ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಸಿಡಿ ಶಂಕಿತರು ಎಸ್ಐಟಿ ವಿಚಾರಣೆಗೆ ಹಾಜರು!
ಬೆಂಗಳೂರು, ಜೂ. 12: ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಸ್ಫೋಟ ಪ್ರಕರಣದಲ್ಲಿ ಅಜ್ಞಾತವಾಸಕ್ಕೆ ತೆರಳಿದ್ದ ಶಂಕಿತ ಆರೋಪಿಗಳಿಬ್ಬರು ನಿರೀಕ್ಷಣಾ ಜಾಮೀನು ಬಳಿಕ ಶನಿವಾರ ಬೆಳಗ್ಗೆ ವಿಶೇಷ ತನಿಖಾ ತಂಡದ ಎದುರು ಹಾಜರಾಗಿದ್ದಾರೆ. ತಮ್ಮ ವಕೀಲರ ಮೂಲಕ ಭೇಟಿ ಮಾಡಿರುವ ಇಬ್ಬರು ಶಂಕಿತರನ್ನು ಆಡುಗೋಡಿ ಟೆಕ್ನಿಕಲ್ ಸೆಂಟರ್ ನಲ್ಲಿ ಪ್ರತ್ಯೇಕವಾಗಿ ವಿಚಾರಣೆಗೆ ಒಳಪಡಿಸಿ ಮಾಹಿತಿ ಸಂಗ್ರಹಿಸಿದ್ದಾರೆ.
60 ಪ್ರಶ್ನೆ ತಯಾರಿ : ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣ ಸಂಬಂಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ಬ್ಲಾಕ್ ಮೇಲ್, ಬೆದರಿಕೆ ಪ್ರಕರಣ ಸಂಬಂಧ ವಿಚಾರಣೆ ಎದುರಿಸಲಿದ್ದಾರೆ. ಸಿಡಿ ಸ್ಫೋಟಗೊಂಡ ಬಳಿಕ ಕಣ್ಮರೆಯಾಗಿದ್ದ ಶಂಕಿತರು ಪೊಲೀಸರ ಕೈಗೆ ಸಿಕ್ಕಿರಲಿಲ್ಲ. ಸಂತ್ರಸ್ತ ಯುವತಿ ಸರಣಿ ವಿಡಿಯೋ ಬಿಡುಗಡೆ ಮಾಡಿದ್ದಳು. ಇದರ ಬೆನ್ನಲ್ಲೇ ಸಂತ್ರಸ್ತ ಯುವತಿಯ ಪೋಷಕರು ಅಪಹರಣ ದೂರು ದಾಖಲಿಸಿದರು.ಇದರ ಬೆನ್ನಲ್ಲೇ ಶಂಕಿತರು ಕೂಡ ಬಿಡಗಡೆಯಾಗಿದ್ದರು.
ಇವರಿಬ್ಬರ ಜತೆಗೆ ಉದ್ಯಮಿ ಶಿವಕುಮಾರ್ ಮತ್ತು ಆತನ ಕಾರು ಚಾಲಕ ಜಾಡು ಹಿಡಿದು ಶೋಧ ನಡೆಸಿದರೂ ಪತ್ತೆಯಾಗಿರಲಿಲ್ಲ. ಮೂರು ತಿಂಗಳ ಬಳಿಕ ನ್ಯಾಯಾಲಯ ನಿರೀಕ್ಷಣಾ ಜಾಮೀನು ದೊರೆತ ಬೆನ್ನಲ್ಲೇ ಇಬ್ಬರ ಶಂಕಿತರು ಎಸ್ಐಟಿ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ. ಸುಮಾರು 60 ಪ್ರಶ್ನೆಗಳನ್ನು ಸಿದ್ಧಪಡಿಸಿರುವ ಎಸ್ಐಟಿ ಅಧಿಕಾರಿಗಳು ಶನಿವಾರ ಪ್ರಾಥಮಿಕ ಮಾಹಿತಿ ಸಂಗ್ರಹಿಸಿ ಹೇಳಿಕೆ ದಾಖಲಿಸಲಿದ್ದಾರೆ. ಆನಂತರ ಇಬ್ಬರನ್ನು ಪ್ರತ್ಯೇಕವಾಗಿ ವಿಚಾರಣೆಗೆ ಒಳಪಡಿಸಲು ತೀರ್ಮಾನಿಸಿದ್ದಾರೆ.
ರಮೇಶ್ ಜಾರಕಿಹೊಳಿ ಉದ್ಯೋಗದ ಅಮಿಷೆ ಒಡ್ಡಿ ಯುವತಿಗೆ ಮೋಸ ಮಾಡಿದ್ದರು. ಸಹಾಯ ಕೋರಿ ನನ್ನ ನೆರವಿಗೆ ಬಂದಿದ್ದಳು. ಹೀಗಾಗಿ ನಾವು ನೆರವು ಮಾಡಿದ್ದೆವು ಎಂದು ಈ ಹಿಂದೆ ಶಂಕಿತ ಆರೋಪಿಗಳು ಬಿಡುಗಡೆ ಮಾಡಿದ್ದ ವಿಡಿಯೋದಲ್ಲಿ ಉಲ್ಲೇಖಿಸಿದ್ದರು.

ಇದೀಗ ಸಂತ್ರಸ್ತ ಯುವತಿ ನ್ಯಾಯಾಲಯದ ಮುಂದೆ ಹಾಜರಾಗಿ ಸ್ವಯಂ ಹೇಳಿಕೆ ದಾಖಲಿಸಿದರೂ ಶಂಕಿತರು ವಾಪಸು ಬಂದಿರಲಿಲ್ಲ. ಮಾ. 2 ರಿಂದ ಈವರೆಗೂ ನಡೆದ ಬೆಳವಣಿಗೆ ಆಧರಿಸಿ ಎಸ್ಐಟಿ ಅಧಿಕಾರಿಗಳು ಪ್ರಶ್ನಾವಳಿಯನ್ನು ಸಿದ್ಧತೆ ಮಾಡಿಕೊಂಡಿದ್ದಾರೆ. ಅನಾಮಿಕರ ವಿರುದ್ಧ ಬ್ಲಾಕ್ ಮೇಲ್ ದೂರು ದಾಖಲಿಸಿದ್ದ ರಮೇಶ್ ಜಾರಕಿಹೊಳಿ ವಿಚಾರಣೆ ವೇಳೆ ತಾನು ದೂರುದಾರ ಯುವತಿಯ ಜತೆ ಸಮ್ಮತಿ ಸೆಕ್ಸ್ ನಡೆಸಿದ್ದಾಗಿ ಹೇಳಿಕೆ ನೀಡಿದ್ದರು. ಬಳಿಕ ಬ್ಲಾಕ್ ಮೇಲ್ ಹಾಗೂ ಬೆದರಿಕೆ ಕುರಿತು ತನ್ನ ಹೇಳಿಕೆಯಲ್ಲಿ ವಿವರಿಸಿದ್ದರು.
ಈ ಮೂಲಕ ಇಡೀ ಸಿಡಿ ಸ್ಪೋಟ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿತ್ತು. ಇದೀಗ ಇಬ್ಬರು ಶಂಕಿತರು ಸಹ ನ್ಯಾಯಾಲಯದ ಷರತ್ತು ಅನ್ವಯ ವಿಚಾರಣೆಗೆ ಹಾಜರಾಗಿದ್ದು, ಇದೀಗ ಪ್ರಕರಣದ ಅಸಲಿ ಸತ್ಯಾಂಶ ಹೊರಗೆ ಬೀಳಲಿದೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications