ರವಿಕೃಷ್ಣಾ ರೆಡ್ಡಿ ಮೇಲೆ ಮಾಜಿ ಮೇಯರ್ ಮಂಜುನಾಥರೆಡ್ಡಿ ಬೆಂಬಲಿಗರ ಹಲ್ಲೆ
ಬೆಂಗಳೂರು, ಮಾರ್ಚ್ 14: ಪಡಿತರ ಚೀಟಿ ವಿತರಣೆಯಲ್ಲಿ ಅಕ್ರಮ ನಡೆಯುತ್ತಿದೆ ಎಂದು ಪ್ರಶ್ನಿಸಿದ ಸಾಮಾಜಿಕ ಕಾರ್ಯಕರ್ತ ರವಿಕೃಷ್ಣಾ ರೆಡ್ಡಿ ಮೇಲೆ ಮಾಜಿ ಮೇಯರ್ ಮಂಜುನಾಥ ರೆಡ್ಡಿ ಬೆಂಬಲಿಗರು ಹಲ್ಲೆ ಮಾಡಲು ಯತ್ನಿಸಿದ ಘಟನೆ ಬುಧವಾರ ನಡೆದಿದೆ.
ಮಡಿವಾಳ ವಾರ್ಡ್ ನ ತಾವರೆಕೆರೆ ಬಿಬಿಎಂಪಿ ಕಚೇರಿಯಲ್ಲಿ ಪಡಿತರ ಚೀಟಿಯನ್ನು ವಿತರಿಸಲಾಗುತ್ತಿತ್ತು. ಆದರೆ ಆ ಪಡಿತರ ಚೀಟಿ ವಿತರಣೆಯಲ್ಲಿ ಅಕ್ರಮವಿದೆ ಎನ್ನುವ ಮಾಹಿತಿ ಮೇರೆ ರವಿಕೃಷ್ಣಾರೆಡ್ಡಿ ಹಾಗೂ ಬೆಂಬಲಿಗರು ಅಲ್ಲಿಗೆ ತೆರಳಿದ್ದರು. ಬಿಬಿಎಂಪಿ ಕಚೇರಿಗೆ ತೆರಳಿ ದಾಖಲೆಗಳನ್ನು ನೀಡುವಂತೆ ಕೇಳಿದ್ದಾರೆ.
ರಾಷ್ಟ್ರ ನಾಯಕರ ಚಿತ್ರಗಳ ಮೇಲೆ ಮೂತ್ರ ವಿಸರ್ಜನೆ: ಭಾರಿ ಟೀಕೆ
ಆದರೆ ರವಿಕೃಷ್ಣಾರೆಡ್ಡಿ ಮಾತಿಗೆ ಬೆಲೆ ಕೊಡದೆ ಮಾಜಿ ಮೇಯರ್ ಮಂಜುನಾಥ ರೆಡ್ಡಿ ಅವರ ಬೆಂಬಲಿಗರು, ರವಿಕೃಷ್ಣಾ ರೆಡ್ಡಿಯವರ ಮೊಬೈಲ್ ಕಸಿದುಕೊಂಡು ಹಲ್ಲೆ ನಡೆಸಲು ಯತ್ನಿಸಿದ್ದಾರೆ. ಈ ಮಧ್ಯೆ ಮಾತಿನ ಚಕಾಮಕಿ ನಡೆದಿದೆ. ನಂತರ ಪೊಲೀಸರು ಮಧ್ಯೆ ಪ್ರವೇಶಿಸಿ ಜಗಳವನ್ನು ನಿಲ್ಲಿಸಿದ್ದಾರೆ.
ಜಯನಗರದ ಅಭಿವೃದ್ಧಿಗೆ ರವಿಕೃಷ್ಣಾ ರೆಡ್ಡಿ 5 ಸೂತ್ರಗಳು