ಛಾಯಾಚಿತ್ರಗಳಲ್ಲಿ ಡಾ. ಹೊ. ಶ್ರೀನಿವಾಸಯ್ಯರ ಸಂಸ್ಮರಣೆ
ಹಿರಿಯ ಗಾಂಧಿವಾದಿ ಡಾ. ಹೊ. ಶ್ರೀನಿವಾಸಯ್ಯ(93) ಅವರು ಇಂದು ಮುಂಜಾನೆ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕರ್ನಾಟಕದಾದ್ಯಂತ ಓಡಾಡಿದ ಹಿರಿಯ ಜೀವ ಡಾ. ಹೊ. ಶ್ರೀನಿವಾಸಯ್ಯ ಅವರ ಅಪರೂಪದ ಚಿತ್ರಗಳು ಇಲ್ಲಿವೆ.
ಬೆಂಗಳೂರು, ಏಪ್ರಿಲ್ 6: ಹಿರಿಯ ಗಾಂಧಿವಾದಿ ಡಾ. ಹೊ. ಶ್ರೀನಿವಾಸಯ್ಯ(93) ಅವರು ಇಂದು ಮುಂಜಾನೆ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕೆಲವು ದಿನಗಳಿಂದ ಕಿಡ್ನಿ ವೈಫಲ್ಯದಿಂದ ಬಳಲುತಿದ್ದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷರಾಗಿದ್ದ ಹೊ ನರಸಿಂಹಯ್ಯ ಸಾವಿರಾರು ಶಾಲೆ-ಕಾಲೇಜುಗಳಲ್ಲಿ ಗಾಂಧಿ ತತ್ವಗಳ ಪ್ರಚಾರ ಮಾಡಿ, ಯುವ ಪೀಳಿಗೆಗೆ ಮಹಾತ್ಮನ ವ್ಯಕ್ತಿತ್ವವನ್ನು ಪರಿಚಯಿಸಿದ್ದರು.
ಗಾಂಧೀಜಿಯವರ ಕುರಿತು ಹಲವು ಕೃತಿಗಳನ್ನು ರಚಿಸಿದ್ದ ಅವರು, ಸಹಕಾರ ತತ್ವದ ಆಧಾರದ ಮೇಲೆ ಬ್ಯಾಂಕ್ ಗಳನ್ನೂ ಪ್ರಾರಂಭಿಸಿದ್ದರು. ಅವರ ಪ್ರಸಿದ್ಧ ಪ್ರವಾಸೀ ಕಥನ "ನಾ ಕಂಡ ಜರ್ಮನಿ" ಸಾಹಿತ್ಯ ವಲಯದಲ್ಲಿ ಅಪಾರ ಮೆಚ್ಚುಗೆ ಪಡೆದಿತ್ತು.
ಸಾಹಿತಿ, ಗಾಂಧಿವಾದಿ, ಪತ್ರಕರ್ತ, ಸಮಾಜ ಸೇವಕ ಹೀಗೆ ನಾನಾ ಪಾತ್ರಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಶ್ರೀನಿವಾಸಯ್ಯ ಅವರು ಓರ್ವ ಪುತ್ರಿ ಹಾಗೂ ಅಸಂಖ್ಯ ಅಭಿಮಾನಿಗಳನ್ನು ಅಗಲಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸೇರಿದಂತೆ ನಾಡಿನ ಹಲವು ಗಣ್ಯರು ಶ್ರೀನಿವಾಸಯ್ಯನವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದಾದ್ಯಂತ ಒಡಾಡಿದ ಡಾ. ಹೊ. ಶ್ರೀನಿವಾಸಯ್ಯ ಅವರ ಅಪರೂಪದ ಚಿತ್ರಗಳು ಇಲ್ಲಿವೆ.

ಗಾಂಧಿ ಹೆಜ್ಜೆ ಶತಮಾನೋತ್ಸವ ಸಮಾರಂಭ
ಕರ್ನಾಟಕದಲ್ಲಿ ಗಾಂಧಿ ಮೊದಲ ಹೆಜ್ಜೆ ಶತಮಾನೋತ್ಸವ ಸಂದರ್ಭದಲ್ಲಿ ಹಮ್ಮಿಕೊಂಡಿದ್ದ ಜಾಥಾದಲ್ಲಿ ಡಾ. ಹೊ. ಶ್ರೀನಿವಾಸಯ್ಯ ಭಾಗವಹಿಸಿದ್ದರು.

ಗಾಂಧಿ-ಶ್ರೀನಿವಾಸಯ್ಯ
ಮಹಾತ್ಮಾ ಗಾಂಧಿ ಕುರಿತ ಛಾಯಾಚಿತ್ರ ಪ್ರದರ್ಶನವನ್ನು ವೀಕ್ಷಿಸುತ್ತಿರುವ ಡಾ: ಹೊ. ಶ್ರೀನಿವಾಸಯ್ಯ

ಗಾಂಧಿ ಸೇವಾ ಪುರಸ್ಕಾರ
ಗಾಂಧಿ ಸೇವಾ ಪುರಸ್ಕಾರ ಸ್ವೀಕರಿಸಲು ಆಗಮಿಸಿದ ಸಂದರ್ಭ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನಮಿಸುತ್ತಿರುವ ಹೊ ಶ್ರೀನಿವಾಸಯ್ಯ.

ಗಾಂಧಿ ಜಯಂತಿ
ಗಾಂಧೀ ಜಯಂತಿ ಸಂಧರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಹೆಚ್.ಕೆ. ಪಾಟೀಲ, ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್. ದೊರೆಸ್ವಾಮಿ, ಹಿರಿಯ ಪತ್ರಕರ್ತ ನಾಡೋಜ ಪಾಟೀಲ ಪುಟ್ಟಪ್ಪ ಅವರೊಂದಿಗೆ ಶ್ರೀನಿವಾಸಯ್ಯ.

ಎ.ಐ.ಸಿ.ಸಿ. ಅಧಿವೇಶನದಲ್ಲಿ
1951 ರಲ್ಲಿ ಬೆಂಗಳೂರಿನಲ್ಲಿ ನಡೆದ ಎ.ಐ.ಸಿ.ಸಿ. ಅಧಿವೇಶನ ಸಂದರ್ಭದಲ್ಲಿ ಅಂದಿನ ಪ್ರಧಾನಿ ಜವಾಹರಲಾಲ್ ನೆಹರೂ, ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರೊಂದಿಗೆ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಶ್ರೀನಿವಾಸಯ್ಯ.

ಪಾಟೀಲ್ ಜತೆ
ಅಂದಿನ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ಅವರೊಂದಿಗೆ ಡಾ. ಹೊ. ಶ್ರೀನಿವಾಸಯ್ಯ.

ಬಾಲಗಂಗಾಧರನಾಥ ಸ್ವಾಮೀಜಿ ಜತೆ
ಆದಿಚುಂಚನಗಿರಿ ಮಠದ ಡಾ: ಬಾಲಗಂಗಾಧರನಾಥ ಸ್ವಾಮೀಜಿ ಅವರೊಂದಿಗೆ ಶ್ರೀನಿವಾಸಯ್ಯ.

ರಾಜ್ಯಪಾಲರ ಜತೆ
ಎಂಬತ್ತರ ದಶಕದಲ್ಲಿ ರಾಜ್ಯಪಾಲ ಗೋವಿಂದ ನಾರಾಯಣ್ ಅವರೊಂದಿಗೆ ಶ್ರೀನಿವಾಸಯ್ಯ.

ಸೇವಾ ಶಿಬಿರದಲ್ಲಿ
ಕೋಲಾರ ಜಿಲ್ಲೆಯಲ್ಲಿ ನಡೆದ ಸೇವಾ ಶಿಬಿರದಲ್ಲಿ ಯುವಕರಾಗಿದ್ದ ಹೊ. ಶ್ರೀನಿವಾಸಯ್ಯ

ಕವಿಶೈಲದಲ್ಲಿ
ಕುವೆಂಪು ಸ್ಮಾರಕ ಕವಿಶೈಲಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಹೊ. ಶ್ರೀನಿವಾಸ್ ನವರು ತೆಗೆಸಿಕೊಂಡ ಅಪರೂಪದ ಚಿತ್ರ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications