ಸುಳ್ಳು ಆರೋಪ ಮಾಡಿರುವುದು ಹಾಸ್ಯಾಸ್ಪದ ಎನಿಸಿದೆ. pic.twitter.com/Uj0SpWc3Fv
— Ramalinga Reddy (@RLR_BTM) February 1, 2018
ಇಷ್ಟೇ ಅಲ್ಲದೆ ವಿಜಯಪುರದ ದಾನಮ್ಮ ಅವರನ್ನು ಕೊಲೆ ಮಾಡಿದ್ದು ಬಿಜೆಪಿಯ ಕಾರ್ಯಕರ್ತನಲ್ಲವೇ, ಮೂಡಿಗೆರೆಯ ಧನ್ಯಶ್ರೀ ಸಾವಿಗೆ ಕಾರಣವಾಗಿದ್ದು, ನಿಮ್ಮ ಮುಖಂಡನಲ್ಲವೇ, ಉಡುಪಿಯ ಪ್ರವೀಣ್ ಪೂಜಾರಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದು ನಿಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತನಲಲ್ವೇ ಎಂದು ಡಿವಿ ಸದಾನಂದ ಗೌಡ ಅವರನ್ನು ಪ್ರಶ್ನಿಸಿದ್ದಾರೆ.
ಬಂಟ್ವಾಳದ ಹರೀಶ ಪೂಜಾರಿ ಕೊಲೆ ಪ್ರಕರಣದಲ್ಲಿ ನಿಮ್ಮ ಸಂಘಪರಿವಾರದ ನಾಯಕ ಬಂಧನಕ್ಕೆ ಒಳಗಾಗಲಿಲ್ಲವೇ, ಮಂಗಳೂರಿಗೆ ಬೆಂಕಿ ಹಚ್ಚುವುದಾಗಿ ಹೇಳಿಕೆ ನೀಡಿ ಕಾರ್ತಿಕ್ ರಾಜ್ ಕೊಲೆ ಪ್ರಕರಣದಲ್ಲಿ ತನಿಖೆಯನ್ನು ದಾರಿ ತಪ್ಪಿಸಲು ಪ್ರಯತ್ನಿಸಿದ್ದು ನಿಮ್ಮ ಪಕ್ಷದ ಸಂಸದರಲ್ಲವೇ ಎಂದಿದ್ದಾರೆ.

ವಿನಾಯಕ ಬಾಳಿಗ ಸೇರಿದಂತೆ ಕೊಲೆಯಾದ ದಲಿತ, ಹಿಂದುಗಳ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳುವ ದೊಡ್ಡ ಮನಸ್ಸು ನಿಮಗಿಲ್ಲವೇ, ಕೊಲೆಯನ್ನು ಅಪರಾಧವಾಗಿಯೇ ನೋಡಿದ ಕಾರಣಕ್ಕಾಗಿ ಬಹುತೇಕ ಎಲ್ಲಾ ಕೊಲೆ ಪ್ರಕರಣದ ಅಪರಾಧಿಯನ್ನು ಇಂದು ಜೈಲಿಗಟ್ಟಿದೆ.
ರಾಜ್ಯಕ್ಕೆ ಬಿಜೆಪಿಯ ಬೆಂಕಿ ಹಚ್ಚುವಂತಹ ನಾಯಕರು ಬೇಕೋ ಅಥವಾ ಬೆಂಕಿ ಆರಿಸುವ ನಾಯಕರು ಬೇಕೋ ಎಂಬುದನ್ನು ಜನ ನಿರ್ಧರಿಸುತ್ತಾರೆ. ಮತ್ತೊಮ್ಮೆ ಸಿದ್ದರಾಮಯ್ಯ ಅವರ ಸರ್ಕಾರವೇ ಅಧಿಕಾರಕ್ಕೇರಲಿದೆ. ಯಾವುದೇ ಕೊಲೆ ಪ್ರಕರಣವಿರಲಿ ಅಪರಾಧಿಗಳಿಗೆ ಶಿಕ್ಷೆ ನೀಡಲು ನಮ್ಮ ಪೊಲೀಸರು ಮತ್ತು ನಮ್ಮ ಸರ್ಕಾರ ಸಶಕ್ತವಾಗಿದೆ ಎಂದಿದ್ದಾರೆ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications