ಸ್ಪೀಕರ್ ಮುಂದೆ ಹಾಜರಾದ ರವಿ ಬೆಳಗೆರೆ, ಅನಿಲ್ ರಾಜ್
ಬೆಂಗಳೂರು, ಜುಲೈ 3: ಹೈಕೋರ್ಟ್ ಸೂಚನೆಯಂತೆ ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಮುಂದೆ 'ಹಾಯ್ ಬೆಂಗಳೂರು' ಪತ್ರಿಕೆ ಸಂಪಾದಕ ಮತ್ತು ಮಾಲಿಕ ರವಿ ಬೆಳಗೆರೆ ಹಾಗೂ 'ಯಲಹಂಕ ವಾಯ್ಸ್' ಸಂಪಾದಕ ಅನಿಲ್ ರಾಜ್ ಹಾಜರಾದರು.
ನಂತರ ಮಾತನಾಡಿದ ರವಿ ಬೆಳಗೆರೆ ಮತ್ತು ಅನಿಲ್ ರಾಜ್ ಪರ ವಕೀಲ ಶಂಕರಪ್ಪ, "ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದೆವು. ಹೈಕೋರ್ಟ್ ಸೂಚನೆಯಂತೆ ಇಬ್ಬರೂ ಪತ್ರಕರ್ತರು ಇದೀಗ ಪುನರ್ ಪರಿಶೀಲನೆ ಅರ್ಜಿ ಸಲ್ಲಿಸಿದ್ದಾರೆ. ಯಾವ ಸಂದರ್ಭದಲ್ಲಿ ಶಿಕ್ಷೆ ವಿಧಿಸಬಹುದು ಎಂಬ ಬಗ್ಗೆ ಸ್ಪೀಕರ್ ಮುಂದೆ ವಾದ ಮಂಡಿಸಿದ್ದೇವೆ. ಇದು ಸದನದ ಹೊರಗಿನ ಪ್ರಕರಣ ಎಂಬುದನ್ನು ಮನವರಿಕೆ ಮಾಡಿಕೊಟ್ಟಿದ್ದೇವೆ," ಎಂದು ಹೇಳಿದರು.

ಅಷ್ಟೇ ಅಲ್ಲದೆ, "ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ದೇಶಗಳಲ್ಲಿರುವ ಸದನದ ನೀತಿ ಬಗ್ಗೆ ಸಭಾಪತಿಗಳಿಗೆ ವಿವರಿಸಿದ್ದೇವೆ. ತಮಿಳುನಾಡಿನಲ್ಲಿಬಾಲಕೃಷ್ಣ ಪ್ರಕರಣದಲ್ಲಿ ಸರ್ಕಾರಕ್ಕೆ ಶಿಕ್ಷೆ ವಿಧಿಸಿದ್ದನ್ನೂ ಸ್ಪೀಕರ್ ಗಮನಕ್ಕೆ ತಂದಿದ್ದೇವೆ. ಯಾವ ಕಾರಣಕ್ಕೂ ಇಬ್ಬರೂ ಪತ್ರಕರ್ತರನ್ನು ಬಂಧಿಸಲಾಗುವುದಿಲ್ಲ," ಎಂದು ಹೇಳಿದರು.
ಇನ್ನು ಸ್ಪೀಕರ್ ಕೆ.ಬಿ ಕೋಳಿವಾಡ ಹೇಳಿಕೆ ನೀಡಿ, "ರವಿ ಬೆಳಗೆರೆ ಮತ್ತು ಅನಿಲ್ ರಾಜ್ ವಕೀಲರ ಮೂಲಕ ಪಿಟಿಷನ್ ಕೊಟ್ಟಿದ್ದಾರೆ. ಅವರ ಮನವಿ ಸ್ವೀಕಾರ ಮಾಡಿದ್ದೇವೆ. ನಮ್ಮದೇ ಆದ ನಿಯಮಾವಳಿ ಪ್ರಕಾರ ಮುಂದೆ ನಡೆದುಕೊಳ್ಳುತ್ತೇವೆ. ನಾನು ಯಾವುದೇ ಆದೇಶ ಕೊಟ್ಟಿಲ್ಲ. ಹಕ್ಕುಭಾದ್ಯತಾ ಸಮಿತಿಯವರು ವರದಿ ಕೊಟ್ಟಿದ್ದರು. ಸದನ ಪಕ್ಷಪಾತವಿಲ್ಲದೇ ಒಮ್ಮತದ ಅಭಿಪ್ರಾಯಕ್ಕೆ ಬಂದಿತ್ತು. ಸದನದ ನಿಯಮವನ್ನು ನಾನು ಕಾರ್ಯರೂಪಕ್ಕೆ ತಂದಿದ್ದೇನೆ ಅಷ್ಟೆ. ನಾನು ಇಲ್ಲಿ ಸ್ಪೀಕರ್ ಅಷ್ಟೆ. ಮುಂದೆ ಕಾನೂನು ಏನಿದೆ ಅದರಂತೆ ನಡೆದುಕೊಳ್ಳುತ್ತೇವೆ," ಎಂದು ಹೇಳಿದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications