RCB Tragedy: ದೇವಿ ತಮಿಳುನಾಡಿನವಳಾದ್ರೂ ಆರ್ಸಿಬಿ ಅಂದ್ರೆ ಜೀವ ಬಿಡ್ತಿದ್ಳು, ಈಗ ಅವಳೇ ಇಲ್ಲ!
ಆರ್ಸಿಬಿ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ದುರಂತದಲ್ಲಿ ಹಸುನೀಗಿದ 11 ಮಂದಿಯ ಕಥೆ ಕೇಳಿದ್ರೆ ಎಂತವರಿಗೂ ಕರುಳು ಕಿತ್ತುಬರುತ್ತೆ. ಒಬ್ಬೊಬ್ಬರ ಕಥೆಯೂ ಹೃದಯವಿದ್ರಾವಕವಾಗಿದೆ. ಇದೇ ದುರಂತದಲ್ಲಿ ಸಾವನ್ನಪ್ಪಿದ ದೇವಿ ಅವರ ಕಥೆ ಕೂಡ ಕಣ್ಣೀರು ತರಿಸುತ್ತದೆ. ತಮಿಳುನಾಡಿನಿಂದ ಬಂದು ಬೆಂಗಳೂರಿನ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ ಈಕೆ ಆರ್ಸಿಬಿಯ ಅಪ್ಪಟ ಅಭಿಮಾನಿ. ತನ್ನ ನೆಚ್ಚಿನ ಟೀಂ ಮೊದಲ ಕಪ್ ಗೆದ್ದಿದೆ ಎಂದು ಮಾಡುತ್ತಿದ್ದ ಕೆಲಸವನ್ನೂ ಅರ್ಧಕ್ಕೆ ನಿಲ್ಲಿಸಿ ಓಡೋಡಿ ಬಂದಿದ್ದರು. ಆ ದಿನ ಏನು ನಡೆಯಿತು ಎಂದು ದೇವಿಯ ಸಹೋದ್ಯೋಗಿಯೊಬ್ಬರು ವಿವರಿಸಿದ್ದಾರೆ.
ಮೂಲತಃ ತಮಿಳುನಾಡಿನವರಾದ ದೇವಿ ಅವರು ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಸಾಮಾನ್ಯವಾಗಿ ತಮಿಳುನಾಡಿನವರು ಹೆಚ್ಚಾಗಿ ಸಿಎಸ್ಕೆ ತಂಡದ ಕಡೆಗೆ ಅಭಿಮಾನವಿದ್ದರೆ, ದೇವಿಗೆ ಆರ್ಸಿಬಿ ತಂಡ ಅಂದ್ರೆ ಪಂಚಪ್ರಾಣವಾಗಿತ್ತು. ಆರ್ಸಿಬಿ ತಂಡದ ಕಟ್ಟಾ ಅಭಿಮಾನಿಯಾಗಿದ್ದ ದೇವಿ ತಮ್ಮ ಪೋಷಕರಿಗೆ ಏಕೈಕ ಪುತ್ರಿ. ಆರ್ಸಿಬಿ ಕೊನೆಗೂ ಈ ಸಲ ಕಪ್ ನಮ್ದೇ ಎಂದ ಜೋಶ್ನಲ್ಲಿ ಬೆಂಗಳೂರಿನಲ್ಲಿ ನಡೆಯುವ ವಿಜಯೋತ್ಸವ ಮೆರವಣಿಗೆಯಲ್ಲಿ ಭಾಗವಹಿಸಲು ಉತ್ಸುಕರಾಗಿದ್ದರು. ಅಂದು ಎಂದಿನಂತೆ ಕೆಲಸಕ್ಕೆ ತೆರಳಿದ್ದ ದೇವಿ, ಆರ್ಸಿಬಿ ತಂಡ ಬೆಂಗಳೂರಿಗೆ ಬರುವುದನ್ನು ತಿಳಿದು ಆಫೀಸ್ನಿಂದ ಹೊರಡಲು ಪ್ಲ್ಯಾನ್ ಮಾಡಿದ್ದರು. ಈ ಘಟನೆಗ ಕೆಲವು ಗಂಟೆಗಳ ಹಿಂದಷ್ಟೇ ಕೆಲಸಕ್ಕೆ ರಜೆ ಕೇಳಿದ್ದರು ಎಂದು ದೇವಿ ಆಫೀಸ್ ಸಹೋದ್ಯೋಗಿ ಕಣ್ಣೀರಿಟ್ಟಿದ್ದಾರೆ.

ಅವಳು ಆರ್ಸಿಬಿ ಕಾರ್ಯಕ್ರಮಕ್ಕೆ ಹೊರಡಲು ರಜೆಗಾಗಿ ಬಾಸ್ ಬಳಿ ದುಂಬಾಲು ಬಿದ್ದಿದ್ದಳು. ಅಂತಿಮವಾಗಿ ಮಧ್ಯಾಹ್ನ 2.30ರ ಸುಮಾರಿಗೆ ಅವಳಿಗೆ ರಜೆಗೆ ಗ್ರೀನ್ಸಿಗ್ನಲ್ ಸಿಕ್ಕಿತು. ಅಲ್ಲಿಂದ ತುಂಬಾ ಉತ್ಸುಕವಾಗಿ ಹೊರಟಳು. ಬಳಿಕ ಈ ದುರಂತ ಸಂಭವಿಸಿತು ಎಂದು ದೇವಿ ಸ್ನೇಹಿತೆ ನೆನೆದಿದ್ದಾರೆ. ಅವಳ ಲ್ಯಾಪ್ಟಾಪ್ ಇನ್ನೂ ಟೇಬಲ್ ಮೇಲಿದೆ, ಅವಳ ಬ್ಯಾಗ್ಗಳು ಕೂಡ ಅಲ್ಲೇ ಇವೆ. ಆದರೆ ಅವಳೇ ಇಲ್ಲ ಎಂದು ಬಿಕ್ಕಳಿಸಿ ಅತ್ತಿದ್ದಾರೆ.
ತಮಿಳುನಾಡಿನಿಂದ ಬಂದಿದ್ದ ದೇವಿ ಬೆಂಗಳೂರಿನಲ್ಲಿ ಓದಿ, ಟೆಕ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ಆರ್ಸಿಬಿಗೆ ತೀವ್ರ ನಿಷ್ಠೆ ಹೊಂದಿದ್ದ ಅವಳು ಬೆಂಗಳೂರಿನಲ್ಲಿ ಒಂದೇ ಒಂದು ಪಂದ್ಯವನ್ನು ತಪ್ಪಿಸಿರಲಿಲ್ಲ. ಅವಳು ವಿರಾಟ್ ಕೊಹ್ಲಿಯ ದೊಡ್ಡ ಅಭಿಮಾನಿ. ಅಂದೂ ಕೂಡ ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗಿ ಸಂಭ್ರಮಾಚರಣೆ ಕಣ್ತುಂಬಿಕೊಳ್ಳಬೇಕು ಎಂದುಕೊಂಡಿದ್ದಳು. ಬಳಿಕ ಆರ್ಸಿಬಿ ಎಂಟ್ರಿ ಟಿಕೆಟ್ಗಳನ್ನು ವಿತರಿಸುತ್ತಿರುವುದನ್ನು ಕೇಳಿ ಅಲ್ಲಿಗೆ ಹೋಗಲು ನಿರ್ಧರಿಸಿದಳು ಎಂದು ಆ ದಿನದ ಘಟನೆ ಬಿಚ್ಚಿಟ್ಟಿದ್ದಾರೆ.
ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ದು, ಬಹುತೇಕರು ಆರ್ಸಿಬಿ ಅಭಿಮಾನಿಗಳೇ ಆಗಿದ್ದು, ಸಂಭ್ರಮಾಚರಣೆ ಮಾಡಲು ಬಂದವರು ಶೋಕಾಚರಣೆಗೆ ಗುರಿಯಾದರು. ಆರ್ಸಿಬಿ ಮೇಲಿನ ಅಭಿಮಾನಕ್ಕೆ ತಮ್ಮ ಮನೆ ಮಕ್ಕಳ ಪ್ರಾಣಪಕ್ಷಿಯೇ ಹಾರಿ ಹೋಗಿದ್ದನ್ನು ನೆನೆದು ಮೃತರ ಕುಟುಂಬಸ್ಥರು ಕಣ್ಣೀರಿನಲ್ಲಿ ಮುಳುಗಿದ್ದಾರೆ.
-
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications