ಖಾನಾಪುರದಲ್ಲಿ ಹುಲಿ ಬಿಟ್ಟ ಪ್ರಕರಣದ ತನಿಖೆ ಇಲ್ಲ
ಬೆಂಗಳೂರು, ಜ. 7: ಬೆಳಗಾವಿಯಲ್ಲಿ ಮಹಿಳೆಯನ್ನು ಬಲಿ ತೆಗೆದುಕೊಂಡ ನರಭಕ್ಷಕ ಹುಲಿಯನ್ನು ಖಾನಾಪುರ ಅರಣ್ಯಕ್ಕೆ ಬಿಟ್ಟ ಪ್ರಕರಣದ ತನಿಖೆ ನಡೆಸಬೇಕೆಂದು ಬಿಜೆಪಿ ಹಾಗೂ ಜೆಡಿಎಸ್ ಆಗ್ರಹಿಸಿದ್ದವು. ಈ ನಿರ್ಧಾರದ ಹಿಂದೆ ರಾಜ್ಯ ಗೃಹ ಸಚಿವ ಜಾರ್ಜ್ ಅವರ ಪುತ್ರ ರಾಣಾ ಕೈವಾಡವಿದೆ ಎಂದು ಪರೋಕ್ಷವಾಗಿ ಆರೋಪಿಸಿದ್ದರು.
ಆದರೆ, ಈ ಪ್ರಕರಣದ ತನಿಖೆ ಅಗತ್ಯವಿಲ್ಲ ಎಂದು ಅರಣ್ಯ ಸಚಿವ ರಮಾನಾಥ ರೈ ಸ್ಪಷ್ಟವಾಗಿ ತಿಳಿಸಿದ್ದಾರೆ. ಅಲ್ಲದೆ, ವನ್ಯಜೀವಿ ಸಂರಕ್ಷಣಾ ಕಾಯಿದೆ ಅಡಿಯೇ ಪಿಸಿಸಿಎಫ್ ನೇತೃತ್ವದ ವರದಿ ಆಧರಿಸಿ ಹುಲಿಯನ್ನು ಕಾಡಿಗೆ ಬಿಡಲಾಗಿತ್ತು. ಈ ಕಾಯಿದೆ ಪ್ರಕಾರ ಹುಲಿ ಇನ್ನೂ ಚಿಕ್ಕ ವಯಸ್ಸಿನದಾಗಿದ್ದರೆ ಕಾಡಿಗೆ ಬಿಡಬೇಕು ಎಂದು ಸಮರ್ಥಿಸಿಕೊಂಡಿದ್ದಾರೆ. [ನರಭಕ್ಷಕ ಹುಲಿ ಕಾಡಿಗೆ ಬಿಟ್ಟಿದ್ದು ಏಕೆ?]

ಹುಲಿಗೆ ರೇಡಿಯೋ ಕಾಲರ್ ಅಳವಡಿಸಲಾಗಿತ್ತು. ಆದರೆ, ಸಿಗ್ನಲ್ ಸಿಗದ ಕಾರಣ ಈ ರೇಡಿಯೋ ಕಾಲರ್ ಕೆಲಸ ಮಾಡಲಿಲ್ಲ. ಇಲ್ಲಿ ಯಾವುದೇ ನಿಯಮದ ಉಲ್ಲಂಘನೆಯಾಗಿಲ್ಲ. ಆದ್ದರಿಂದ ತನಿಖೆಯೂ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. [ಚಿಕ್ಕಮಗಳೂರು ಹುಲಿಗೆ ಬೆಳಗಾವಿಯಲ್ಲೂ ಮಹಿಳೆ ಬಲಿ]
ರಾಣಾ ಜಾರ್ಜ್ ಕೈವಾಡವಿಲ್ಲ : ನರಭಕ್ಷಕ ಹುಲಿಯನ್ನು ಖಾನಾಪುರ ಅರಣ್ಯದೊಳಗೆ ಬಿಡುವಲ್ಲಿ ಗೃಹ ಸಚಿವರ ಪುತ್ರ ರಾಣಾ ಜಾರ್ಜ್ ಕೈವಾಡವಿದೆ ಎಂಬ ಆರೋಪದಲ್ಲಿ ಹುರುಳಿಲ್ಲ. ಅವರು ವನ್ಯಜೀವಿ ಸಲಹಾ ಮಂಡಳಿ ಸದಸ್ಯರು. ಆದ್ದರಿಂದ ಅರಣ್ಯ ಪ್ರದೇಶಕ್ಕೆ ಹೋಗುವುದು ಸಹಜ ಎಂದು ಸಮರ್ಥಿಸಿಕೊಂಡರು. [ನರಭಕ್ಷಕ ಹುಲಿ ಗುಂಡೇಟಿಗೆ ಬಲಿ]
ಖಾನಾಪುರ ಅರಣ್ಯದಲ್ಲಿ ಮತ್ತೊಂದು ಹುಲಿ ಇದೆ ಎಂಬ ವಿಷಯ ಇನ್ನೂ ದೃಢಪಟ್ಟಿಲ್ಲ ಎಂದು ರಮಾನಾಥ ರೈ ತಿಳಿಸಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications