Bengaluru Rameshwaram Cafe Blast Case: ತೀರ್ಥಹಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತ ಎನ್ಐಎ ವಶಕ್ಕೆ
ಬೆಂಗಳೂರು, ಏಪ್ರಿಲ್, 05: ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಬಳಿಕ ಆರೋಪಿಗಾಗಿ ಪೊಲೀಸರು ತಲೆಕೆಡಿಸಿಕೊಂಡು ಶೋಧಕಾರ್ಯ ಕೈಗೊಂಡಿದ್ದು, ಮತ್ತೊಂದೆಡೆ ಎನ್ಐಎ ಆರೋಪಿಯನ್ನು ಹುಡುಕಿಕೊಟ್ಟವರಿಗೆ ನಗದು ಬಹುಮಾನವನ್ನು ಕೊಡುವುದಾಗಿ ಘೋಷಣೆಯನ್ನೂ ಮಾಡಿತ್ತು. ಇದೀಗ ಇಂದು ಈ ಪ್ರಕರಣ ಸಂಬಂಧ ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತನನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇಂದು ತೀರ್ಥಹಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತ ಸಾಯಿಪ್ರಸಾದ್ ಎಂಬ ಯುವಕನನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಹಿಂದಿನ ವಾರ ತೀರ್ಥಹಳ್ಳಿಯಲ್ಲಿ ಇಬ್ಬರು ಮುಸ್ಲಿಂ ಯುವಕರ ಮನೆ ಮತ್ತು ಮೊಬೈಲ್ ಅಂಗಡಿ ಮೇಲೆ ದಾಳಿ ನಡೆಸಿ ಎನ್ಐಎ ಶೋಧಕಾರ್ಯ ನಡೆಸಿದ್ದು, ಈ ವೇಳೆ ಇಬ್ಬರು ಮುಸ್ಲಿಂ ಯುವಕರ ಜೊತೆ ಸಾಯಿ ಪ್ರಸಾದ್ ಸಂಪರ್ಕದಲ್ಲಿದ್ದ ಎನ್ನುವ ಮಾಹಿತಿಯನ್ನು ತಿಳಿದುಬಂದಿದ್ದು, ಈ ಹಿನ್ನೆಲೆ ಆತನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ ಎನ್ನಲಾಗಿದೆ.
"ಸೈಲೆಂಟ್" ಶೋಧಕಾರ್ಯ: ಈ ಸಂಬಂಧ ಕೆಲವು ದಿನಗಳ ಹಿಂದೆಯೇ ಎನ್ಐಎ ತೀರ್ಥಹಳ್ಳಿಯಲ್ಲಿ ಹಲವು ಮನೆ ಹಾಗೂ ಅಂಗಡಿಗಳ ಮೇಲೆ ಸೈಲೆಂಟ್ ಆಗಿ ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಳ್ಳುವ ಕೆಲಸವನ್ನು ಮಾಡಿತ್ತು. ಇದೀಗ ತೀರ್ಥಹಳ್ಳಿಯಲ್ಲಿ ಬಿಜೆಪಿಯ ಕಾರ್ಯಕರ್ತನನ್ನು ಎನ್ಐಎ ವಿಚಾರಣೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಇನ್ನೂ ಹೆಚ್ಚಿನ ಮಾಹಿತಿಗಾಗಿ ಕಾದುನೋಡಬೇಕಿದೆ.
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಲೆ. ಅದರಲ್ಲೂ ಎನ್ಐಎ ಸೈಲೆಂಟ್ ಆಗಿ ಶೋಧಕಾರ್ಯಕ್ಕೆ ಮುಂದಾಗಿದ್ದು, ಆರೋಪಿಯನ್ನು ಪತ್ತೆಹಚ್ಚುವ ಕೆಲಸವನ್ನು ಮಾಡುತ್ತಿದೆ. ಒಟ್ಟಿನಲ್ಲಿ ಶತಾಯಗತಾಯ ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳಬೇಕು ಎಂಬುದೇ ಗುರಿಯಾಗಿದೆ.
ದಿನೇಶ್ ಗುಂಡೂರಾವ್ ಹೇಳಿದ್ದೇನು?: ಇನ್ನು ಈ ಬಗ್ಗೆ ಟ್ವೀಟ್ನಲ್ಲಿ ಪ್ರತಿಕ್ರಿಯಿಸಿದ ಸಚಿವ ದಿನೇಶ್ ಗುಂಡೂರಾವ್ ಅವರು, "ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಮುಖಂಡ ಸಾಯಿಪ್ರಸಾದ್ನನ್ನು ರಾಷ್ಟ್ರೀಯ ತನಿಖಾ ದಳದವರು ವಶಕ್ಕೆ ಪಡೆದಿದ್ದಾರೆ. ಸ್ಫೋಟಕ್ಕೆ ನಮ್ಮ ಸರ್ಕಾರವೇ ಕಾರಣ ಅನ್ನೋವಂತೆ ಮಾತಾನಾಡುತ್ತಿದ್ದ ರಾಜ್ಯದ ಕೇಸರಿ ಕಲಿಗಳು ಈಗ ಏನು ಹೇಳುತ್ತಾರೆ?," ಎಂದು ಪ್ರಶ್ನಿಸಿದ್ದಾರೆ.
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಮುಖಂಡ ಸಾಯಿಪ್ರಸಾದ್ನನ್ನು ರಾಷ್ಟ್ರೀಯ ತನಿಖಾ ದಳದವರು ವಶಕ್ಕೆ ಪಡೆದಿದ್ದಾರೆ.
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) April 5, 2024
ಸ್ಫೋಟಕ್ಕೆ ನಮ್ಮ ಸರ್ಕಾರವೇ ಕಾರಣ ಅನ್ನೋವಂತೆ ಮಾತಾನಾಡುತ್ತಿದ್ದ ರಾಜ್ಯದ ಕೇಸರಿ ಕಲಿಗಳು ಈಗ ಏನು ಹೇಳುತ್ತಾರೆ? ಬಿಜೆಪಿ ಮುಖಂಡನನ್ನು NIA ವಶಕ್ಕೆ ಪಡೆದಿದೆ ಎಂದ ಮೇಲೆ… pic.twitter.com/gygIPjGuBK
ಬಿಜೆಪಿ ಮುಖಂಡನನ್ನು NIA ವಶಕ್ಕೆ ಪಡೆದಿದೆ ಎಂದ ಮೇಲೆ ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಬಿಜೆಪಿ ಕೈವಾಡ ಇದೆ ಎಂದು ಅರ್ಥಅಲ್ಲವೇ? ಧರ್ಮ ರಕ್ಷಣೆ ಹೆಸರಿನಲ್ಲಿ ರಾಜ್ಯದಲ್ಲಿ ಬಿಜೆಪಿ ನಡೆಸುತ್ತೀರುವ ಕೇಸರಿ ಭಯೋತ್ಪಾದನೆ ಎಷ್ಟು ಗಂಭೀರ ಸಮಸ್ಯೆಗಳನ್ನು ಹುಟ್ಟು ಹಾಕುತ್ತಿದೆ ಅನ್ನೋದಕ್ಕೆ ಇದಕ್ಕಿಂತಾ ಸಾಕ್ಷಿ ಬೇಕಾ? ಆರ್ಎಸ್ಎಸ್ ಸಿದ್ಧಾಂತಗಳನ್ನು ದೇಶದ ಮೇಲೆ ಹೇರುತ್ತಿರುವ ಕೇಂದ್ರ ಬಿಜೆಪಿಯು ಇದಕ್ಕೇನು ಹೇಳುತ್ತದೆ? ಎಂದು ಪ್ರಶ್ನಿಸಿದ್ದಾರೆ.
ರಾಷ್ಟ್ರದ ಭದ್ರತೆ ವಿಚಾರವನ್ನೂ ಲೆಕ್ಕಿಸದೇ ರಾಮೇಶ್ವರಂ ಬಾಂಬ್ ಸ್ಫೋಟ ಪ್ರಕರಣವನ್ನು ಕಾಂಗ್ರೆಸ್ ಸರ್ಕಾರದ ಮೇಲೆ ಹೊರೆಸಿದ ರಾಜ್ಯ ಬಿಜೆಪಿ ನಾಯಕರು ಈಗ ಉತ್ತರ ನೀಡಲೇಬೇಕು ಎಂದರು.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers












Click it and Unblock the Notifications