RCB: ಆರ್ಸಿಬಿ ಕಾಲ್ತುಳಿತ ಪ್ರಕರಣ: ಮರಣೋತ್ತರ ಶವ ಪರೀಕ್ಷೆ ಸಮಯದಲ್ಲಿ ಯುವತಿಯ ಚಿನ್ನಾಭರಣ ಕಳ್ಳತನ, ದೂರು ದಾಖಲು!
RCB: ರಾಯಲ್ ಚಾಲೆಂಜರ್ಸ್ಸ್ ಬೆಂಗಳೂರು ಸಂಭ್ರಮಾಚರಣೆಯ ವೇಳೆ ನಡೆದಿದ್ದ ಕಾಲ್ತುಳಿತ ಪ್ರಕರಣ ಇದೀಗ ಭಾರೀ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈ ಕೇಸ್ನಲ್ಲಿ ಹಲವರು ಜೈಲು ಸೇರುವ ಸಾಧ್ಯತೆ ಇದೆ. ಕರ್ನಾಟಕದ ಪೊಲೀಸರು ಹಾಗೂ ಆರ್ಸಿಬಿ ತಂಡಕ್ಕೂ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಆದರೆ, ಈ ಕಾಲ್ತುಳಿತದಲ್ಲಿ ದಾರುಣವಾಗಿ ಸಾವನ್ನಪ್ಪಿದವರ ಕುಟುಂಬದವರ ಆಕ್ರಂದನ ಕಡಿಮೆ ಆಗುತ್ತಿಲ್ಲ. ಇನ್ನೂ ಆ ಕರಾಳ ದಿನ ಸಾವನ್ನಪ್ಪಿದವರ ಕುಟುಂಬದವರಿಗೆ ಆ ನೋವಿನಿಂದ ಇನ್ನೂ ಹೊರಗೆ ಬರುವುದಕ್ಕೆ ಸಾಧ್ಯವಾಗುತ್ತಿಲ್ಲ. ಬೆಂಗಳೂರಿನಲ್ಲಿ ಇತ್ತೀಚಿನ ವರ್ಷಗಳಲ್ಲಿ ಸಂಭವಿಸಿದ ಭಾರೀ ದೊಡ್ಡ ಕಾಲ್ತುಳಿತ ಪ್ರಕರಣ ಇದಾಗಿದೆ. ಆರ್ಸಿಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದ ನಂತರವೂ ಮುಜುಗರಕ್ಕೆ ಒಳಗಾಗುವಂತಹ ಘಟನೆ ಸಂಭವಿಸಿರುವುದು ಇದೀಗ ವರದಿಯಾಗಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಈಚೆಗೆ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟಿದ್ದ ಯುವತಿಯೊಬ್ಬರ ಚಿನ್ನಾಭರಣಗಳನ್ನು ಆ ನೋವಿನ ಸಂದರ್ಭದಲ್ಲೂ ಕಳವು ಮಾಡಲಾಗಿದೆ ಎಂದು ಆರೋಪಿಸಿ ತಾಯಿಯೊಬ್ಬರು ದೂರು ದಾಖಲಿಸಿದ್ದಾರೆ. ಇದು ಭಾರೀ ಆಕ್ರೋಶ ಹಾಗೂ ಅಸಮಾಧಾನಕ್ಕೆ ಕಾರಣವಾಗಿದೆ. ಬೆಂಗಳೂರಿನಲ್ಲಿ ನಡೆದಿದ್ದ ಆರ್ಸಿಬಿಯ ಸಂಭ್ರಮಾಚರಣೆ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜನೆ ಮಾಡಿರಲಿಲ್ಲ. ಅಲ್ಲದೇ ಈ ಕಾರ್ಯಕ್ರಮದಲ್ಲಿ ಸಮಯದಲ್ಲಿ ಸಂಭವಿಸಿದ ದುರಂತಕ್ಕೆ ಸರ್ಕಾರದ ನಿರ್ಲಕ್ಷ್ಯ ಧೋರಣೆಯೂ ಕಾರಣ ಎನ್ನುವ ಮಾತುಗಳು ಸಹ ಕೇಳಿ ಬಂದಿತ್ತು. ಇದೀಗ ಈ ಕಾಲ್ತುಳಿತದಲ್ಲಿ ಮೃತಪಟ್ಟ ಯುವತಿಯ ಚಿನ್ನಾಭರಣವು ಕಳುವಾಗಿದೆ ಎಂದು ವರದಿಯಾಗಿದೆ.

ಇದೇ ಜೂನ್ 4 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ್ದ ಕಾಲ್ತುಳಿತದಲ್ಲಿ 18 ವರ್ಷದ ದಿವ್ಯಾಂಶಿ ಎನ್ನುವವರು ಸಾವನ್ನಪ್ಪಿದ್ದರು. ದಿವ್ಯಾಂಶಿ ಅವರ ತಾಯಿ ಅಶ್ವಿನಿ ಅವರು ಇದೀಗ ಬೆಂಗಳೂರಿನ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಪೊಲೀಸ್ ದೂರು ನೀಡಿದ್ದಾರೆ. ಅವರು ದಾಖಲಿಸಿರುವ ದೂರಿನಲ್ಲಿ ಗಂಭೀರವಾದ ಆರೋಪವೊಂದನ್ನು ಮಾಡಿದ್ದಾರೆ.
