ರಮೇಶ್ ಜಾರಕಿಹೊಳಿ ದೂರು ಆಧರಿಸಿ ದಾಖಲಿಸಿರುವ ಎಫ್ಐಆರ್ನಲ್ಲಿ ಏನಿದೆ?
ಬೆಂಗಳೂರು, ಮಾ. 14: 'ಸಿಡಿ' ಬಿಡುಗಡೆಯಾದ 12 ದಿನಗಳ ನಂತರ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ದೂರು ಕೊಟ್ಟಿದ್ದಾರೆ. ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಗೆ ಆಪ್ತನ ಮೂಲಕ ರಮೇಶ್ ಜಾರಕಿಹೊಳಿ ಅವರು ದೂರು ಸಲ್ಲಿಸಿದ್ದಾರೆ. ರಮೇಶ್ ಜಾರಕಿಹೊಳಿ ಅವರು ದೂರು ಸಲ್ಲಿಸುತ್ತಿದ್ದಂತೆಯೆ ಸಂತ್ರಸ್ತ ಯುವತಿ ಸಾಮಾಜಿಕ ಜಾಲತಾಣದಲ್ಲಿ ತನ್ನ ಅಳಲು ತೋಡಿಕೊಂಡಿದ್ದಾರೆ.
ಈ ಮಧ್ಯೆ ಎಸ್ಐಟಿ ತನಿಖೆಗೆ ಸಹಾಯಕವಾಗುವಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ದೂರು ದಾಖಲಿಸಿದ್ದಾರೆ. ತಮ್ಮ ಆಪ್ತ, ಮಾಜಿ ಶಾಸಕ ನಾಗರಾಜ್ ಅವರ ಮೂಲಕ ದೂರು ಸಲ್ಲಿಸಿದ್ದಾರೆ. ರಮೇಶ್ ಜಾರಕಿಹೊಳಿ ಅವರ ದೂರು ಆಧರಿಸಿ ಸದಾಶಿವನಗರ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಇದೀಗ ಎಫ್ಐಆರ್ ಬೆಂಗಳೂರು ಪೊಲೀಸ್ ಆಯುಕ್ತರ ಮೂಲಕ ಎಸ್ಐಟಿಗೆ ಹಸ್ತಾಂತರವಾಗಿದೆ.
ಇಡೀ ದೇಶದ ಗಮನ ಸೆಳೆದಿರುವ 'ಸಿಡಿ' ಬಿಡುಗಡೆ ಕುರಿತ ದೂರಿನಲ್ಲಿ ರಮೇಶ್ ಜಾರಕಿಹೊಳಿ ಏನು ಉಲ್ಲೇಖಿಸಿದ್ದಾರೆ? ಅವರ ದೂರು ಆಧರಿಸಿ ಪೊಲೀಸರು ಹಾಕಿರುವ ಎಫ್ಐಆರ್ನಲ್ಲಿ ಯಾವ ಯಾವ ಸೆಕ್ಷನ್ ಹಾಕಿದ್ದಾರೆ? ಈ ಎಲ್ಲ ಮಾಹಿತಿ ಇಲ್ಲಿದೆ.

ಅಪರಿಚಿತ ವ್ಯಕ್ತಿಗಳ ವಿರುದ್ಧ ದೂರು
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು 'ಸಿಡಿ' ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ದೂರು ದಾಖಲಿಸಿದ್ದಾರೆ. ಹೆಸರು ಸಹಿತ ದೂರು ದಾಖಲಿಸುತ್ತೇನೆ ಎಂದಿದ್ದ ರಮೇಶ್ ಜಾರಕಿಹೊಳಿ ಅವರು ಇದೀಗ ಅಪರಿಚಿತ ವ್ಯಕ್ತಿಗಳ ವಿರುದ್ಧ ದೂರು ಕೊಟ್ಟಿದ್ದಾರೆ.

'ಸಿಡಿ' ಪ್ರಕರಣದ ಎಫ್ಐಆರ್ನಲ್ಲಿ ಏನಿದೆ?
ನನ್ನ ವಿರುದ್ಧ ತೇಜೋವಧೆ ಮಾಡಲು, ರಾಜಕೀಯವಾಗಿ ಮುಗಿಸಲು ಹಾಗೂ ಹಣ ವಸೂಲಿ ಮಾಡಲು ಷಡ್ಯಂತ್ರವನ್ನು ರೂಪಿಸಲಾಗಿದೆ. ಸುಮಾರು ಮೂರು ತಿಂಗಳುಗಳಿಂದ ಸದಾಶಿವನಗರದಲ್ಲಿ ನನ್ನ ವಿರುದ್ಧ ಮಸಲತ್ತು ಹಾಗೂ ಮೋಸ ಮಾಡಿ ನಕಲಿ 'ಸಿಡಿ' ಸೃಷ್ಟಿ ಮಾಡಿದ್ದಾರೆ.
ನಕಲಿ ಸಿಡಿ ಸೃಷ್ಟಿಸಿ ನನಗೆ ಮಾನಸಿಕ ಹಿಂಸೆಯನ್ನು ಮಾಡಿ ರಾಜಕೀಯವಾಗಿ ಮಾನಹಾನಿ ಮಾಡಿ ನನ್ನಿಂದ ಹಣ ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.

ರಾಜಕೀಯ ಅಸ್ಥಿರತೆಗೆ ಪ್ರಯತ್ನ
ಈ ಪ್ರಕರಣದ ಹಿಂದೆ ಹಲವಾರು ಜನರಿದ್ದಾರೆ. ಕೆಲವರು ಷಡ್ಯಂತ್ರ ಮಾಡಿ, ಇನ್ನೂ ಕೆಲವರು ನಕಲಿ ಸಿಡಿ ತಯಾರಿಸಲು ಭಾಗಿಯಾಗಿದ್ದಾರೆ. ಜೊತೆಗೆ ಮತ್ತಿತರರನ್ನು ಬಳಸಿಕೊಂಡು ಅಂತರ್ಜಾಲ ವಾಹಿನಿಯಲ್ಲಿ ಬಿಡುಗಡೆ ಮಾಡಿ ರಾಜಕೀಯ ಅಸ್ಥಿರತೆಯನ್ನು ಉಂಟು ಮಾಡಲು ಪ್ರಯತ್ನಿಸುತ್ತಿದ್ದಾರೆ. ಈ ಬಗ್ಗೆ ಕಾನೂನು ಕ್ರಮವನ್ನು ದಾಖಲಿಸುವಂತೆ ಕೊಟ್ಟ ದೂರು ಎಂದು ನಮೂದಿಸಲಾಗಿದೆ.

ಯಾವ ಯಾವ ಸೆಕ್ಷನ್ಗಳನ್ನು ಹಾಕಲಾಗಿದೆ?
ರಮೇಶ್ ಜಾರಕಿಹೊಳಿ ಅವರು ಕೊಟ್ಟಿರುವ ದೂರು ಆಧರಿಸಿ ಸದ್ಯಕ್ಕೆ ಐಪಿಸಿ ಸೆಕ್ಷನ್ 34, 120B, 385, 465 ಹಾಗೂ 469 ಅಡಿ ಪ್ರಕರಣ ದಾಖಲಿಸಲಾಗಿದೆ. ಸೆಕ್ಷನ್ 34ರ ಪ್ರಕಾರ ಅಪರಾಧ ಉದ್ದೇಶ, 120B ಪಿತೂರಿ ಒಳಸಂಚು, 385 ತೇಜೋವಧೆ ಮಾಡಲು ಒಳಸಂಚು ರೂಪಿಸುವುದು, 465 ನಕಲಿ ದಾಖಲೆಗಗಳ ಸೃಷ್ಟಿ ಹಾಗೂ 469 ಕೂಡ ಸೆಕ್ಷನ್ 465ಕ್ಕೆ ಪೂರಕವಾಗಿ ತನಿಖೆ ನಡೆಸಲು ಪೊಲೀಸರಿಗೆ ಸಹಾಯವಾಗಲಿವೆ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications