ಜಿ.ಎಸ್. ಶಿವರುದ್ರಪ್ಪ ಬರೆದ ಉಯಿಲು ಪತ್ರದಲ್ಲೇನಿದೆ?
ಬೆಂಗಳೂರು, ಡಿ.23: ರಾಷ್ಟ್ರಕವಿ ಕುವೆಂಪು ಅವರ ಶಿಷ್ಯರಾಗಿ ಬೆಳದ ಜನಮೆಚ್ಚಿದ ಕವಿ ಜಿ.ಎಸ್ ಶಿವರುದ್ರಪ್ಪ ಅವರು ಹುಟ್ಟಿನಿಂದ ಲಿಂಗಾಯತ ಧರ್ಮಕ್ಕೆ ಸೇರಿದವರಾದರೂ ಯಾವತ್ತಿಗೂ ಒಂದು ಗುಂಪಿನ, ಜಾತಿಯ, ಧರ್ಮದ ವ್ಯಕ್ತಿಯಾಗಿ ಗುರುತಿಸಿಕೊಂಡವರಲ್ಲ. ಕುವೆಂಪು ಅವರ ಸಾಂಗತ್ಯದಿಂದ ಸಾಹಿತ್ಯ ಕೃಷಿಯಲ್ಲದೆ, ಸಾಮಾಜಿಕ ಕೃಷಿಯಲ್ಲೂ ತಮ್ಮನ್ನು ತೊಡಗಿಸಿಕೊಂಡು ಸುಧಾರಕರಾಗಿದರು. ನಿಜದ ಅರ್ಥದಲ್ಲಿ ವಿಶ್ವಮಾನವನಂತೆ ಉಳಿದ ಜಿಎಸ್ ಶಿವರುದ್ರಪ್ಪ ಅವರು ಪ್ರಾತಃ ಸ್ಮರಣೀಯರು.
ರಾಷ್ಟ್ರಕವಿ ಶಿವರುದ್ರಪ್ಪ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾಳೆ (ಡಿ.24) ಸರ್ಕಾರಿ ರಜೆ ಘೋಷಿಸಿದ್ದಾರೆ. ಇಂದು ಹಾಗೂ ನಾಳೆ ಎರಡು ದಿನ ರಾಜ್ಯದಾದ್ಯಂತ ಶೋಕಾಚರಣೆ ಆಚರಿಸಲಾಗುತ್ತದೆ. ಹಲವಾರು ವಿಶ್ವವಿದ್ಯಾಲಯಗಳ ಪರೀಕ್ಷೆಗಳು ಮುಂದೂಡಲಾಗಿದೆ.[ಶಿವರುದ್ರಪ್ಪ ಶಿಕ್ಷಣ ಕ್ಷೇತ್ರಕ್ಕೆ ಕೊಟ್ಟ ಕೊಡುಗೆ ಜಯದೇವ್]
ಬೆಂಗಳೂರಿನ ಜ್ಞಾನ ಭಾರತಿಯ ಆವರಣದಲ್ಲಿ ರಾಷ್ಟ್ರಕವಿಗಳ ಅಂತಿಮ ಸಂಸ್ಕಾರ ನೆರವೇರಿಸಲು ವಿವಿಧ ವಿವಿ ಕುಲಪತಿಗಳಿಂದ ಮುಖ್ಯಮಂತ್ರಿಗಳಿಗೆ ಸೂಚಿಸಿದ್ದಾರೆ. ಡಿ.26ರಂದು ಡಾ. ಜಿಎಸ್ ಶಿವರುದ್ರಪ್ಪ ಅವರ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ. ಅದರೆ, ಕನ್ನಡ ವಿದ್ಯಾರ್ಥಿಗಳ ಪಾಲಿನ ಮೆಚ್ಚಿನ ಮೇಷ್ಟ್ರು ಶಿವರುದ್ರಪ್ಪ ಅವರ ಅಂತಿಮ ಸಂಸ್ಕಾರ ಹೇಗೆ ನಡೆಯಲಿದೆ ಎಂಬ ಚರ್ಚೆ ಮಧ್ಯಾಹ್ನದಿಂದಲೇ ಆರಂಭವಾಗಿತ್ತು. ಇದಕ್ಕೆ ಈಗ ಉತ್ತರವೂ ಸಿಕ್ಕಿದೆ.[ರಾಷ್ಟ್ರಕವಿ ಶಿವರುದ್ರಪ್ಪ ಮೆಚ್ಚಿದ ಹತ್ತು ಕವನಗಳು]