ಶವಪರೀಕ್ಷೆಯ ನಂತರ ಅವರ ಮಗಳ ದೇಹವನ್ನು ಹಸ್ತಾಂತರಿಸಲಾಗಿತ್ತು. ಆದರೆ ಈ ಸಂದರ್ಭದಲ್ಲಿ ದಿವ್ಯಾಂಶಿ ಅವರ ಚಿನ್ನದ ಕಿವಿಯೋಲೆಗಳನ್ನು ಕಳ್ಳತನ ಮಾಡಲಾಗಿದೆ. ಈ ಒಡವೆಗಳು ಕಳುವಾಗಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ದಿವ್ಯಾಂಶ ಅವರಿಗೆ ಕಿವಿಯೋಲೆಗಳನ್ನು ಒಂದೂವರೆ ವರ್ಷಗಳ ಹಿಂದೆ ಅವರ ಚಿಕ್ಕಪ್ಪ ಗಿಫ್ಟ್ ಆಗಿ ಕೊಟ್ಟಿದ್ದರು. ಮಗಳು ಅದನ್ನು ಸದಾ ಹಾಕಿಕೊಳ್ಳುತ್ತಿದ್ದರು. ಆ ದುರಂತ ಸಂಭಸಿದ ದಿನವೂ ಅವರು ಆ ಒಡವೆಗಳನ್ನು ಧರಿಸಿದ್ದರು ಎಂದು ಹೇಳಲಾಗಿದೆ.
ಅಲ್ಲದೇ ದೂರಿನಲ್ಲಿ ಮತ್ತೊಂದು ಗಂಭೀರವಾದ ವಿಚಾರವನ್ನೂ ಅವರು ಉಲ್ಲೇಖ ಮಾಡಿದ್ದಾರೆ. ದೂರು ನೀಡುವುದಕ್ಕೆ ನಾನು ಹಲವು ಪೊಲೀಸ್ ಠಾಣೆಗೆ ಭೇಟಿ ನೀಡಿದ್ದೆ. ಆದರೆ ಯಾರೂ ದೂರು ದಾಖಲಿಸಿಕೊಳ್ಳಲಿಲ್ಲ. ಯಾವುದೇ ಪರಿಹಾರ ಸಿಗಲಿಲ್ಲ ಎಂದಿದ್ದಾರೆ. ನಾವು ಎಲ್ಲಾ ವಸ್ತುಗಳನ್ನು ಕೇಳುತ್ತಿಲ್ಲ. ನಮಗೆ ಬೇಕಾಗಿರುವುದು ಅವರ ಜ್ಞಾಪಕಾರ್ಥವಾಗಿ ಅವಳ ಕಿವಿಯೋಲೆಗಳು ಮಾತ್ರ ಎಂದು ಕಣ್ಣೀರು ಹಾಕಿದ್ದಾರೆ.
ಏನಿದು ಪ್ರಕರಣ: ರಾಯಲ್ ಚಾಲೆಂಜರ್ಸ್ಸ್ ಬೆಂಗಳೂರು ಸಂಭ್ರಮಾಚರಣೆಯ ವೇಳೆ ಭಾರೀ ದುರಂತ ಸಂಭವಿಸಿತ್ತು. ಜೂನ್ 4 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊಟ್ಟ ಮೊದಲ ಬಾರಿಗೆ ಇಂಡಿಯನ್ ಪ್ರೀಮಿಯರ್ ಲೀಗ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತ್ತು. ಆದರೆ, ಆ ಸಂಭ್ರಮಾಚರಣೆ ತುಂಬಾ ಸಮಯ ಉಳಿಯಲಿಲ್ಲ. ಆರ್ಸಿಬಿ ಹಮ್ಮಿಕೊಂಡಿದ್ದ ಸಂಭ್ರಮಾಚರಣೆಯ ಸಂದರ್ಭದಲ್ಲಿ 11 ಜನ ಆರ್ಸಿಬಿ ಅಭಿಮಾನಿಗಳು ಮೃತಪಟ್ಟಿದ್ದರು.
-
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
ಐಪಿಎಲ್ನಲ್ಲಿ ಯಾರೂ ಕೊಳ್ಳದಿದ್ದರೂ ಅಯೋಧ್ಯೆಯಲ್ಲಿ ಅಬ್ಬರಿಸಿದ ಆರ್ಸಿಬಿ ಮಾಜಿ ಆಟಗಾರ; 195 ರನ್ ಚಚ್ಚಿದ ಸ್ವಸ್ತಿಕ್ ಚಿಕಾರ -
IPL 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಟಿಕೆಟ್ ಮಾರಾಟ ಶುರು; ಇಲ್ಲಿವೆ ಬುಕಿಂಗ್ ಮಾಡುವ ವಿಧಾನಗಳು -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
RCB Yash Dayal: ಐಪಿಎಲ್ 2026ರ ಸೀಸನ್ನಿಂದ ಸ್ಟಾರ್ ವೇಗಿ ಯಶ್ ದಯಾಳ್ ಔಟ್; ಆರ್ಸಿಬಿ ಅಧಿಕೃತ ಮಾಹಿತಿ -
Nandini: ಆರ್ಸಿಬಿ ಜೊತೆ ರಾರಾಜಿಸಲಿದೆ ನಮ್ಮ ಹೆಮ್ಮೆಯ 'ನಂದಿನಿ': ಐಪಿಎಲ್-2026ರಲ್ಲಿ ಕನ್ನಡಿಗರಿಗೆ ಡಬಲ್ ಧಮಾಕಾ -
IPL 2026: ಬೆಂಗಳೂರು ಕ್ರಿಕೆಟ್ ಪ್ರೇಮಿಗಳೇ ಗಮನಿಸಿ, ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗುವ ಮುನ್ನ ಈ ಹೊಸ ರೂಲ್ಸ್ ಗೊತ್ತಿರಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications