ಮಹದಾಯಿ ತೀರ್ಪು: ದೆಹಲಿಗೆ ತೆರಳಲಿರುವ ರಮೇಶ್ ಜಾರಕಿಹೊಳಿ
ಬೆಂಗಳೂರು, ಫೆಬ್ರವರಿ 25: ನ್ಯಾಯಾಧಿಕರಣವು ಮಹದಾಯಿ ಹಂಚಿಕೆ ಸಂಬಂಧ ತೀರ್ಪು ನೀಡಿರುವ ಬೆನ್ನಲ್ಲೆ ಜಲಸಂಪನ್ಮೂಲ ಸಚಿವ ಈ ಕುರಿತು ಕೇಂದ್ರ ಸಚಿವರೊಂದಿಗೆ ಚರ್ಚಿಸಲು ದೆಹಲಿಗೆ ತೆರಳುತ್ತಿದ್ದಾರೆ.
ನಾಳೆ ದೆಹಲಿಗೆ ತೆರಳಲಿರುವ ರಮೇಶ್ ಜಾರಕಿಹೊಳಿ ಕೇಂದ್ರ ಜಲಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ಮಹದಾಯಿ ಕುರಿತ ನ್ಯಾಯಾಧಿಕರಣದ ಐತೀರ್ಪಿನ ಗೆಜೆಟ್ ನೋಟಿಫಿಕೇಶನ್ ಹೊರಡಿಸುವಂತೆ ಮನವಿ ಸಲ್ಲಿಸಲಿದ್ದಾರೆ.
ಅದೇ ದಿನ ಮಹದಾಯಿ ವಿವಾದ ಕುರಿತು ಸುಪ್ರೀಂಕೋರ್ಟ್ನಲ್ಲಿ ವಾದ ಮಂಡಿಸುತ್ತಿರುವ ವಕೀಲರನ್ನು ಸಹ ರಮೇಶ್ ಜಾರಕಿಹೊಳಿ ಭೇಟಿ ಮಾಡಿದ್ದಾರೆ.

ರಮೇಶ್ ಜಾರಕಿಹೊಳಿ ತಮ್ಮ ಸ್ನೇಹಿತ ಮಹೇಶ್ ಕುಮಟಳ್ಳಿ ಅವರಿಗೆ ಸಚಿವ ಸ್ಥಾನ ಕೊಡದೇ ಇರುವ ಬಗ್ಗೆ ಅಸಮಾಧಾನಗೊಂಡಿದ್ದಾರೆ. ಮಹೇಶ್ ಕುಮಟಳ್ಳಿಗೆ ಸಚಿವ ಸ್ಥಾನ ನೀಡದಿದ್ದರೆ ರಾಜೀನಾಮೆ ನೀಡುವುದಾಗಿಯೂ 'ಬೆದರಿಕೆ' ಹಾಕಿದ್ದಾರೆ ಎನ್ನಲಾಗಿದೆ.












Click it and Unblock the Notifications