'ನಾನು ಜೀವನದಲ್ಲಿ ಎಲ್ಲವನ್ನು ಕಂಡಿದ್ದೇನೆ. ಸಾಕಷ್ಟು ಕವನಗಳನ್ನು ಬರೆದಿದ್ದೇನೆ. ಕೃತಕ ಜೀವನಾಧಾರಗಳನ್ನು ನೀಡಿ ನನ್ನನ್ನು ಹೆಚ್ಚು ಕಾಲ ಜೀವಂತ ಇಡಬೇಡಿ. ನನ್ನ ಅಂತ್ಯಕ್ರಿಯೆಯಲ್ಲಿ ಹೆಚ್ಚಿನ ಧಾರ್ಮಿಕ ವಿಧಿ ವಿಧಾನ ಬೇಡ. ನನ್ನ ಕಳೇಬರವನ್ನು ಸುಟ್ಟರೆ ಸಾಕು ಎಂದು ನನ್ನ ಅಪ್ಪ ಹೇಳಿದ್ದರು ಎಂದು ಜಯದೇವ್ ಅವರು ಸ್ಮರಿಸಿಕೊಂಡಿದ್ದಾರೆ.[ರಾಷ್ಟ್ರಕವಿ ಜಿಎಸ್ ಶಿವರುದ್ರಪ್ಪ ವಿಧಿವಶ]
ಜಿ.ಎಸ್. ಶಿವರುದ್ರಪ್ಪ ಬರೆದ ಪತ್ರದಲ್ಲೇನಿದೆ?: ಪತ್ನಿ ಹಾಗೂ ಮಕ್ಕಳನ್ನು ಮುಂದೆ ಕೂರಿಸಿ ಬರೆದ ಪತ್ರದ ಸಾರಾಂಶ ಈ ಕೆಳಗಿನಂತಿದೆ:
'ನಾನು ಯಾವ ಜಾತಿಗೂ ಸೇರಿದವನಲ್ಲ. ನಾನು ಕರ್ನಾಟಕದ ಆಸ್ತಿ. ಹಾಗಾಗಿ ನನ್ನ ಅಂತ್ಯಕ್ರಿಯೆಯಲ್ಲಿ ಯಾವುದೇ ಧಾರ್ಮಿಕ ವಿಧಿ ವಿಧಾನ ನಡೆಸಬಾರದು. ನನ್ನನ್ನು ಮಣ್ಣು ಮಾಡಬಾರದು. ಚಿತೆಗೇರಿಸಿ ಅಗ್ನಿ ಸ್ಪರ್ಷ ಮಾಡಬೇಕು. ಒಂದು ಹಿಡಿ ಚಿತಾಭಸ್ಮವನ್ನು ಕಾವೇರಿಯಲ್ಲಿ ಬಿಡಿ. ನನ್ನ ಹೆಸರಲ್ಲಿ ಸರ್ಕಾರವಾಗಲೀ ಅಥವಾ ಕುಟುಂಬವಾಗಲೀ ಆಡಂಬರದ ಕಾರ್ಯಕ್ರಮ ಮತ್ತು ಸ್ಮಾರಕ ನಿರ್ಮಾಣ ಮಾಡಬಾರದು.- ಜಿ.ಎಸ್ ಶಿವರುದ್ರಪ್ಪ[ಜಿ.ಎಸ್ ಶಿವರುದ್ರಪ್ಪ ನಿಧನಕ್ಕೆ ಗಣ್ಯರ ಕಂಬನಿ]
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications