Rameshwaram Cafe blast: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಮೊದಲ ಬಂಧನ
ಬೆಂಗಳೂರು, ಮಾರ್ಚ್ 13: ಬೆಂಗಳೂರು ರಾಮೇಶ್ವರಂ ಕೆಫೆ ಐಇಡಿ ಸ್ಫೋಟ ಪ್ರಕರಣದ ಪ್ರಮುಖ ಶಂಕಿತನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬಂಧಿಸಿದೆ ಎಂದು ವರದಿಯಾಗಿದೆ. ಎನ್ಐಎ ಮೂಲಗಳನ್ನು ಉಲ್ಲೇಖಿಸಿ ಇಂಡಿಯಾ ಟುಡೇ ವರದಿ ಮಾಡಿದ್ದು, ಶಂಕಿತ ಆರೋಪಿಯನ್ನು ಶಬ್ಬೀರ್ ಎಂದು ಗುರುತಿಸಲಾಗಿದ್ದು, ಬಳ್ಳಾರಿ ಜಿಲ್ಲೆಯಿಂದ ವಶಕ್ಕೆ ಪಡೆಯಲಾಗಿದೆ ಎಂದು ವರದಿ ಮಾಡಿದೆ.
ಎನ್ಐಎ ಅಧಿಕಾರಿಗಳು ಶಂಕಿತನನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಸ್ಫೋಟದ ಸ್ಥಳಕ್ಕೆ ಎನ್ಐಎ ತಂಡ ಭೇಟಿ ನೀಡಿದ ನಂತರ ಪ್ರಕರಣವನ್ನು ಮಾರ್ಚ್ 3 ರಂದು ಎನ್ಐಎಗೆ ಹಸ್ತಾಂತರಿಸಲಾಯಿತು. ಈ ತಿಂಗಳ ಆರಂಭದಲ್ಲಿ ನಗರದ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಸಂಭವಿಸಿ 10 ಮಂದಿ ಗಾಯಗೊಂಡಿದ್ದರು.

ಆರೋಪಿ ಶಬ್ಬೀರ್ ಸ್ಫೋಟದ ದಿನದಂದು ಕೆಫೆಯ ಬಳಿಯ ಭದ್ರತಾ ಕ್ಯಾಮೆರಾದ ದೃಶ್ಯಾವಳಿಗಳಲ್ಲಿ ಕಂಡುಬಂದ ಪ್ರಮುಖ ಶಂಕಿತನ ಸಹಚರ ಎನ್ನಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬಾಂಬರ್ನ ಮಾಹಿತಿ ನೀಡುವವರಿಗೆ 10 ಲಕ್ಷ ಬಹುಮಾನ
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ ಬಾಂಬರ್ನ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಘೋಷಿಸಿದೆ. ಮಾಹಿತಿದಾರರ ಗುರುತಿನ ಗೌಪ್ಯತೆಯನ್ನು ಕಾಪಾಡಿಕೊಳ್ಳಲಾಗುವುದು ಎಂದು ಸಂಸ್ಥೆ ಪ್ರತಿಪಾದಿಸಿದೆ.
ಬೆಂಗಳೂರಿನ ಜನಪ್ರಿಯ ಉಪಹಾರ ಗೃಹವಾದ ರಾಮೇಶ್ವರಂ ಕೆಫೆಯಲ್ಲಿ ಬ್ಯಾಗ್ ಇಟ್ಟ ವ್ಯಕ್ತಿಯನ್ನು ಸಿಸಿಟಿವಿ ಕ್ಯಾಮೆರಾ ದೃಶ್ಯಗಳಿಂದ ಸೆರೆಹಿಡಿದ ಬಾಂಬರ್ನ ಚಿತ್ರವನ್ನು ಸಹ ಸಂಸ್ಥೆ ಬಿಡುಗಡೆ ಮಾಡಿದೆ. ಎನ್ಐಎ ಬಿಡುಗಡೆ ಮಾಡಿರುವ ಚಿತ್ರದಲ್ಲಿ ಬಾಂಬರ್ ಕ್ಯಾಪ್, ಕಪ್ಪು ಪ್ಯಾಂಟ್ ಮತ್ತು ಕಪ್ಪು ಬೂಟುಗಳನ್ನು ಧರಿಸಿರುವುದು ಕಂಡುಬಂದಿದೆ.
"ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಬಾಂಬ್ ದಾಳಿ ನಡೆಸಿದವರ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ರೂಪಾಯಿ ನಗದು ಬಹುಮಾನ ನೀಡುವುದಾಗಿ ಎನ್ಐಎ ಘೋಷಿಸಿದೆ. ಮಾಹಿತಿದಾರರ ಗುರುತನ್ನು ಗೌಪ್ಯವಾಗಿಡಲಾಗುವುದು" ಎಂದು ಟ್ವಿಟ್ಟರ್ ಪೋಸ್ಟ್ನಲ್ಲಿ ಎನ್ಐಎ ತಿಳಿಸಿದೆ.
ಮಾರ್ಚ್ 1 ರಂದು ಮಧ್ಯಾಹ್ನ ಜನಜಂಗುಳಿ ಜಾಸ್ತಿ ಇರುವ ಸಮಯದಲ್ಲಿಯೇ ಸ್ಫೋಟ ಸಂಭವಿಸಿದ್ದು, ಪೊಲೀಸರು ಕೆಫೆಯೊಳಗೆ ಬ್ಯಾಗ್ ಇಟ್ಟುಕೊಂಡು ಸಿಸಿಟಿವಿ ಕ್ಯಾಮೆರಾ ದೃಶ್ಯಗಳಲ್ಲಿ ಸೆರೆ ಸಿಕ್ಕ ಶಂಕಿತನನ್ನು ಪತ್ತೆ ಹಚ್ಚಿದ್ದಾರೆ. ಸ್ಫೋಟವನ್ನು ನಡೆಸಲು ಟೈಮರ್ ಹೊಂದಿದ್ದ ಐಇಡಿ ಸಾಧನವನ್ನು ಬಳಸಲಾಗಿದೆ ಎಂದು ಪೊಲೀಸ್ ತನಿಖೆ ಸೂಚಿಸಿದೆ.
-
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್












Click it and Unblock the Notifications