ವಿಷಪೂರಿತ ಬೆಳ್ಳಂದೂರು ಕೆರೆಯಲ್ಲಿ ನಟಿ ರಶ್ಮಿಕಾ ಮಂದಣ್ಣ ಫೋಟೊ ಶೂಟ್!
ಬೆಂಗಳೂರು, ಡಿಸೆಂಬರ್ 14: ಬೆಳ್ಳಂದೂರು ಕೆರೆ ಮಾಲಿನ್ಯ ಕುರಿತು ಜಾಗೃತಿ ಮೂಡಿಸಲು ನಟಿ ರಶ್ಮಿಕಾ ಮಂದಣ್ಣ ಬೆಳ್ಳಂದೂರು ಕೆರೆಗೆ ಜಿಗಿದಿದ್ದಾರೆ. ನೀರಿನೊಳಗೆ ಫೋಟೊಶೂಟ್ ಕೂಡ ಮಾಡಿದ್ದಾರೆ.
ರಶ್ಮಿಕಾ ಕೆರೆಯ ದಂಡೆ ಮೇಲೆ ಚಿಂತಾಕ್ರಾಂತರಾಗಿ ನಿಂತಿರೋದು. ಪ್ಲಾಸ್ಟಿಕ್ ಕವರ್ಗಳ ಮಧ್ಯೆ ತೇಲಾಡ್ತಿರೋದು.. ಹೀಗೆ ನಾನಾ ಬಗೆಯ ಅರ್ಥ ಒದಗಿಸೊ ಫೋಟೊಗಳಿಗೆ ಪೋಸ್ ನೀಡಿದ್ದಾರೆ. ಅಲ್ಲದೇ ಜಲಮಾಲಿನ್ಯದ ಕುರಿತು ಭಾವನಾತ್ಮಕ ಬರಹವೊಂದನ್ನು ಟ್ವೀಟ್ ಮಾಡಿದ್ದಾರೆ.
ರಶ್ಮಿಕಾ ಅವರ ಫೋಟೋಶೂಟ್ ಅನ್ನು ಸನ್ಮತಿ ಡಿ. ಪ್ರಸಾದ್ ಅವರು ನಿರ್ದೇಶಿಸಿದ್ದಾರೆ. ಅಂಡರ್ ವಾಟರ್ ಫೋಟೋಶೂಟ್ ಮಾಡಿಸುವ ಮೊದಲು ನನಗೆ ಬೆಳ್ಳಂದೂರು ಕೆರೆಯ ಪರಿಸ್ಥಿತಿ ತಿಳಿದಿರಲಿಲ್ಲ ಎಂದು ಹೇಳಿಕೊಂಡಿದ್ದಾರೆ.
Well wasn't aware of this till we had to actually go and shoot this in Bellandur lake..which like really broke my heart,and imagine few years down the line..it’s the same case everywhere else..😱 I’d rather not want to be in that space.. I just wanted to share 🤷
— Rashmika Mandanna (@iamRashmika) December 13, 2018
(2/2) pic.twitter.com/zshJLDwW6s
ಅಷ್ಟೊಂದು ಅಪಾಯಕಾರಿ ಸ್ಥಳ. ಇದೇ ಜಾಗದಲ್ಲೀಗ ಫೋಟೊಶೂಟ್ ಮಾಡಿಸೋ ಮೂಲಕ ರಶ್ಮಿಕಾ ಸುದ್ದಿಯಾಗಿದ್ದು, ಜಲ ಮಾಲಿನ್ಯ ತಡೆಯುವಂತೆ ಮನವಿ ಮಾಡಿದ್ದಾರೆ. ಅಬ್ಬಾ.. ಈ ಕೆರೆಯ ಬಗ್ಗೆ ಕೇಳಿದ್ದೆ. ಆದರೆ, ಇದು ಇಷ್ಟೊಂದು ಹಾಳಾಗಿದೆ ಎಂಬುದು ಗೊತ್ತಿರಲಿಲ್ಲ. ತುಂಬಾ ಬೇಸರವಾಗಿದೆ ಇದು ಬೆಳ್ಳಂದೂರು ಕೆರೆಯ ಕುರಿತು ರಶ್ಮಿಕಾ ಮಂದಣ್ಣ ಹೇಳಿರುವ ಮಾತು.
ಬೆಳ್ಳಂದೂರು ಕೆರೆಯಲ್ಲಿ ಜಲ ಮಾಲಿನ್ಯದ ಅರಿವು ಮೂಡಿಸುವ ಕುರಿತು ಡಾಕ್ಯುಮೆಂಟರಿ ಮಾಡುತ್ತಿದ್ದು, ರಶ್ಮಿಕಾ ಅದರ ಫೋಟೋಶೂಟ್ನಲ್ಲಿ ಭಾಗವಹಿಸಿದ್ದಾರೆ. ಕೆರೆಯ ಸಮೀಪದಲ್ಲಿ ಫೋಟೋಶೂಟ್ನಲ್ಲಿ ಪಾಲ್ಗೊಂಡಿದ್ದ ರಶ್ಮಿಕಾ, ಬೆಳ್ಳಂದೂರು ಕೆರೆಯ ದುಸ್ಥಿತಿ ನೋಡಿ ಮರುಗಿದ್ದಾರೆ.

ಬೆಂಗಳೂರಿನ ಅತಿ ಹೆಚ್ಚು ಮಲಿನಕಾರಕ ಕೆರೆಗಳಲ್ಲಿ ಬೆಳ್ಳಂದೂರು ಕೆರೆ ಕೂಡ ಒಂದು, ಬೆಳ್ಳಂದೂರು ಕೆರೆ ಅಭಿವೃದ್ಧಿ ಮಾಡದ ಸರ್ಕಾರಕ್ಕೆ ಇತ್ತೀಚೆಗಷ್ಟೇ ಹಸಿರು ನ್ಯಾಯಾಧೀಕರಣ 75 ಕೋಟಿ ರೂ ದಂಡವನ್ನೂ ವಿಧಿಸಿತ್ತು.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications