ಮದ್ಯ ನಿಷೇಧದಿಂದ ರಾಜ್ಯದ ಬೊಕ್ಕಸಕ್ಕೆ ನಷ್ಟ ಎಂಬುದು ಸುಳ್ಳು: ರವಿಕೃಷ್ಣಾ ರೆಡ್ಡಿ
ಬೆಂಗಳೂರು, ಜನವರಿ 30: ಮದ್ಯ ನಿಷೇಧದಿಂದ ರಾಜ್ಯದ ಬೊಕ್ಕಸಕ್ಕೆ ಹಣದ ಹರಿವು ಕಡಿಮೆ ಆಗುತ್ತದೆ ಎಂಬುದು ತಪ್ಪು ಲೆಕ್ಕಾಚಾರ, ಮದ್ಯ ನಿಷೇಧದಿಂದ ರಾಜ್ಯದ ಬೊಕ್ಕಸಕ್ಕೆ ಪರೋಕ್ಷ ಲಾಭವೇ ಆಗುತ್ತದೆ ಎಂದು ಹೊಸ ಲೆಕ್ಕಾಚಾರವನ್ನು ಲಂಚಮುಕ್ತ ಕರ್ನಾಟಕ ವೇದಿಕೆ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ಮುಂದಿಟ್ಟಿದ್ದಾರೆ.
ಮದ್ಯ ನಿಷೇಧಕ್ಕೆ ಒತ್ತಾಯಿಸಿ ಪಾದಯಾತ್ರೆಯಲ್ಲಿ ಬೆಂಗಳೂರಿಗೆ ಬಂದ ಮಹಿಳೆಯರ ಬೆನ್ನೆಲುಬಾಗಿ ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಅವರು, ಒನ್ಇಂಡಿಯಾ ಕನ್ನಡದ ಜೊತೆ ಸಂಪೂರ್ಣ ಮದ್ಯ ನಿಷೇಧದ ಸಾಧಕ-ಬಾಧಕಗಳ ಬಗ್ಗೆ ಮಾತನಾಡಿದರು.
ನಮ್ಮ ರಾಜ್ಯದ ಬಜೆಟ್ 2.20 ಲಕ್ಷ ಕೋಟಿ ಇದರಲ್ಲಿ ಅಬಕಾರಿಯಿಂದ ಬರುವ ಲಾಭ 16 ರಿಂದ 18 ಸಾವಿರ ಕೋಟಿ. 2.20 ಲಕ್ಷ ಕೋಟಿಗೆ ಹೋಲಿಸಿದರೆ ಇದು ಅಷ್ಟೇನೂ ದೊಡ್ಡ ಪ್ರಮಾಣದ ಮೊತ್ತವಲ್ಲ. ಪೂರ್ಣ ಮದ್ಯ ನಿಷೇಧಿಸಿದ ರಾಜ್ಯಗಳು ಸಹ ಯಾವುದೇ ಹಣಕಾಸಿನ ಕೊರತೆ ಇಲ್ಲದೆ ಬಜೆಟ್ ಮಂಡಿಸಿವೆ ಎಂದು ಅವರು ಹೇಳಿದರು.

ಮದ್ಯ ನಿಷೇಧ ಮಾಡಿದರೆ ಸರ್ಕಾರವು ಆರೋಗ್ಯದ ಮೇಲೆ ಮಾಡುವ ಖರ್ಚು ಉಳಿತಾಯವಾಗುತ್ತದೆ. ಬಡತನ ರೇಖೆ ಕೆಳಗಿರುವ ಕುಟುಂಬಗಳು ಮೇಲೆ ಬರುತ್ತವೆ. ಅವುಗಳ ಮೇಲೆ ಸರ್ಕಾರ ಖರ್ಚು ಮಾಡುವ ಹಣ ಉಳಿತಾಯವಾಗುತ್ತದೆ. ಅಪಘಾತಗಳು ಭಾರಿ ಪ್ರಮಾಣದಲ್ಲಿ ಕಡಿಮೆ ಆಗುತ್ತದೆ. ಹೆಣ್ಣು ಮಕ್ಕಳ ಆರೋಗ್ಯ ಸುಧಾರಣೆಯೂ ಆಗುತ್ತದೆ. ಶಿಕ್ಷಣ ಹೆಚ್ಚಾಗುತ್ತದೆ ಎಂದು ಅವರು ಮದ್ಯ ನಿಷೇದಿಂದಾಗುವ ಧನಾತ್ಮಕ ಅಂಶಗಳ ಪಟ್ಟಿ ತೆರೆದಿಟ್ಟರು.
