Breaking: ಅತ್ಯಾಚಾರ ಆರೋಪಿ ಜೊತೆ ಸಂತ್ರಸ್ತೆ ವಿವಾಹ; ಕ್ರಿಮಿನಲ್ ಮೊಕದ್ದಮೆ ರದ್ದು
ಬೆಂಗಳೂರು, ಆಗಸ್ಟ 24: ಅತ್ಯಾಚಾರ ಮಾಡಿದ ಯುವಕನನ್ನೆ ಸಂತ್ರಸ್ತೆ ಮದುವೆಯಾದ ಕಾರಣ ಆತನ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ಕರ್ನಾಟಕ ಹೈಕೋಟ್ ರದ್ದುಗೊಳಿಸಿರುವ ಘಟನೆ ನಡೆದಿದೆ.
ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ (ಐಪಿಸಿ) ಅಡಿಯಲ್ಲಿ ಅತ್ಯಾಚಾರ ಆರೋಪಗಳನ್ನು ಎದುರಿಸುತ್ತಿರುವ 23 ವರ್ಷದ ಯುವಕನ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.
17 ವರ್ಷದ ಸಂತ್ರಸ್ತೆ 18 ವರ್ಷ ತುಂಬಿದ ನಂತರ ಆರೋಪಿಯನ್ನೇ ಮದುವೆಯಾಗಿದ್ದಳು ಮತ್ತು ಸೆಷನ್ಸ್ ಕೋರ್ಟ್ನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ದಂಪತಿಗೆ ಮಗು ಕೂಡ ಆಗಿದೆ.

ಪ್ರಕರಣದಲ್ಲಿ ಪ್ರಾಸಿಕ್ಯೂಷನ್ "ಅರ್ಜಿದಾರರ ವಿರುದ್ಧದ ತಪ್ಪನ್ನು ಸಾಬೀತುಪಡಿಸಲು ಕಷ್ಟವಾಗುತ್ತದೆ" ಎಂದು ಹೈಕೋರ್ಟ್ ತಿಳಿಸಿದೆ.
"ಸಂತ್ರಸ್ತ ಯುವತಿ ನಂತರದ ಸಮಯದಲ್ಲಿ ವಿಚಾರಣೆಯಲ್ಲಿ ಪ್ರತಿಕೂಲವಾಗಿ ತಿರುಗಿದರೆ, ಅರ್ಜಿದಾರನು ಎಲ್ಲಾ ಅಪರಾಧಗಳಿಂದ ಮುಕ್ತಗೊಳ್ಳುತ್ತಾನೆ. ಇದು ನೋವಿನ ಅಂತಿಮ ಫಲಿತಾಂಶವಲ್ಲ. ಆದರೆ, ಕ್ರಿಮಿನಲ್ ನ್ಯಾಯ ವ್ಯವಸ್ಥೆಯಲ್ಲಿನ ಪ್ರಕ್ರಿಯೆಯು ಅಂತಹ ನೋವನ್ನು ಉಂಟುಮಾಡುತ್ತದೆ" ಎಂದು ನ್ಯಾಯಾಲಯವು ತಿಳಿಸಿದೆ.
ಪ್ರಾಸಿಕ್ಯೂಷನ್ನ ವಿರೋಧವನ್ನು ನಿರ್ಲಕ್ಷಿಸಿದ ಹೈಕೋರ್ಟ್, ಕಕ್ಷಿದಾರರ ಮತ್ತು ಸಂತ್ರಸ್ತೆಯ ನಡುವಿನ ಒಪ್ಪಂದವನ್ನು ಅಂಗೀಕರಿಸುವುದು ಮತ್ತು ಪ್ರಕ್ರಿಯೆಗಳನ್ನು ಕೊನೆಗೊಳಿಸುವುದು ಸೂಕ್ತ ಎಂದು ಹೇಳಿದೆ.
"ಮದುವೆಯಾಗಿ ಮಗುವನ್ನು ಬೆಳೆಸುತ್ತಿರುವ ದಂಪತಿಗಳಿಗೆ ನ್ಯಾಯಾಲಯವು ತನ್ನ ಬಾಗಿಲುಗಳನ್ನು ಮುಚ್ಚಿದರೆ, ಇಡೀ ಪ್ರಕ್ರಿಯೆಯು ನ್ಯಾಯಾಂಗ ವ್ಯವಸ್ಥೆಯ ತಪ್ಪಿಗೆ ಕಾರಣವಾಗುತ್ತದೆ" ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ತೀರ್ಪು ನೀಡುವಾಗ ಹೇಳಿದರು.

ಸಂತ್ರಸ್ತೆಯ ತಂದೆ ತನ್ನ ಅಪ್ರಾಪ್ತ ಮಗಳು ಕಾಣೆಯಾಗಿದ್ದಾಳೆ ಎಂದು ಮಾರ್ಚ್ 2019 ರಲ್ಲಿ ದೂರು ದಾಖಲಿಸಿದ್ದರು. ಆದರೆ, ಆರೋಪಿಯೊಂದಿಗೆ ಬಾಲಕಿ ಪತ್ತೆಯಾಗಿದ್ದರು. ಇಬ್ಬರೂ ಒಮ್ಮತದಿಂದ ನಡೆದುಕೊಂಡಿದ್ದೇವೆ ಎಂದು ಹೇಳಿಕೆ ನೀಡಿದ್ದರು.
ಆದರೆ, ಬಾಲಕಿಗೆ ಕೇವಲ 17 ವರ್ಷ ವಯಸ್ಸಾಗಿದ್ದು, ಆರೋಪಿ ವಿರುದ್ಧ ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. 18 ತಿಂಗಳ ಕಾಲ ಜೈಲಿನಲ್ಲಿದ್ದ ಅವರಿಗೆ ಬಳಿಕ ಜಾಮೀನು ನೀಡಲಾಗಿತ್ತು. ಆರೋಪಿಯ ಬಿಡುಗಡೆಯ ನಂತರ, ದಂಪತಿಗಳು ನವೆಂಬರ್ 2020 ರಲ್ಲಿ ವಿವಾಹವಾದರು. ಒಂದು ವರ್ಷದ ನಂತರ, ಅವರಿಗೆ ಹೆಣ್ಣು ಮಗುವಾಗಿದೆ.
ತನ್ನ ತೀರ್ಪಿನಲ್ಲಿ, ಸಂತ್ರಸ್ತೆ ಮತ್ತು ಆರೋಪಿ ವಿವಾಹವಾದ ನಂತರ, ಹಲವಾರು ಸಾಂವಿಧಾನಿಕ ನ್ಯಾಯಾಲಯಗಳು ಆರೋಪಿಗಳ ವಿರುದ್ಧದ ಬಾಕಿಯಿರುವ ವಿಚಾರಣೆಯನ್ನು ಮುಕ್ತಾಯಗೊಳಿಸಿರುವುದನ್ನು ಹೈಕೋರ್ಟ್ ತನ್ನ ತೀರ್ಪಿನಲ್ಲಿ ತಿಳಿಸಿದೆ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications