ರವೀಂದ್ರ ಕಲಾಕ್ಷೇತ್ರದಲ್ಲಿ ರಂಗವಸಂತ ವಿಶೇಷ ರಂಗೋತ್ಸವ
ಬೆಂಗಳೂರು, ಏಪ್ರಿಲ್ 03: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕರ್ನಾಟಕ ನಾಟಕ ಅಕಾಡೆಮಿ ಸಹಕಾರದೊಂದಿಗೆ ರಂಗ ವಸಂತ ವಿಶೇಷ ರಂಗೋತ್ಸವವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಆರಂಭಿಸಿದೆ.
ಸೋಮವಾರದಿಂದ ನಾಟಕೋತ್ಸವ ಪ್ರಾರಂಭವಾಗಿದ್ದು, ಏಪ್ರಿಲ್ 10ರವರೆಗೆ ನಡೆಯಲಿದೆ. ಏ.3ರಂದು ಎಚ್.ಎಸ್ ಶಿವಪ್ರಕಾಶ್ ರಚಿತ, ಸುರೇಶ್ ಆನಗಳ್ಳಿ ನಿರ್ದೇಶನದ, ಪ್ರಯೋಗ ರಂಗ ತಂಡ ಅಭಿನಯಿಸುವ ಮಂಟೇಸ್ವಾಮಿ ಕಥಾ ಪ್ರಸಂಗ ನಾಟಕ ಪ್ರದರ್ಶನ ನಡೆಯಲಿದೆ.
ಏಪ್ರಿಲ್ 4ರಂದು ಬುಧವಾರ ಗಿರೀಶ್ ಕಾರ್ನಾಡ್ ರಚಿತ, ಬಿ.ವಿ. ಕಾರಂತ್ ನಿರ್ದೇಶನದ, ಬೆನಕ ತಂಡವು ಹಯವದನ ನಾಟಕವನ್ನು ಪ್ರಸ್ತುತಪಡಿಸಲಿದೆ. ಏಪ್ರಿಲ್ 5ರಂದು ಗುರುವಾರ ಡಾ. ಕೆ.ವೈ ನಾರಾಯಣಸ್ವಾಮಿ ರಚಿಸಿರುವ ಪ್ರಕಾಶ್ ಪಿ. ಶೆಟ್ಟಿ ನಿರ್ದೇಶನದ ರಂಗಮಂಟಪ ತಂಡದಿಂದ ಮಲ್ಲಿಗೆ ನಾಟಕ ಪ್ರದರ್ಶನಗೊಳ್ಳಲಿದೆ.

ಏಪ್ರಿಲ್ 6ರಂದು ಬಿ.ಎಂ. ಗಿರಿರಾಜ್ ರಚಿಸಿ ನಿರ್ದೇಶಿಸಿರುವ, ನಿರ್ಗುಣ ತಂಡ ಸುಗಂಧದ ಸೀಮೆಯಾಚೆ ನಾಟಕ ಪ್ರಸ್ತುತಪಡಿಸಲಿದೆ.ಏಪ್ರಿಲ್ 7 ರಂದು ಡಾ. ಚಂದ್ರಶೇಖರ್ ಕಂಬಾರ ರಚಿತ, ರಾಮಕೃಷ್ಣ ಬೆಳ್ತೂರು ನಿರ್ದೇಶನದ, ಜನಪದರು ತಂಡದಿಂದ ಸಾಂಬಶಿವ ಪ್ರಹಸನ ತೆರೆಯ ಮೇಲೆ ಪ್ರದರ್ಶನಗೊಳ್ಳಲಿದೆ.
ಏಪ್ರಿಲ್ 8ರಂದು ಭಾನುವಾರ ಬಲೂರು ರಘುನಂದ್ ರಚಿತ, ದಾಕ್ಷಾಯಿಣಿ ಭಟ್ ನಿರ್ದೇಶನದ, ದೃಶ್ಯ ರಂಗತಂಡ ಅಭಿನಯಿಸುವ ರಕ್ತವರ್ಣ ನಾಟಕ ತೆರೆಕಾಣಲಿದೆ. ಏಪ್ರಿಲ್ 9ರಂದು ಅನಕೃ ರಚಿತ, ಕಬ್ಬಡ್ಡಿ ರಾಮಚಂದ್ರ ನಿರ್ದೇಶನದ, ಕಲಾವಿದರ ಬಳಗ ಸ್ವರ್ಣಮೂರ್ತಿ ನಾಟಕವನ್ನು ಪ್ರಸ್ತುತಪಡಿಸುತ್ತಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | 2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ
ಏಪ್ರಿಲ್ 10ರಂದು ಟಿ.ಎಸ್. ಲೋಹಿತಾಶ್ವ ಕನ್ನಡಕ್ಕೆ ಅನುವಾದಿಸಿರುವ, ಡಾ. ಬಿ.ವಿ. ರಾಜಾರಾಂ ನಿರ್ದೇಶನದ, ಕಲಾಗಂಗೋತ್ರಿ ಅಭಿನಯದ ಮುಖ್ಯಮಂತ್ರಿ ನಾಟಕ ಪ್ರದರ್ಶನಗೊಳ್ಳಲಿದೆ. ಪ್ರತಿ ದಿನವೂ ಸಂಜೆ 6.30ಕ್ಕೆ ನಾಟಕ ಪ್ರಾರಂಭವಾಗಲಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications