ಆಪ್ತ ರಮೇಶ್ ಆತ್ಮಹತ್ಯೆ ಬಗ್ಗೆ ಪರಮೇಶ್ವರ್ ಪ್ರತಿಕ್ರಿಯೆ
ಬೆಂಗಳೂರು, ಅಕ್ಟೋಬರ್ 12: ತಮ್ಮ ಬಹು ಕಾಲದ ಆಪ್ತ ಸಹಾಯಕ ರಮೇಶ್ ಸಾವಿನ ಬಗ್ಗೆ ಕಾಂಗ್ರೆಸ್ ಶಾಸಕ, ಮಾಜಿ ಡಿಸಿಎಂ ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿದ್ದು, ಸಾವಿನ ಬಗ್ಗೆ ಧಿಗ್ಬ್ರಮೆ ವ್ಯಕ್ತಪಡಿಸಿದ್ದಾರೆ.
ಮಾಧ್ಯಮದವರೊಂದಿಗೆ ಈ ಬಗ್ಗೆ ಚುಟುಕಾಗಿ ಮಾತನಾಡಿರುವ ಪರಮೇಶ್ವರ್, 'ರಮೇಶ್ ಸಾವು ಆಘಾತ ತಂದಿದೆ, ಆತ ಯಾವುದೇ ಪರಿಸ್ಥಿತಿಯಲ್ಲಿಯೂ ಚತುರತೆಯಿಂದ ಕೆಲಸ ಮಾಡುವ ಛಾತಿ ಉಳ್ಳವನಾಗಿದ್ದ' ಎಂದು ಹೇಳಿದ್ದಾರೆ.
'ಕೆಪಿಸಿಸಿ ಅಧ್ಯಕ್ಷನಾಗಿದ್ದಾಗಿನಿಂದಲೂ ನಾನು ಆತನನ್ನು ಜೊತೆಗೆ ಇಟ್ಟುಕೊಂಡಿದ್ದೆ, ಬಹಳ ಒಳ್ಳೆಯ ಹುಡುಗ ಆತ, ಯಾವ ಕಾರಣಕ್ಕೆ ಈ ನಿರ್ಣಯ ಕೈಗೊಂಡಿದ್ದಾನೆ ಗೊತ್ತಿಲ್ಲ' ಎಂದು ಪರಮೇಶ್ವರ್ ಹೇಳಿದರು.

'ನಿನ್ನೆ ರಾತ್ರಿ ರಮೇಶ, ಕೇಶವ ಎಲ್ಲ ನಮ್ಮ ಜೊತೆಗೆ ಮನೆಯಲ್ಲಿದ್ದರು, ಐಟಿ ಅಧಿಕಾರಿಗಳಿಗೆ ಸಹಾಯ ಮಾಡುತ್ತಾ, ಅವರ ಪ್ರಶ್ನೆಗಳಿಗೆ ಉತ್ತರಿಸುತ್ತಾ ಇದ್ದ, ಬೆಳಿಗ್ಗೆ ಮನೆಯಿಂದ ಹೋದ' ಎಂದು ಪರಮೇಶ್ವರ್ ಹೇಳಿದ್ದಾರೆ.
'ಐಟಿ ಅಧಿಕಾರಿಗಳು ಕಿರುಕುಳ ನೀಡಿದ್ದಾರವೋ ಇಲ್ಲವೋ ಗೊತ್ತಿಲ್ಲ, ಬೆಳಿಗ್ಗೆ ಮನೆಯಿಂದ ಹೊರಡುವಾಗ ನಾನೇ ಆತನಿಗೆ ಧೈರ್ಯ ಹೇಳಿದ್ದೆ, ಇದೆಲ್ಲವೂ ಸಾಮಾನ್ಯ ಧೈರ್ಯವಾಗಿರುವಂತೆ ತಿಳಿಸಿದ್ದೆ' ಎಂದು ಪರಮೇಶ್ವರ್ ಹೇಳಿದರು.
ರಮೇಶ್ ಆತ್ಮಹತ್ಯೆ ಮಾಡಿಕೊಂಡ ಸ್ಥಳಕ್ಕೆ ಹೋಗುವ ಧಾವಂತದಲ್ಲಿದ್ದ ಪರಮೇಶ್ವರ್ ಪತ್ರಕರ್ತರ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲು ಸಾಧ್ಯವಾಗಲಿಲ್ಲ.
ಕಳೆದ ಎಂಟು ವರ್ಷಗಳಿಂದಲೂ ಪರಮೇಶ್ವರ್ ಅವರಿಗೆ ಆಪ್ತ ಸಹಾಯಕನಾಗಿ ರಮೇಶ್ ಕೆಲಸ ಮಾಡಿದ್ದರು. ಕೆಪಿಸಿಸಿ ಕಚೇರಿಯಲ್ಲಿ ಟೈಪಿಸ್ಟ್ ಆಗಿದ್ದ ಅವರನ್ನು ಪರಮೇಶ್ವರ್ ತನ್ನ ಆಪ್ತ ಸಹಾಯಕನಾಗಿ ನೇಮಿಸಿಕೊಂಡಿದ್ದರು. ಪರಮೇಶ್ವರ್ ಅವರ ವ್ಯವಹಾರಗಳನ್ನು ಅವರು ನೋಡಿಕೊಳ್ಳುತ್ತಿದ್ದರು ಎನ್ನಲಾಗಿದೆ.
-
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
April 7 Horoscope: ಸ್ಪರ್ಧೆಯಲ್ಲಿ ಜಯ ಮತ್ತು ಹೊಸ ಉದ್ಯೋಗ ಅವಕಾಶಗಳು -
Job Resignation: ಇರೋ ಕೆಲಸಕ್ಕೆ ರಾಜೀನಾಮೆ ಕೊಡುವ ಮೊದಲು ಕೇಳಿಕೊಳ್ಳಬೇಕಾದ 17 ಪ್ರಶ್ನೆಗಳಿವು -
KSRTC: ಕನಕಪುರ-ಬೆಂಗಳೂರು ಬಸ್ ಪ್ರಯಾಣಿಕರಿಗೆ ಶುಭ ಸುದ್ದಿ, 20 ವರ್ಷದ ಬಳಿಕ 4 ಬಸ್ ಸಂಚಾರ -
ಪತಿ ವಿಜಯ್ ದೇವರಕೊಂಡ ಜೊತೆ ಮೊದಲ ಬಾರಿಗೆ ತವರಿಗೆ ಬಂದ ರಶ್ಮಿಕಾ: ತಂದೆಯಿಂದ ಐಷಾರಾಮಿ ಬಂಗಲೆ ಉಡುಗೊರೆ












Click it and Unblock the Notifications