ಪ್ರಸ್ತುತ ಮಹಿಳೆಯರ ಪಾದಯಾತ್ರೆಯ ಬಗ್ಗೆ ಮಾತನಾಡಿದ ಅವರು, ಬಿಜಾಪುರ, ಹಾವೇರಿ, ಕಲಬುರಗಿ, ಬೀದರ್, ಬೆಳಗಾವಿ, ಚಿತ್ರದುರ್ಗ, ಕೋಲಾರ, ಕೊಪ್ಪಳ, ಗಂಗಾವತಿ ಇನ್ನೂ ಹಲವು ಜಿಲ್ಲೆಗಳಿಂದ ಸುಮಾರು ಮೂರು ಸಾವಿರ ಮಹಿಳೆಯರು ಹಗಲು ಇರುಳೆನ್ನದೆ ಪಾದಯಾತ್ರೆಯಲ್ಲಿ ಬೆಂಗಳೂರಿಗೆ ಬಂದಿದ್ದಾರೆ. ತಮ್ಮ ಮನವಿ ನೀಡಲು ಬಂದಿದ್ದಾರೆ ಆದರೆ ಸರ್ಕಾರ ಅವರನ್ನು ತಮ್ಮ ಬಳಿಗೆ ಬಿಟ್ಟುಕೊಳ್ಳಲು ತಯಾರಿಲ್ಲ ಎಂದು ಅವರು ಹೇಳಿದರು.

ರಾಜಕಾರಣಿಗಳು ವಿಧಾನಸೌಧವನ್ನು ಖಾಸಗಿ ರೆಸಾರ್ಟ್ ಮಾಡಿಕೊಂಡಿದ್ದಾರೆ. ಮದ್ಯದ ಬಲದ ಮೇಲೆಯೇ ಚುನಾವಣೆ ಗೆಲ್ಲುವ ಅವರಿಗೆ ಮದ್ಯ ನಿಷೇಧ ಎಂದರೆ ಮೈಮೇಲೆ ಚೇಳು ಬಿಟ್ಟಂತಾಗುತ್ತಿದೆ. ಹಾಗಾಗಿಯೇ ಮಹಿಳೆಯರನ್ನು ತಡೆಯಲು ಇಷ್ಟೋಂದು ಪೊಲೀಸ್ ಬಲವನ್ನು ಸರ್ಕಾರ ಬಳಸುತ್ತಿದೆ.
ಮೊನ್ನೆ ಒಂದು ನಿಯೋಗವು ಕುಮಾರಸ್ವಾಮಿ ಅವರನ್ನು ಭೇಟಿ ಆಯಿತು ಆದರೆ ಮದ್ಯ ನಿಷೇಧದ ಬಗ್ಗೆ ಉಡಾಫೆ ಉತ್ತರವೇ ಬಂತೇ ಹೊರತು ಸಕಾರಾತ್ಮಕ ಉತ್ತರ ಬರಲಿಲ್ಲ. ಹೆಣ್ಣು ಮಕ್ಕಳು ತಮ್ಮ ಕುಟುಂಬಗಳನ್ನು ಉಳಿಸಿಕೊಳ್ಳಲು ಕೇಳುತ್ತಿದ್ದಾರೆ ಕುಮಾರಸ್ವಾಮಿ ಅವರು ಮಹಿಳೆಯರ ಗೌರವ ಉಳಿಸುವ ಕಾರ್ಯ ಮಾಡಬೇಕು ಎಂದು ರವಿಕೃಷ್ಣಾ ರೆಡ್ಡಿ ಒತ್ತಾಯಿಸಿದರು.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications