ರವಿ ಬೆಳಗೆರೆಗೆ ಮತ್ತೆ ಮೂರು ದಿನ ಮಧ್ಯಂತರ ಜಾಮೀನು ಮುಂದುವರಿಕೆ
ಬೆಂಗಳೂರು, ಡಿಸೆಂಬರ್, 18 : ಸಹೋದ್ಯೋಗಿ ಕೊಲೆಗೆ ರವಿ ಬೆಳಗೆರೆ ಸುಪಾರಿ ನೀಡಿದ ಪ್ರಕರಣ ಡಿ.21ರವರೆಗೆ ಆದೇಶ ಕಾಯ್ದಿರಿಸಿದ ಸೆಷನ್ಸ್ ನ್ಯಾಯಾಲಯ ಅಲ್ಲಿಯವರೆಗೆ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿದೆ.
ಮಾಜಿ ಸಹೋದ್ಯೋಗಿ ಸುನಿಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ನೀಡಿದ ಆರೋಪದ ಆರೋಪ ಎದುರಿಸುತ್ತಿದ್ದ ಬೆಳಗೆರೆ, ಕಳೆದ ಆರು ದಿನಗಳಿಂದ ಮಧ್ಯಂತರ ಜಾಮೀನಿನ ಮೇಲೆ ಚಿಕಿತ್ಸೆ ಪಡೆಯುತ್ತಿದ್ದರು. ರವಿ ಬೆಳಗೆರೆ ಅವರನ್ನು ಸೋಮವಾರ ಸೆಷನ್ ನ್ಯಾಯಾಲಯದ ಮುಂದೆ ಅವರನ್ನು ಹಾಜರುಪಡಿಸಲಾಯಿತು.

ರವಿ ಬೆಳಗೆರೆ ಅವರು ವಿನಾಕಾರಣ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದಾರೆ ಅವರಿಗೆ ಯಾವುದೇ ತೊಂದರೆಯಿಲ್ಲ, ಹಾಗಾಗಿ ಅವರ ಜಾಮೀನನ್ನು ವಿಸ್ತರಿಸಬಾರದು ಎಂದು ಸರ್ಕಾರಿ ಅಭಿಯೋಜನಕರು ನ್ಯಾಯಾಲಯಕ್ಕೆ ಆಕ್ಷೇಪಣಾ ಪತ್ರ ಸಲ್ಲಿಸಿದ್ದರು. ಸರ್ಕಾರಿ ವಕೀಲಲರು ನ್ಯಾಯಾಧೀಶರ ಎದುರು ವಾದ ಮಂಡಿಸುತ್ತಾ ರವಿ ಬೆಳಗೆರೆ ಮುಗ್ಧರಂತೆ ನಾಟಕ ಮಾಡುತ್ತಿದ್ದಾರೆ. ಅವರನ್ನು ನ್ಯಾಯಾಲಯ ನಂಬಬಾರದು ಎಂದು ಮನವಿ ಮಾಡಿದರು.
ಇದಕ್ಕೆ ಉತ್ತರಿಸಿದ ರವಿಬೆಳಗೆರೆ ಪರ ವಕೀಲ ದಿವಾಕರ್ ರವಿ ಬೆಳಗೆರೆ ಅವರು ವಿನಾಕಾರಣ ಆಸ್ಪತ್ರೆಗೆ ದಾಖಲಾಗಿಲ್ಲ. ಅವರಿಗೆ ಹೃದಯ ಸಂಬಂಧಿ ತೊಂದರೆಯಿದ್ದು ಆಂಜಿಯೋಗ್ರಾಮ್ ಮಾಡಬೇಕು ಎಂದು ಜಯದೇವ ಆಸ್ಪತ್ರೆಯ ಡಾ. ಆಶಾಲತಾ ಅವರು ತಿಳಿಸಿದ್ದಾರೆ. ರವಿ ಬೆಳಗೆರೆ ಯಾವುದೇ ಕೊಲೆ ಪ್ರಯತ್ನ ಮಾಡಿಲ್ಲ ಎಂದು ವಾದ ಮಂಡಿಸಿದರು.
ನಂತರ ರವಿ ಬೆಳಗೆರೆ ಅವರ ಮನೆಯಲ್ಲಿ ಪಿಸ್ತೂಲು, 93 ಗುಂಡುಗಳು ದೊರೆತ ವಿಚಾರ ಮಾತನಾಡಿ, ಕಾನೂನಿನಲ್ಲಿ ಒಂದು ವರ್ಷಕ್ಕೆ 200 ಗುಂಡುಗಳನ್ನು ಬಳಸಬಹುದು ಎಂಬ ನಿಯಮ ವಿದೆ ಎಂದು ವಾದ ಮಂಡನೆ ಮಾಡಿದರು. ಅವರು ಯಾವುದೇ ತಪ್ಪುಗಳನ್ನು ಮಾಡಿಲ್ಲ, ಅವರ ಆರೋಗ್ಯ ಸ್ಥಿತಿಯೂ ಸರಿಯಲ್ಲ ಹಾಗಾಗಿ ಜಾಮೀನನ್ನು ವಿಸ್ತರಿಸಬೇಕು ಎಂದು ಮನವಿ ಮಾಡಿದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications