ರವಿ ಬೆಳಗೆರೆ ಬಂಧನ : ಯಶೋಮತಿ ಫೇಸ್ಬುಕ್ ಸ್ಟೇಟಸ್
Recommended Video

ಬೆಂಗಳೂರು, ಡಿಸೆಂಬರ್. 11 : ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ ರವಿ ಬೆಳಗೆರೆ ಬಂಧನದ ಬಗ್ಗೆ 2ನೇ ಪತ್ನಿ ಯಶೋಮತಿ ಮೌನ ಮುರಿದಿದ್ದಾರೆ.
ಸಹೋದ್ಯೋಗಿ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ಕೊಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ರವಿ ಬೆಳಗೆರೆ, ನ್ಯಾಯಾಂಗ ಬಂಧನಲ್ಲಿದ್ದು, ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.
ಯಶೋಮತಿ ಅವರು ಇಂದು ಸಂಜೆ ಫೇಸ್ ಬುಕ್ನಲ್ಲಿ ಹಾಕಿರುವ ಸ್ಟೇಟಸ್ ಹೀಗಿದೆ.

'ಮೊನ್ನೆ ತಾನೇ ನಡೆದ ಹಿಮನ ಬರ್ತ್ ಡೇಯ ಫೊಟೋಗಳನ್ನು ನೋಡುತ್ತಾ ಕುಳಿತಿದ್ದೆ. ಅದರಲ್ಲಿ ಕೆಲವನ್ನು select ಮಾಡಿ ರವಿಗೆ ಕಳಿಸಬೇಕು ಅಂದುಕೊಳ್ಳುವಷ್ಟರಲ್ಲಿ.... "ಯಶೂ ಮಾ ಎಲ್ಲಿದ್ದೀರ? ಒಂದು ಸ್ವಲ್ಪ ಟಿವಿ ನೋಡಿ" ಅಂದ ಕೂಡಲೇ ಅದನ್ನು ಅಲ್ಲೇ ಬಿಟ್ಟು ಟಿವಿ ಆನ್ ಮಾಡಿದವಳ ಕಿವಿಗೆ ಮೊದಲು ರಾಚಿದ್ದೇ ನನ್ನ ಹೆಸರು... ಏನಾಗ್ತಿದೆ? ನನ್ನ ಹೆಸರು ಯಾಕೆ ಬರ್ತಿದೆ ಅದೂ ನಂಗೇ ಗೊತ್ತಿಲ್ಲದೇ.... ಹಿಮ ಬೇರೆ ಸ್ಕೂಲಿಂದ ಬರುವ ಹೊತ್ತಾಗಿತ್ತು. ಮೊದಲು ಓಡಿ ಹೋಗಿ ಅವನನ್ನು ಕರೆದುಕೊಂಡು ಬಂದೆ.
ರಾತ್ರಿಯಿಡೀ ಒಂದೇ ಸಮನೆ ಟಿವಿಗಳಲ್ಲಿ ಬಿತ್ತರವಾಗುತ್ತಿದ್ದ ಸುದ್ದಿಗಳು ಕಿವಿಗೆ ಕಾದ ಸೀಸದಂತೆ ಬೀಳುತ್ತಿದ್ದವು. ಕಚೇರಿಯಲ್ಲಿ ಫೋನುಗಳೆಲ್ಲ ಪೊಲೀಸರ ವಶದಲ್ಲಿದ್ದವು. ಹಾಗಾಗಿ ಎಲ್ಲಿಂದಲೂ ಉತ್ತರ ಸಿಗುತ್ತಿಲ್ಲ. ಸರಿ ಆದದ್ದಾಗಲಿ ನೋಡೋಣ ಭಗವಂತನೊಬ್ಬನಿದ್ದಾನೆ ಅಂದು ಧೈರ್ಯವಾಗಿ ಕುಳಿತವಳಿಗೆ ಅಮ್ಮ, ತಂಗಿ, ಅಣ್ಣನ ಮಗನ ಜೊತೆಗೆ ಗೆಳತಿಯರ ಧೈರ್ಯ ತುಂಬುವ ಮೆಸೇಜುಗಳು ಜೊತೆಯಾದವು.
ಅಮ್ಮಾ ಯಾವುದಕ್ಕೂ ಹೆದರಿಕೊಳ್ಳಬೇಡ. ಏನೇ ಬಂದ್ರೂ ಧೈರ್ಯವಾಗಿ face ಮಾಡು.... ಅಂದ ಹಿಮ.
ಅನುಮಾನಗಳು, ಅವಮಾನಗಳು, ಆರೋಪಗಳು ಬೆನ್ನ ಹಿಂದೆ ನೆರಳಿನಂತೆ ನಡೆದು ಬರುತ್ತಲೇ ಇವೆ. ನಿಖರವಾದ ಮಾಹಿತಿಯಿಲ್ಲದೆ ಟಿವಿ ಮಾಧ್ಯಮಗಳು ತಮಗೆ ಬೇಕಾದ ಬಣ್ಣ ತುಂಬಿ ಒಂದು ರೀತಿಯ ರಿವೇಂಜಿಗಿಳಿದಿವೆ. ಕೆಲವರಿಗೆ ಮನರಂಜನೆ, ಕೆಲವರಿಗೆ ಆತಂಕ. ಕೆಲವರಿಗೆ ಕುತೂಹಲ. ಇನ್ನು ಕೆಲವರಿಗೆ ಅನುಮಾನ....
"ಏನೂ ಯೋಚನೆ ಮಾಡಬೇಡ ನಂಗೇನೂ ಆಗಲ್ಲ" ಅಂತ ಚೆಲ್ಲಿ ಹೋದ ರವಿಯ ನಗುವೇ ಮನೆ ಮನ ತುಂಬಿದೆ. ಅದೇ ನಿರೀಕ್ಷೆಯಲ್ಲಿದ್ದೇವೆ ನಾನು ಹಿಮ.
ನಿಮಗೇನೂ ಆಗಲ್ಲ ವೀ. ನಮ್ಮೆಲ್ಲರ ಪ್ರಾರ್ಥನೆ ಸದಾ ನಿಮ್ಮೊಂದಿಗಿದೆ. ಇದೊಂದು ಸಣ್ಣ ಪರೀಕ್ಷೆ ಅಷ್ಟೆ. ಅದರಲ್ಲಿ ಗೆದ್ದು ಬರುವಿರೆಂಬ ನಂಬಿಕೆ ನನಗಿದೆ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications