Get Updates
Get notified of breaking news, exclusive insights, and must-see stories!

Rameswaram Cafe Blast: ಬಿಎಂಟಿಸಿ ವೋಲ್ವೋ ಬಸ್‌ನಲ್ಲಿ ಶಂಕಿತ ವ್ಯಕ್ತಿ ಪ್ರಯಾಣ, ಬೆಂಗಳೂರಿನ ಈ ಪ್ರಮುಖ ಸ್ಥಳಗಳಲ್ಲಿ ಹೈ ಅಲರ್ಟ್

ಬೆಂಗಳೂರು, ಮಾರ್ಚ್‌, 02: ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣ ಕ್ಷಣ ಕ್ಷಣಕ್ಕೂ ತಿರುವು ಪಡೆದುಕೊಳ್ಳುತ್ತಲಿದೆ. ಇನ್ನೂ ಇದೀಗ ಈ ಪ್ರಕರಣದ ಶಂಕಿತ ಆರೋಪಿ ಬಿಎಂಟಿಸಿ ವೋಲ್ವೋ ಬಸ್‌ನಲ್ಲಿ ಪ್ರಯಾಣ ಮಾಡಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದ್ದು, ಬೆಂಗಳೂರಿನ ಮೆಜೆಸ್ಟಿಕ್‌, ರೈಲ್ವೆ ನಿಲ್ದಾಣ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಪರಿಶೀಲನೆ ಕಾರ್ಯಕ್ಕೆ ಮುಂದಾಗಿದ್ದಾರೆ.

ಶಂಕಿತ ಆರೋಪಿಯು ಕಾಮಾಕ್ಯದ 13ನೇ ಡಿಪೋಗೆ ಸೇರಿದ ರೂಟ್‌ ನಂಬರ್‌ 500CC ಕೆಎ-57-ಎಫ್‌-186 ಬಿಎಂಟಿಸಿ ವೋಲ್ವೋ ಬಸ್‌ನಲ್ಲಿ ಪ್ರಯಾಣಿಸಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದ್ದು, ಪೊಲೀಸರು ಈ ಬಗ್ಗೆ ಪರಿಶೀಲನೆ ಮುಂದುವರೆಸಿದ್ದಾರೆ. ಮತ್ತೊಂದೆಡೆ ಈ ಪ್ರಕರಣದ ಬೆನ್ನಲ್ಲೇ ಅಲರ್ಟ್ ಆಗಿರುವ ಪೊಲೀಸರು ಬೆಂಗಳೂರಿನ ಮೆಜೆಸ್ಟಿಕ್‌ನ ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ರೈಲ್ವೆ ನಿಲ್ದಾಣಗಳಲ್ಲಿ ಪರಿಶೀಲನೆ ಕಾರ್ಯವನ್ನು ಮುಂದುವರೆಸಿದ್ದಾರೆ.

Rameswaram Cafe Blast Suspect Accused traveling in BMTC Volvo bus high alert in Bengaluru

ಪೊಲೀಸರು ಬೆಂಗಳೂರು ನಗರದ ಬಿಎಂಟಿಸಿ ಮತ್ತು ರೈಲು ನಿಲ್ದಾಣಗಳಲ್ಲಿ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ. ಅಲ್ಲದೆ ರಾಜ್ಯದ ಎಲ್ಲಾ ಬಸ್‌ ಮತ್ತು ರೈಲು ನಿಲ್ದಾಣಗಳಲ್ಲೂ ನಿಗಾವಹಿಸಲು ಸೂಚನೆ ನೀಡಲಾಗಿದೆ. ರೈಲು ನಿಲ್ದಾಣಗಳಲ್ಲಿ ಭದ್ರತೆಗೆ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೂ ಭದ್ರತೆ ಹೆಚ್ಚಿಸಲಾಗಿದೆ. ಟರ್ಮಿನಲ್ ಆವರಣಗಳಲ್ಲಿ ಕ್ಯಾಬ್ ಮತ್ತು ಪ್ರಯಾಣಿಕರನ್ನು ಕರೆದೊಯ್ಯುವ ಇತರ ವಾಹನಗಳ ಕಾಯುವಿಕೆ ಅವಧಿಯನ್ನು ಕಡಿಮೆ ಮಾಡಲಾಗಿದೆ. ವಿಮಾನ ನಿಲ್ದಾಣ ಮಾತ್ರವಲ್ಲದೆ, ಪ್ರಮುಖ ಪ್ರದೇಶಗಳಲ್ಲಿಯೂ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ತಿಂಗಳಿಗೆ ₹4.5 ಕೋಟಿ ಆದಾಯ: ಬೆಂಗಳೂರಿನ ಹೆಚ್‌ಎಎಲ್‌ ಬಳಿಯ ರಾಮೇಶ್ವರಂ ಕೆಫೆಯು ತಿಂಗಳಿಗೆ ₹4.5 ಕೋಟಿ, ವಾರ್ಷಿಕವಾಗಿ ₹50 ಕೋಟಿಗೂ ಹೆಚ್ಚು ಆದಾಯವನ್ನು ಗಳಿಸುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದರೆ ಇದು ಹೇಗೆ ಹಾಗೂ ಇಷ್ಟು ದೊಡ್ಡ ಮಟ್ಟದ ಆದಾಯ ಗಳಿಸುವ ಮಟ್ಟಕ್ಕೆ ಬೆಳೆಯಲು ಹೇಗೆ ಸಾಧ್ಯ ಎನ್ನುವ ಇಂಚಿಂಚು ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಬೆಂಗಳೂರಿನಲ್ಲಿರುವ ರಾಮೇಶ್ವರಂ ಕೆಫೆಯನ್ನು ಇಂಟರ್ನೆಟ್ ಬಳಕೆದಾರರು ಹೇಗೆ ಪ್ರಾರಂಭಿಸಿದರು ಮತ್ತು ಅದರ ಖ್ಯಾತಿಯ ಪ್ರಯಾಣದ ವಿವರಗಳನ್ನು ಹಂಚಿಕೊಂಡ ನಂತರ ಮತ್ತೆ ಸುದ್ದಿಯಲ್ಲಿದೆ. ಆದರೆ ಎಲ್ಲಕ್ಕಿಂತ ಮುಖ್ಯವಾಗಿ ಸಾಮಾಜಿಕ ಜಾಲತಾಣ ಬಳಕೆದಾರರ ಕಣ್ಣಿಗೆ ಬಿದ್ದದ್ದು ಅದರ ಮಾಸಿಕ ಗಳಿಕೆ!

ಈ ರೆಸ್ಟೋರೆಂಟ್ ತಿಂಗಳಿಗೆ ₹4.5 ಕೋಟಿ, ವಾರ್ಷಿಕವಾಗಿ ₹50 ಕೋಟಿಗೂ ಹೆಚ್ಚು ಆದಾಯವನ್ನು ಗಳಿಸುತ್ತದೆ. ಬೆಂಗಳೂರಿನ ಗ್ರಾಹಕರ ಬೇಡಿಕೆಗೆ ತಕ್ಕಂತೆ ಆಹಾರವನ್ನು "ರಾಮೇಶ್ವರಂ ಕೆಫೆ" ನೀಡುತ್ತದೆ. ಇನ್ನು ಇದನ್ನು ಪ್ರಾರಂಭಿಸಿದ ಸಿಎ ಮತ್ತು ಫುಟ್ ಕಾರ್ಟ್ ಮಾಲೀಕರ ಬಗ್ಗೆ ಇಲ್ಲಿ ತಿಳಿಯಿರಿ. ಈ ರಾಮೇಶ್ವರಂ ಕೆಫೆಯು ಪ್ರತಿ ತಿಂಗಳು ₹4.5 ಕೋಟಿ ಆದಾಯ ಗಳಿಸುತ್ತಿದೆ ಎಂದು ಬಳಕೆದಾರ, ಸೇಜಲ್ ಸುದ್ ಎನ್ನುವವರು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಈ ರೆಸ್ಟೋರೆಂಟ್‌ ತುಪ್ಪದ ಪೋಡಿ ಇಡ್ಲಿ ಮತ್ತು ಮಸಾಲೆ ದೋಸೆ ಸೇರಿದಂತೆ ದಕ್ಷಿಣ ಭಾರತದ ಸಾಂಪ್ರದಾಯಿಕ ಉಪಹಾರಕ್ಕಾಗಿ ಹೆಸರುವಾಸಿಯಾಗಿದೆ. ಇದರ ಸಂಸ್ಥಾಪಕರಾದ ದಿವ್ಯಾ ಮತ್ತು ರಾಘವೇಂದ್ರ ರಾವ್ ಅವರು ಪರಸ್ಪರ ಸ್ನೇಹಿತರ ಮೂಲಕ ಭೇಟಿಯಾಗಿ 2021ರಲ್ಲಿ ಇಂದಿರಾನಗರದಲ್ಲಿ ರೆಸ್ಟೋರೆಂಟ್‌ನ ಮೊದಲ ಶಾಖೆಯನ್ನು ಪ್ರಾರಂಭಿಸಿದರು.

ದಿವ್ಯಾ ಅವರು ಐಐಎಂ ಅಹಮದಾಬಾದ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದರು ಸಿಎ ಆಗಿದ್ದರು. ಇನ್ನು ರಾಘವೇಂದ್ರ ಅವರು ಶೇಷಾದ್ರಿಪುರಂನಲ್ಲಿ ಆಹಾರ ಕಾರ್ಟ್‌ನಿಂದ ದೋಸೆ ಮತ್ತು ಇಡ್ಲಿಗಳನ್ನು ಬಡಿಸುತ್ತಾ 15 ವರ್ಷಗಳಿಂದ ಆಹಾರ ಉದ್ಯಮದಲ್ಲಿ ಕೆಲಸ ಮಾಡುತ್ತಿದ್ದರು.

ಈ ರೆಸ್ಟೋರೆಂಟ್‌ನ ಪ್ರಾರಂಭ ಮತ್ತು ವಿಸ್ತರಣೆಯ ಕುರಿತು ಈ ಟ್ವೀಟ್‌ನಲ್ಲಿ ಮಾಹಿತಿ ನೀಡಿದ್ದಾರೆ. ಇವರು ಉತ್ತಮ ಆಹಾರಗಳನ್ನು ನೀಡುವ ಮೂಲಕ ಜನರ ಹೃದಯಗಳನ್ನು ಗೆದ್ದಿದ್ದಾರೆ. ಅಲ್ಲದೆ, 200ಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡುವ ಮೂಲಕ ಗಮನ ಸೆಳೆದಿದ್ದಾರೆ.

"ಇನ್ನು ಬೆಂಗಳೂರಿನಲ್ಲಿ ಹೆಚ್ಚಿನ ಮಳಿಗೆಗಳನ್ನು ತೆರೆದಿದ್ದಾರೆ ಮತ್ತು ಭಾರತ, ವಿದೇಶಗಳಲ್ಲಿನ ಇತರ ನಗರಗಳಲ್ಲೂ ಮಳಿಗೆಗಳನ್ನು ತೆರೆಯಲು ಯೋಜನೆ ರೂಪಿಸಿದ್ದಾರೆ. ಇದರ ಸಂಸ್ಥಾಪಕರು ತಮ್ಮ ಬ್ರ್ಯಾಂಡ್ ಅನ್ನು ಜಾಗತಿಕ ಉಪಸ್ಥಿತಿಯೊಂದಿಗೆ ಫ್ರಾಂಚೈಸ್ ಮಾಡುವ ದೊಡ್ಡ ಗುರಿಯನ್ನು ಹೊಂದಿದ್ದಾರೆ. ಅವರು ಹೆಚ್ಚು ಹೊಸ ಮತ್ತು ಆರೋಗ್ಯಕರ ಭಕ್ಷ್ಯಗಳನ್ನು ಪರಿಚಯಿಸುವ ಗುರಿಯನ್ನು ಹೊಂದಿದ್ದಾರೆ" ಎಂದು ಸುದ್ ಅವರು ತಮ್ಮ ಟ್ವಿಟರ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

"ರಾಮೇಶ್ವರಂ ಕೆಫೆಯು ಆಹಾರದ ಮೇಲಿನ ಉತ್ಸಾಹ, ಶ್ರೇಷ್ಠತೆಯ ದೃಷ್ಟಿ ಮತ್ತು ವಿಶ್ವಾಸದ ಪಾಲುದಾರಿಕೆಯು ಲಕ್ಷಾಂತರ ಜನರ ಹೃದಯವನ್ನು ಗೆದ್ದಿದ್ದಾರೆ. ಮತ್ತು ಗಮನಾರ್ಹ ಬ್ರ್ಯಾಂಡ್ ಅನ್ನು ಹೇಗೆ ರಚಿಸಬಹುದು ಎಂಬುದಕ್ಕೆ ಒಂದು ಉಜ್ವಲ ಉದಾಹರಣೆಯಾಗಿದೆ" ಎಂದು ಅವರು ತಮ್ಮ ಕೊನೆಯ ಪೋಸ್ಟ್‌ನಲ್ಲಿ ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+