ರವಿ ಬೆಳಗೆರೆಗೆ ಮತ್ತೆ ಮೂರು ದಿನ ಮಧ್ಯಂತರ ಜಾಮೀನು ಮುಂದುವರಿಕೆ
ಬೆಂಗಳೂರು, ಡಿಸೆಂಬರ್, 18 : ಸಹೋದ್ಯೋಗಿ ಕೊಲೆಗೆ ರವಿ ಬೆಳಗೆರೆ ಸುಪಾರಿ ನೀಡಿದ ಪ್ರಕರಣ ಡಿ.21ರವರೆಗೆ ಆದೇಶ ಕಾಯ್ದಿರಿಸಿದ ಸೆಷನ್ಸ್ ನ್ಯಾಯಾಲಯ ಅಲ್ಲಿಯವರೆಗೆ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿದೆ.
ಮಾಜಿ ಸಹೋದ್ಯೋಗಿ ಸುನಿಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ನೀಡಿದ ಆರೋಪದ ಆರೋಪ ಎದುರಿಸುತ್ತಿದ್ದ ಬೆಳಗೆರೆ, ಕಳೆದ ಆರು ದಿನಗಳಿಂದ ಮಧ್ಯಂತರ ಜಾಮೀನಿನ ಮೇಲೆ ಚಿಕಿತ್ಸೆ ಪಡೆಯುತ್ತಿದ್ದರು. ರವಿ ಬೆಳಗೆರೆ ಅವರನ್ನು ಸೋಮವಾರ ಸೆಷನ್ ನ್ಯಾಯಾಲಯದ ಮುಂದೆ ಅವರನ್ನು ಹಾಜರುಪಡಿಸಲಾಯಿತು.

ರವಿ ಬೆಳಗೆರೆ ಅವರು ವಿನಾಕಾರಣ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದಾರೆ ಅವರಿಗೆ ಯಾವುದೇ ತೊಂದರೆಯಿಲ್ಲ, ಹಾಗಾಗಿ ಅವರ ಜಾಮೀನನ್ನು ವಿಸ್ತರಿಸಬಾರದು ಎಂದು ಸರ್ಕಾರಿ ಅಭಿಯೋಜನಕರು ನ್ಯಾಯಾಲಯಕ್ಕೆ ಆಕ್ಷೇಪಣಾ ಪತ್ರ ಸಲ್ಲಿಸಿದ್ದರು. ಸರ್ಕಾರಿ ವಕೀಲಲರು ನ್ಯಾಯಾಧೀಶರ ಎದುರು ವಾದ ಮಂಡಿಸುತ್ತಾ ರವಿ ಬೆಳಗೆರೆ ಮುಗ್ಧರಂತೆ ನಾಟಕ ಮಾಡುತ್ತಿದ್ದಾರೆ. ಅವರನ್ನು ನ್ಯಾಯಾಲಯ ನಂಬಬಾರದು ಎಂದು ಮನವಿ ಮಾಡಿದರು.
ಇದಕ್ಕೆ ಉತ್ತರಿಸಿದ ರವಿಬೆಳಗೆರೆ ಪರ ವಕೀಲ ದಿವಾಕರ್ ರವಿ ಬೆಳಗೆರೆ ಅವರು ವಿನಾಕಾರಣ ಆಸ್ಪತ್ರೆಗೆ ದಾಖಲಾಗಿಲ್ಲ. ಅವರಿಗೆ ಹೃದಯ ಸಂಬಂಧಿ ತೊಂದರೆಯಿದ್ದು ಆಂಜಿಯೋಗ್ರಾಮ್ ಮಾಡಬೇಕು ಎಂದು ಜಯದೇವ ಆಸ್ಪತ್ರೆಯ ಡಾ. ಆಶಾಲತಾ ಅವರು ತಿಳಿಸಿದ್ದಾರೆ. ರವಿ ಬೆಳಗೆರೆ ಯಾವುದೇ ಕೊಲೆ ಪ್ರಯತ್ನ ಮಾಡಿಲ್ಲ ಎಂದು ವಾದ ಮಂಡಿಸಿದರು.
ನಂತರ ರವಿ ಬೆಳಗೆರೆ ಅವರ ಮನೆಯಲ್ಲಿ ಪಿಸ್ತೂಲು, 93 ಗುಂಡುಗಳು ದೊರೆತ ವಿಚಾರ ಮಾತನಾಡಿ, ಕಾನೂನಿನಲ್ಲಿ ಒಂದು ವರ್ಷಕ್ಕೆ 200 ಗುಂಡುಗಳನ್ನು ಬಳಸಬಹುದು ಎಂಬ ನಿಯಮ ವಿದೆ ಎಂದು ವಾದ ಮಂಡನೆ ಮಾಡಿದರು. ಅವರು ಯಾವುದೇ ತಪ್ಪುಗಳನ್ನು ಮಾಡಿಲ್ಲ, ಅವರ ಆರೋಗ್ಯ ಸ್ಥಿತಿಯೂ ಸರಿಯಲ್ಲ ಹಾಗಾಗಿ ಜಾಮೀನನ್ನು ವಿಸ್ತರಿಸಬೇಕು ಎಂದು ಮನವಿ ಮಾಡಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications