ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ಶಾಸಕ ರವಿ ಸುಬ್ರಹ್ಮಣ್ಯ ಸ್ಪರ್ಧೆ!?
ಬೆಂಗಳೂರು, ಮಾರ್ಚ್ 26: ಸೋಮವಾರ ಮಧ್ಯರಾತ್ರಿಯ ಸುದ್ದಿ ಪ್ರಕಾರ ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ ಅವರು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಹೆಸರೂ ಒಳಗೊಂಡಂತೆ ಹಲವಾರು ಹೆಸರು ಹರಿದಾಡುತ್ತಿರುವುದರಿಂದ ಮಂಗಳವಾರ ನಾಮಪತ್ರ ಸಲ್ಲಿಕೆಗೂ ಮುನ್ನ ಅಧಿಕೃತ ಘೋಷಣೆಯಿಂದಲೇ ಖಾತ್ರಿ ಆಗಬೇಕಿದೆ.
ತೇಜಸ್ವಿನಿ ಅನಂತಕುಮಾರ್, ಶಾಸಕ ಸುರೇಶ್ ಕುಮಾರ್, ಬಿ.ಎಲ್.ಸಂತೋಷ್, ತೇಜಸ್ವಿ ಸೂರ್ಯ, ನಿರ್ಮಲಾ ಸೀತಾರಾಮನ್ ಹೀಗೆ ಹಲವಾರು ಹೆಸರನ್ನು ಬಿಜೆಪಿ ಅಭ್ಯರ್ಥಿಯಾಗಬಹುದು ಎಂಬ ಸಾಲಿನಲ್ಲಿ ತೇಲಿ ಬಿಡಲಾಗಿತ್ತು. ಆದರೆ ಸೋಮವಾರ ರಾತ್ರಿಯ ಹೊತ್ತಿಗೆ ರವಿ ಸುಬ್ರಹ್ಮಣ್ಯ ಅವರ ಹೆಸರು ಸ್ವಲ್ಪ ಜೋರಾಗಿಯೇ ಕೇಳಿಬಂದಿದೆ.
ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಯಾಗಿ ಕಾಂಗ್ರೆಸ್ ಟಿಕೆಟ್ ನಿಂದ ಬಿ.ಕೆ.ಹರಿಪ್ರಸಾದ್ ಅಖಾಡದಲ್ಲಿ ಇದ್ದಾರೆ. ಹೀಗೆ ಕೊನೆ ಕ್ಷಣದವರೆಗೆ ಬಿಜೆಪಿಯಿಂದ ಅಭ್ಯರ್ಥಿಯ ಘೋಷಣೆ ಮಾಡದಿರುವುದಕ್ಕೆ ಪಕ್ಷದ ತಂತ್ರವೇ ಕಾರಣ ಎನ್ನಲಾಗುತ್ತಿದೆ. ಏಕೆಂದರೆ, ಕೇಂದ್ರದ ವರಿಷ್ಠರಿಗೆ ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿಯಾಗಿ ತೇಜಸ್ವಿನಿ ಅನಂತಕುಮಾರ್ ಒಬ್ಬರ ಹೆಸರನ್ನು ಮಾತ್ರ ಶಿಫಾರಸು ಮಾಡಲಾಗಿತ್ತು.

ಆದರೆ, ಈ ಆಯ್ಕೆಯ ಹೊರತಾಗಿ ಬೇರೆ ಸಾಧ್ಯತೆಗಳನ್ನು ಕೂಡ ಪಕ್ಷದ ವರಿಷ್ಠರು ಗಮನಿಸಿದ್ದಾರೆ ಎನ್ನುತ್ತವೆ ಮೂಲಗಳು. ಬೆಂಗಳೂರು ದಕ್ಷಿಣವು ಬಿಜೆಪಿ ಪಾಲಿಗೆ ಭದ್ರ ಕೋಟೆ. ಅಲ್ಲಿಂದ ಒಬ್ಬರು ಸಂಸದರನ್ನು ಮಾತ್ರ ಗೆಲ್ಲಿಸಿಕೊಳ್ಳುವುದು ಬಿಜೆಪಿ ಉದ್ದೇಶ ಆಗಬಾರದು. ಕರ್ನಾಟಕದಿಂದ ಒಬ್ಬ ಅದ್ಭುತ ಸಂಸದೀಯ ಪಟು ಸಂಸತ್ ಪ್ರವೇಶಿಸುವಂತಾಗಬೇಕು ಎಂಬುದು ಕೂಡ ಉದ್ದೇಶವಾಗಿದೆ ಎಂಬುದು ಸದ್ಯಕ್ಕೆ ದೊರೆತಿರುವ ಮಾಹಿತಿ.
ಹಾಗಿದ್ದರೆ ಪಕ್ಷದಲ್ಲಿ ಇಷ್ಟೆಲ್ಲ ಗೊಂದಲ ಏಕೆ ಎಂದು ಪ್ರಶ್ನಿಸಿದರೆ, ಗೊಂದಲ ಪಕ್ಷದ ವರಿಷ್ಠರಲ್ಲಿ ಇಲ್ಲ. ಯಾರಿಗೆ ಟಿಕೆಟ್ ನೀಡಬೇಕು ಎಂಬ ಬಗ್ಗೆ ಸ್ಪಷ್ಟತೆ ಇದೆ. ಆದರೆ ಜನರು ಹಾಗೂ ಮಾಧ್ಯಮಗಳಲ್ಲಿ ಆ ರೀತಿ ಗೊಂದಲ ಅಷ್ಟೇ ಎಂದು ಬಿಜೆಪಿಯ ಹಿರಿಯ ಕಾರ್ಯಕರ್ತರೊಬ್ಬರು ಉತ್ತರಿಸುತ್ತಾರೆ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications