'ಶಾಸಕ ರಮೇಶ್ ಕುಮಾರ್ ಭೂ ಅತಿಕ್ರಮಣ ನಿಜ'
ಬೆಂಗಳೂರು, ಮೇ 22: ಭೂ ಅತಿಕ್ರಮಣ ಹಗರಣದಲ್ಲಿ ಸಿಲುಕಿಕೊಂಡು ನಾನಾ ಪಡಿಪಾಟಲು ಪಡುತ್ತಿರುವ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ರಮೇಶ್ ಕುಮಾರ್ ಅವರಿಗೆ ಸದ್ಯಕ್ಕೆ ಕಂಟಕದಿಂದ ಬಚಾವಾಗುವ ಮಾರ್ಗ ಇಲ್ಲವಾಗಿದೆ.
'ಶ್ರೀನಿವಾಸಪುರದ ಶಾಸಕ ರಮೇಶ್ ಕುಮಾರ್ ಅವರು ಭೂ ಅತಿಕ್ರಮಣ ಮಾಡಿರುವುದು ನಿಜ. ಈ ಹಿಂದೆಯೂ ನಾನು ಇದನ್ನೇ ಹೇಳಿದ್ದೇನೆ. ಇದಕ್ಕೆ ನೀವು ಏನು ಶಿಕ್ಷೆ ಕೊಟ್ಟರೂ ಪರವಾಗಿಲ್ಲ. ಆದರೆ ಈಗಲೂ ನನ್ನ ಮಾತಿಗೆ ಬದ್ಧನಾಗಿದ್ದೇನೆ' ಎಂದು ಮಾಜಿ ಹೆಚ್ಚುವರಿ ಮುಖ್ಯಕಾರ್ಯದರ್ಶಿ ವಿ ಬಾಲಸುಬ್ರಮಣ್ಯಂ ಹೇಳಿದ್ದಾರೆ. ಇದರಿಂದ ಶಾಸಕ ರಮೇಶ್ ಕುಮಾರ್ ಭೂ ಅತಿಕ್ರಮಣದ ವಿರುದ್ಧ ಸಾಮಾಜಿಕ ಕಾರ್ಯಕರ್ತ ಎಸ್ಆರ್ ಹಿರೇಮಠ್ ಅವರು ನಡೆಸುತ್ತಿರುವ ಹೋರಾಟಕ್ಕೆ ಆನೆಬಲ ಬಂದಂತಾಗಿದೆ.
ನಿನ್ನೆ ಬುಧವಾರ ವಿಧಾನಸೌಧದಲ್ಲಿ ಹಕ್ಕುಬಾಧ್ಯತಾ ಸಮಿತಿಯೆದುರು ಹಾಜರಾದ ಮಾಜಿ ಹೆಚ್ಚುವರಿ ಮುಖ್ಯಕಾರ್ಯದರ್ಶಿ ವಿ ಬಾಲಸುಬ್ರಮಣ್ಯಂ ಅವರು ಮೇಲಿನ ಹೇಳಿಕೆ ನೀಡಿದ್ದು, ನಾನು ರಮೇಶ್ ಕುಮಾರ್ ಅವರ ಬಳಿ ಕ್ಷಮಾಪಣೆ ಕೇಳುವ ಪ್ರಶ್ನೆಯೇ ಇಲ್ಲ. ಅಥವಾ ನನ್ನ ಹಿಂದಿನ ನಿಲುವನ್ನು ಬದಲಿಸಿಕೊಳ್ಳುವ ಪ್ರಮೇಯವೂ ಇಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ. (ಹಕ್ಕುಚ್ಯುತಿ: ನನಗ್ಯಾವ ಹೆದರಿಕೆಯೂ ಇಲ್ಲ- ಹಿರೇಮಠ್)

'ರಮೇಶ್ ಕುಮಾರ್ ಅವರಂತಹ ವ್ಯಕ್ತಿಗಳು ಭಾರಿ ಪ್ರಮಾಣದಲ್ಲಿ ಭೂ ಅತಿಕ್ರಮಣ ನಡೆಸಿದ್ದಾರೆ. ಇಂತಹವರಿಗೆ ಯಾವುದೇ ಶಾಸಕಾಂಗ ಸಮಿತಿಗಳಲ್ಲಿ ಸ್ಥಾನ ನೀಡಬಾರದು' ಎಂದು ಬಾಲಸುಬ್ರಮಣ್ಯಂ ಅವರು ಪತ್ರಿಕೆಯೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ಹೇಳಿದ್ದರು. ಇದರಿಂದ ಕೆಂಡಾಮಂಡಲಗೊಂಡ ಶಾಸಕ ರಮೇಶ್ ಕುಮಾರ್ ಅವರು, ಬಾಲಸುಬ್ರಮಣ್ಯಂ ಅವರು ನನ್ನ ಹೆಸರಿಗೆ ಕಳಂಕ ತರುತ್ತಿದ್ದಾರೆ. ಶಾಸಕನಾಗಿ ಕೆಲಸ ಮಾಡಲು ನನ್ನ ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಬಾಲಸುಬ್ರಮಣ್ಯಂ ಅವರಿಂದ ಹಕ್ಕುಚ್ಯುತಿ ಮಾಡಿದಂತಾಗಿದೆ' ಎಂದು ಸ್ಪೀಕರ್ ಗೆ ಅಲವತ್ತುಕೊಂಡಿದ್ದರು.
ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಪ್ರಕರಣವನ್ನು ಸದನ ಸಮಿತಿಗೆ ಒಪ್ಪಿಸಿದ್ದರು. 'ಭೂ ಅತಿಕ್ರಮಣಕಾರರಿಂದ ಸರಕಾರಿ ಜಮೀನನ್ನು ವಾಪಸ್ ಪಡೆಯುವ ಸಂಬಂಧ ನೇಮಿಸಲಾಗಿದ್ದ ಕಾರ್ಯಪಡೆಯ ಅಧ್ಯಕ್ಷನಾಗಿ ರಮೇಶ್ ಕುಮಾರ್ ಅವರಿಂದ ನಡದಿರುವ ಅತಿಕ್ರಮಣದ ಉದ್ದ ಅಗಲಗಳು ತನ್ನ ಸ್ಮೃತಿಯಲ್ಲಿ ಅಚ್ಚೊತ್ತಿವೆ. ಹಾಗಾಗಿ ನಾನು ನಿಜವನ್ನೇ ಹೇಳಿದ್ದೇನೆ. ನನ್ನ ವರದಿಯಲ್ಲೂ ಇದನ್ನು ದಾಖಲಿಸಿರುವೆ' ಎಂದು ಬಾಲಸುಬ್ರಮಣ್ಯಂ ಅವರು ಸಮಿತಿಯೆದರು ಸ್ಪಷ್ಟಪಡಿಸಿದ್ದಾರೆ.
ಸಮಿತಿಯ ಅಧ್ಯಕ್ಷ ಕೆಬಿ ಕೋಳಿವಾಡ್ ಮತ್ತು ಇತರ ಸದಸ್ಯರಾದ ಡಿಜಿ ಶಾಂತನಗೌಡ, ಸಿ ಪುಟ್ಟರಂಗ ಶೆಟ್ಟಿ ಮತ್ತು ನಿ ಮಂಜುನಾಥ್ ಅವರು ನಿನ್ನೆ ವಿಚಾರಣೆ ವೇಳೆ ಹಾಜರಿದ್ದರು. ಬಾಲಸುಬ್ರಮಣ್ಯಂ ಪರ ವಕೀಲ ವಿ ಧನಂಜಯ್ ಅವರೂ ಸಹ ಉಪಸ್ಥಿತರಿದ್ದರು. ಸಮಿತಿಯು ವಿಚಾರಣೆಯನ್ನು ಮುಂದೂಡಿದೆ. (ಚಿತ್ರ ಕೃಪೆ: ದಿ ಹಿಂದೂ)
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications