ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತರಲು ಬಿಎಸ್ವೈಗೆ ಮನವಿ
ಬೆಂಗಳೂರು, ಡಿ. 2: ಕರ್ನಾಟಕದಲ್ಲಿ ಪ್ರಬಲ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ರಾಷ್ಟ್ರಧರ್ಮ ಸಂಘಟನೆಯು ಇಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದೆ.
ಇದಕ್ಕೂ ಮುನ್ನ ಗಾಂಧಿನಗರದ ಮೌರ್ಯ ಸರ್ಕಲ್ನಲ್ಲಿ ಆಯೋಜನೆಗೊಂಡಿದ್ದ ಈ ಕಾರ್ಯಕ್ರಮದಲ್ಲಿ 80 ರಿಂದ 100 ಜನರು ನಮ್ಮ ಹಿಂದೂ ಸಂಸ್ಕೃತಿ ಮೌಲ್ಯಗಳನ್ನು ಎತ್ತಿಹಿಡಿಯುವವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ರಾಷ್ಟ್ರಧರ್ಮ ಸಂಘಟನೆಯ ಸಂಸ್ಥಾಪಕರಾದ ಸಂತೋಷ್ ಕೆಂಚಾಂಬ ರವರ ನೇತೃತ್ವದಲ್ಲಿ ದೇಸಿ ತಳಿಯಾದ ಗಿರ್ ಗೋವಿನೊಂದಿಗೆ ಮೌರ್ಯ ಸರ್ಕಲ್ನಿಂದ ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣವರೆಗೆ ಪಾದಯಾತ್ರೆ ಮಾಡಲಾಯಿತು.

ನಂತರ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಈ ಕೆಳಕಂಡ ವಿಷಯಗಳನ್ನು ಚರ್ಚಿಸಲಾಯಿತು.
1. ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತರುವುದು
2. ಗೋ ರಕ್ಷಕರನ್ನು ಜೈಲಿನಿಂದ ಬಿಡುಗಡೆ ಮಾಡಿ ಅವರ ಮೇಲಿರುವ ಕೇಸುಗಳನ್ನು ಖುಲಾಸೆ
ಮಾಡುವುದು
3. ದೇಸಿ ಗೋವುಗಳ ಸಂರಕ್ಷಣೆಗೆ ಆಯೋಗ ರಚನೆ
4. ಗೋಮಾಳ ಜಾಗದ ಸಂರಕ್ಷಣೆ ಮತ್ತು ಒತ್ತುವರಿ ತಡೆಯುವುದು
5. ಗೋ ಶಾಲೆಗಳಿಗೆ ಬಜೆಟ್ನಲ್ಲಿ ಸೂಕ್ತ ಅನುದಾನ ನೀಡುವುದು
ಈ ಎಲ್ಲಾ ವಿಷಯಗಳನ್ನು ಆಲಿಸಿದ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದರು

ಈ ಕಾರ್ಯಕ್ರಮದಲ್ಲಿ ರಾಷ್ಟ್ರಧರ್ಮ ಸಂಘಟನೆಯ ಕಾರ್ಯಕರ್ತರು ಹಾಗೂ ಗೋಪಾಲಕ ಕುಮಾರ ಸುಬ್ರಮಣ್ಯ ಜಾಗೀರ್ಧಾರ್, ಗೋ ಸೇವಕ ರಾಘವೇಂದ್ರ, ರಾಷ್ಟ್ರೋತ್ತಾನ ಗೋಶಾಲೆಯ ಡಾ. ವಿ ಜೀವನ್ ಕುಮಾರ್, ಗೋಮಾತ್ರಂ ಗೋಶಾಲೆಯ ಜಿ.ಎಲ್ ಮಂಜುನಾಥ್, ಪ್ರಾಣಿ ದಯಾಸಂಘದ ಸುನೀಲ್ ದುಗಾರ್ ಸೇರಿದಂತೆ ಹಲವಾರು ಗೋ ಸೇವಕರು ಪಾಲ್ಗೊಂಡಿದ್ದರು.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications