ಡಾ. ಜಿಎಸ್ಎಸ್ ಅಂತಿಮ ದರ್ಶನದ ವಿವರಗಳು
ಬೆಂಗಳೂರು, ಡಿ. 25 : ರಾಷ್ಟ್ರಕವಿ ಡಾ ಜಿ. ಎಸ್. ಶಿವರುದ್ರಪ್ಪ ಅವರ ಅಂತಿಮ ದರ್ಶನಕ್ಕೆ ಡಿಸೆಂಬರ್ 26ರಂದು ಬೆಂಗಳೂರಿನ ವಿವಿಧೆಡೆ ಅನುವುಮಾಡಿಕೊಡಲಾಗಿದೆ. ಅದೇ ದಿನ ಸಂಜೆ ಅವರ ಅಂತ್ಯ ಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಬೆಂಗಳೂರು ವಿಶ್ವವಿದ್ಯಾಲಯದ ಬಳಿಯ ಕರ್ನಾಟಕ ಕಲಾಗ್ರಾಮದಲ್ಲಿ ನಡೆಯಲಿದೆ.
ಅಂತಿಮ ದರ್ಶನ ಎಲ್ಲೆಲ್ಲಿ?
ಡಾ ಜಿ. ಎಸ್. ಶಿವರುದ್ರಪ್ಪ ಅವರ ಪಾರ್ಥಿವ ಶರೀರವನ್ನು ಡಿಸೆಂಬರ್ 26ರಂದು ಬೆಳಿಗ್ಗೆ 7 ಗಂಟೆಗೆ ಆಸ್ಪತ್ರೆಯಿಂದ ಬನಶಂಕರಿ ಎರಡನೇ ಹಂತದಲ್ಲಿರುವ ರಾಷ್ಟ್ರಕವಿಯ ಮನೆಗೆ ತರಲಾಗುವುದು. ಅಂದು ಬೆಳಿಗ್ಗೆ 8 ಗಂಟೆಯಿಂದ 8.30 ಗಂಟೆಯವರೆಗೆ ಮನೆಯಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. [ಭಾವ ಜೀವಿಯ ಕೈ ಹಿಡಿದ ಪ್ರೀತಿಯ ಸೆಲೆ]

ನಂತರ, ಬೆಳಿಗ್ಗೆ 9.30 ಗಂಟೆಯಿಂದ 10 ಗಂಟೆಯವರೆಗೆ ನಗರದ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ನ ಪ್ರಾಂಗಣದಲ್ಲಿ ಡಾ ಜಿ. ಎಸ್. ಶಿವರುದ್ರಪ್ಪ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು. ತದನಂತರ, ನಗರದ ಜಯಚಾಮರಾಜೇಂದ್ರ ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಎಸ್ಸೆಸ್ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು. [ಜಿಎಸ್ಎಸ್ ಬರೆದ ಉಯಿಲಿನಲ್ಲೇನಿದೆ]
ಇದಾದ ಬಳಿಕ ಮೈಸೂರು ರಸ್ತೆ ಮಾರ್ಗವಾಗಿ ಜ್ಞಾನಭಾರತಿಯಲ್ಲಿರುವ ಕನ್ನಡ ಅಧ್ಯಯನ ಸಂಸ್ಥೆಯತ್ತ ರಾಷ್ಟ್ರಕವಿಯ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಗುವುದು. ಜಿ ಎಸ್ ಎಸ್ ಅವರ ಪಾರ್ಥಿವ ಶರೀರಕ್ಕೆ ಅಲ್ಲಿ ಗೌರವ ಸಲ್ಲಿಸಿದ ನಂತರ ಪಾರ್ಥಿವ ಶರೀರವನ್ನು ಕರ್ನಾಟಕ ಕಲಾಗ್ರಾಮಕ್ಕೆ ಕೊಂಡೊಯ್ಯಲಾಗುವುದು. ಡಾ ಜಿ ಎಸ್ ಶಿವರುದ್ರಪ್ಪ ಅವರ ಅಂತ್ಯ ಸಂಸ್ಕಾರ ಕಲಾಗ್ರಾಮದಲ್ಲಿ ಸಂಜೆ 4.30 ಗಂಟೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications