ರಂಗಶಂಕರದಲ್ಲಿ ದ.ರಾ ಬೇಂದ್ರೆ ನೆನಪಲ್ಲಿ 'ರಂಗ ಯುಗಾದಿ'
ಬೆಂಗಳೂರು, ಏಪ್ರಿಲ್ 02: ಕಳೆದ ಹತ್ತು ವರ್ಷಗಳಿಂದ ರಂಗಶಂಕರದಲ್ಲಿ 'ರಂಗಯುಗಾದಿ'ಯನ್ನು ಆಚರಿಸಲಾಗುತ್ತದೆ. ಈ ಬಾರಿ ಏಪ್ರಿಲ್ 03ರಂದು (ಭಾನುವಾರ) ಕನ್ನಡದ ವರಕವಿ ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಅವರ ನೆನಪಿನಲ್ಲಿ ರಂಗಯುಗಾದಿಯನ್ನು ಹಮ್ಮಿಕೊಳ್ಳಲಾಗಿದೆ.
ನಾಟಕ, ಕತೆ, ಕಾವ್ಯ, ವಾಚನ, ಸಂವಾದ, ಗೆಳೆಯರು, ಹರಟೆ, ಹಬ್ಬದ ಊಟ, ಸಾಹಿತ್ಯ, ಇತ್ಯಾದಿಗಳ ಸಂಭ್ರಮವನ್ನು ಕಂಡು ಆನಂದಿಸಬಹುದು. [ಗಂಗಾವತರಣ ಗೀತೆಗೆ 72ರ ಯೌವನ]

ಯುಗಾದಿಯನ್ನು ವಿಭಿನ್ನ ರೀತಿಯಲ್ಲಿ, ರಂಗ ಸಂವೇದನೆಯೊಂದಿಗೆ ಆಚರಿಸುವುದು ರಂಗ ಶಂಕರ ಪಾಲಿಸಿಕೊಂಡು ಬಂದಿರುವ ಒಂದು ಸಂಪ್ರದಾಯ. ನಾಟಕಗಳಲ್ಲದೇ ಸಾಹಿತ್ಯಕ್ಕೆ ಸಂಬಂಧಿಸಿದ ಎಲ್ಲಾ ಪ್ರಕಾರಗಳನ್ನೂ ಒಳಗೊಂಡ ಒಂದು ಸಂಭ್ರಮವೇ ಈ ರಂಗ ಯುಗಾದಿ. ಬೆಂಗಳೂರಿನ ಜನತೆಯನ್ನು ಒಂದು ಹಬ್ಬದ ವಾತಾವರಣವನ್ನು ನಿರ್ಮಿಸಿ ಅದರ ಮೂಲಕ ರಂಗ ಸಂವೇದನೆಯನ್ನು ಹಂಚಿಕೊಳ್ಳುವುದು ರಂಗ ಯುಗಾದಿಯ ಹಿಂದಿನ ಉದ್ದೇಶ.
ಈ ಹಿಂದೆ ಚಂದ್ರಶೇಖರ ಕಂಬಾರ, ಪಿ ಲಂಕೇಶ, ಪೂರ್ಣಚಂದ್ರ ತೇಜಸ್ವಿಯರ ಹೆಸರಿನಲ್ಲಿ ರಂಗ ಯುಗಾದಿಯನ್ನು ಆಚರಿಸಿದ್ದಲ್ಲದೇ, ಜಾನಪದ ನಾಟಕ ಪ್ರಕಾರಗಳು, ಕಾಮೆಡಿ ನಾಟಕಗಳು, ಜ್ಞಾನಪೀಠ ಪ್ರಶಸ್ತಿ ವಿಜೇತರ ನೆನಪಿನಲ್ಲಿ ಕೂಡಾ ರಂಗ ಯುಗಾದಿಯನ್ನು ಆಚರಿಸಲಾಗಿದೆ.
ರಂಗಶಂಕರ ವಿಳಾಸ
36/2, 8ನೇ ಅಡ್ಡರಸ್ತೆ
(ಜೆಪಿ ನಗರ ಅಂಚೆ ಕಚೇರಿ ಪಕ್ಕ)
2ನೇ ಹಂತ, ಜೆಪಿ ನಗರ,
ಬೆಂಗಳೂರು 560 078.
ವಿಳಾಸಕ್ಕೆ ಮಾರ್ಗಸೂಚಿ: http://binged.it/1SJgAhV
ಇಡೀ ದಿನದ ಕಾರ್ಯಕ್ರಮಕ್ಕೆ ಟಿಕೆಟ್ ದರ : 150 ರು
ಧಾರವಾಡದ ತಿನಿಸುಗಳು , ಬೇಂದ್ರೆ ಕವನ ವಾಚನ, ಧ್ವನಿ ಮುದ್ರಣ, ಸಾಕ್ಷ್ಯಚಿತ್ರ ಪ್ರದರ್ಶನ ಎಲ್ಲವನ್ನು ಕಾಣಬಹುದು. ನಾಟಕಕಾರಾದ ಗಿರೀಶ್ ಕಾರ್ನಾಡ್, ಎಸ್ ಸುರೇಂದ್ರನಾಥ್, ಗೋಪಾಲ ವಾಜಪೇಯಿ, ಕವಿ ಜಯಂತ್ ಕಾಯ್ಕಿಣಿ, ಯೋಗರಾಜ ಭಟ್, ಪ್ರತಿಭಾ ನಂದಕುಮಾರ್, ಸಾಹಿತಿ ಜೋಗಿ, ಸಂಧ್ಯಾರಾಣಿ, ನಿರ್ದೇಶಕ ಟಿಎನ್ ಸೀತಾರಾಮ್, ಗಾಯಕಿ ಎಂಡಿ ಪಲ್ಲವಿ ಸೇರಿದಂತೆ ಹಲವಾರು ಸಾಹಿತ್ಯಾಸಕ್ತರು ಪಾಲ್ಗೊಳ್ಳಲಿದ್ದಾರೆ. ಹೆಚ್ಚಿನ ವಿವರಗಳನ್ನು ಸ್ಲೈಡ್ ಗಳಲ್ಲಿ ನೋಡಿ
ರಂಗಶಂಕರದಲ್ಲಿ ಬೇಂದ್ರೆ ನೆನಪಲ್ಲಿ 'ರಂಗ ಯುಗಾದಿ'
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications