ಕ್ಯಾಬಿನೆಟ್ ಗೆ ರಮ್ಯಾ ಸೇರಿದರೆ, ಬಂಡಾಯದ ಬೆಂಕಿಗೆ ತುಪ್ಪ ಸುರಿದಂತೆ ಸರ್ವಜ್ಞ!
ಬೆಂಗಳೂರು, ಜೂನ್ 23 : ಸಚಿವ ಸಂಪುಟದ ವಿಸ್ತರಣೆ ನಂತರವೂ ಸಿದ್ದರಾಮಯ್ಯ ಅವರ ಸಂಕಟದ ದಿನಗಳು ಕೊನೆಗೊಂಡಿಲ್ಲ. 14 ಜನ ಸಚಿವರನ್ನು ಕೈಬಿಟ್ಟು 13 ಜನರನ್ನು ಸಂಪುಟಕ್ಕೆ ಸೇರಿಸಿಕೊಂಡ ಸಿದ್ದರಾಮಯ್ಯ ಅವರಿಗೆ ಬಾಕಿ ಉಳಿದ ಒಂದು ಸ್ಥಾನವೆ ಮುಳುವಾಗಬಹುದು ಅಥವಾ ಕೈ ಹಿಡಿಯ ಬಹುದು. ಈ ನಡುವೆ ರಮ್ಯಾ ಅವರು ಕ್ಯಾಬಿನೆಟ್ ಸೇರ್ಪಡೆ ಸಾಧ್ಯವಿಲ್ಲ, ಸೇರಿದರೆ ಕಾಂಗ್ರೆಸ್ ನಿರ್ಮಾಣವಾಗಲಿದೆ ಎಂಬ ಸುದ್ದಿ ಬಂದಿದೆ.
ಒಂದೆಡೆ ಬಂಡಾಯ ಶಮನಕ್ಕೆ ಯತ್ನ ನಡೆದಿದೆ. ಇನ್ನೊಂದೆಡೆ ಬಾಕಿ ಉಳಿದ ಒಂದು ಸ್ಥಾನವನ್ನು ತುಂಬಲು ಲಾಬಿ ಸಾಗಿದೆ. ಯಾರನ್ನು ಸಂಪುಟಕ್ಕೆ ಸೇರಿಸಿಕೊಳ್ಳುತ್ತಾರೆ? ಎಂಬ ಕುತೂಹಲ ಎಲ್ಲರಲ್ಲೂ ಇದೆ. [ರಾಜಕೀಯ ಪತನ: ಅಂಬರೀಶ್ ಗೆ ಮುಳುವಾದ 5 ಅಂಶಗಳು]

ರಮ್ಯಾ ಅವರನ್ನು ಮಂಡ್ಯ ಕ್ಷೇತ್ರದ ಪ್ರತಿನಿಧಿಯಾಗಿ ಅಂಬರೀಶ್ ಅವರ ಬದಲಿಗೆ ಸೇರಿಸಿಕೊಳ್ಳಲು ಹೈಕಮಾಂಡ್ ನಿರ್ಧರಿಸಿದೆ. ಒಕ್ಕಲಿಗ ಸಮುದಾಯದ ಯುವ ನೇತಾರರಾಗಿ ರಮ್ಯಾ ಅವರನ್ನು ಬೆಳೆಸಬೇಕಿದೆ. ಹೀಗಾಗಿ ಅವರನ್ನು ಶೀಘ್ರದಲ್ಲೇ ಎಂ ಎಲ್ಸಿ ಸ್ಥಾನಕ್ಕೇರಿಸಿ, ಸಂಪುಟಕ್ಕೆ ಸೇರಿಸಿಕೊಳ್ಳಲಾಗುವುದು ಎಂಬ ಮಾತುಗಳು ಕೇಳಿ ಬಂದಿತ್ತು.[ಪಾಪ ರಮ್ಯಾಗೆ ಏನು ತಿಳಿದಿಲ್ಲ, ಅವಳನ್ನು ದೂಷಿಸಬೇಡಿ: ಅಂಬರೀಶ್]
ಆದರೆ, ಕಾಂಗ್ರೆಸ್ ಪಕ್ಷದ ಮೂಲಗಳು ಒನ್ ಇಂಡಿಯಾ ಪ್ರತಿನಿಧಿಗೆ ತಿಳಿಸಿದಂತೆ, 14ನೇ ಸ್ಥಾನವನ್ನು ಸದ್ಯಕ್ಕೆ ಖಾಲಿ ಇರಿಸಿಕೊಳ್ಳಲಾಗುವುದು, ರಮ್ಯಾ ಅವರ ಸೇರ್ಪಡೆ ಬಗ್ಗೆ ಯಾವುದೇ ಸೂಚನೆ ಬಂದಿಲ್ಲ. ಸದ್ಯಕ್ಕೆ ಬಂಡಾಯ ಶಮನಗೊಳಿಸುವತ್ತ ಗಮನಹರಿಸಲಾಗುತ್ತದೆ.[ಸಿದ್ದರಾಮಯ್ಯ ಸಂಪುಟ ಸೇರಲಿದ್ದಾರೆ ರಮ್ಯಾ?]
ಒಂದು ವೇಳೆ ಭಿನ್ನಮತ ಉಲ್ಬಣಗೊಂಡು ಸರ್ಕಾರಕ್ಕೆ ಹಾನಿಯಾಗುವ ಸಾಧ್ಯತೆ ಕಂಡು ಬಂದರೆ, ಅತೃಪ್ತರಲ್ಲಿ ಒಬ್ಬರನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳುವ ಮೂಲಕ ತಾತ್ಕಾಲಿಕ ಪರಿಹಾರ ಕಂಡುಕೊಳ್ಳುವಂತೆ ಸೂಚಿಸಲಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications