ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತರಲು ಬಿಎಸ್ವೈಗೆ ಮನವಿ
ಬೆಂಗಳೂರು, ಡಿ. 2: ಕರ್ನಾಟಕದಲ್ಲಿ ಪ್ರಬಲ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ರಾಷ್ಟ್ರಧರ್ಮ ಸಂಘಟನೆಯು ಇಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದೆ.
ಇದಕ್ಕೂ ಮುನ್ನ ಗಾಂಧಿನಗರದ ಮೌರ್ಯ ಸರ್ಕಲ್ನಲ್ಲಿ ಆಯೋಜನೆಗೊಂಡಿದ್ದ ಈ ಕಾರ್ಯಕ್ರಮದಲ್ಲಿ 80 ರಿಂದ 100 ಜನರು ನಮ್ಮ ಹಿಂದೂ ಸಂಸ್ಕೃತಿ ಮೌಲ್ಯಗಳನ್ನು ಎತ್ತಿಹಿಡಿಯುವವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ರಾಷ್ಟ್ರಧರ್ಮ ಸಂಘಟನೆಯ ಸಂಸ್ಥಾಪಕರಾದ ಸಂತೋಷ್ ಕೆಂಚಾಂಬ ರವರ ನೇತೃತ್ವದಲ್ಲಿ ದೇಸಿ ತಳಿಯಾದ ಗಿರ್ ಗೋವಿನೊಂದಿಗೆ ಮೌರ್ಯ ಸರ್ಕಲ್ನಿಂದ ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣವರೆಗೆ ಪಾದಯಾತ್ರೆ ಮಾಡಲಾಯಿತು.

ನಂತರ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಈ ಕೆಳಕಂಡ ವಿಷಯಗಳನ್ನು ಚರ್ಚಿಸಲಾಯಿತು.
1. ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತರುವುದು
2. ಗೋ ರಕ್ಷಕರನ್ನು ಜೈಲಿನಿಂದ ಬಿಡುಗಡೆ ಮಾಡಿ ಅವರ ಮೇಲಿರುವ ಕೇಸುಗಳನ್ನು ಖುಲಾಸೆ
ಮಾಡುವುದು
3. ದೇಸಿ ಗೋವುಗಳ ಸಂರಕ್ಷಣೆಗೆ ಆಯೋಗ ರಚನೆ
4. ಗೋಮಾಳ ಜಾಗದ ಸಂರಕ್ಷಣೆ ಮತ್ತು ಒತ್ತುವರಿ ತಡೆಯುವುದು
5. ಗೋ ಶಾಲೆಗಳಿಗೆ ಬಜೆಟ್ನಲ್ಲಿ ಸೂಕ್ತ ಅನುದಾನ ನೀಡುವುದು
ಈ ಎಲ್ಲಾ ವಿಷಯಗಳನ್ನು ಆಲಿಸಿದ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದರು

ಈ ಕಾರ್ಯಕ್ರಮದಲ್ಲಿ ರಾಷ್ಟ್ರಧರ್ಮ ಸಂಘಟನೆಯ ಕಾರ್ಯಕರ್ತರು ಹಾಗೂ ಗೋಪಾಲಕ ಕುಮಾರ ಸುಬ್ರಮಣ್ಯ ಜಾಗೀರ್ಧಾರ್, ಗೋ ಸೇವಕ ರಾಘವೇಂದ್ರ, ರಾಷ್ಟ್ರೋತ್ತಾನ ಗೋಶಾಲೆಯ ಡಾ. ವಿ ಜೀವನ್ ಕುಮಾರ್, ಗೋಮಾತ್ರಂ ಗೋಶಾಲೆಯ ಜಿ.ಎಲ್ ಮಂಜುನಾಥ್, ಪ್ರಾಣಿ ದಯಾಸಂಘದ ಸುನೀಲ್ ದುಗಾರ್ ಸೇರಿದಂತೆ ಹಲವಾರು ಗೋ ಸೇವಕರು ಪಾಲ್ಗೊಂಡಿದ್ದರು.
-
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ












Click it and Unblock the Notifications