100 ಕೋಟಿ ಆಸ್ತಿ ಮಾಡಿಟ್ಟೆ, ಒಬ್ಬನೇ ಮಗ ಎಲ್ಲ ಬಿಟ್ಟೋದ: ಭೂಮಿಕ್ ತಂದೆ ಗೋಳಾಟ
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿದ ಹನ್ನೊಂದು ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ ಹಾಸನದ ಭೂಮಿಕ್ ಕೂಡ ಒಬ್ಬರು. ಇನ್ನೂ ಇಂಜಿನಿಯರಿಂಗ್ ಓದುತ್ತಿದ್ದ ಭೂಮಿಕ್, ಮನೆಯಲ್ಲಿ ಯಾರಿಗೂ ಹೇಳದೆ ಆರ್ಸಿಬಿ ಸಂಭ್ರಮಾಚರಣೆಗೆ ಬಂದಿದ್ದರು. ಆದರೆ ಕಾಲ್ತುಳಿತದಲ್ಲಿ ಜೀವಬಿಟ್ಟ ಮಗನನ್ನ ನೆನೆದು ಭೂಮಿಕ್ ತಂದೆ ಗೋಳಾಡಿದ್ದಾರೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. 100 ಕೋಟಿ ಆಸ್ತಿ ಮಾಡಿಟ್ಟೆ, ಆದ್ರೆ ಅವನು ಹೊತ್ಕೊಂಡು ಹೋದ್ನಾ? ಎಂದು ಮಗನ ಶವದ ಎದುರು ಕಣ್ಣೀರಿಟ್ಟಿದ್ದಾರೆ.
ನನ್ನ ಮಗ ಬೀದಿ ಹೆಣ ಆಗೋದ, ಅವನನ್ನ ಬಿಟ್ಟು ಒಂದು ಗಂಟೆಯೂ ಇರುತ್ತಿರಲಿಲ್ಲ, ಇಂಜಿನಿಯರ್ ಓದ್ತಿದ್ದ, ನನ್ನ ಮಗನನ್ನ ಆಂಬುಲೆನ್ಸ್ ಇಲ್ಲದೆ ಜೀಪ್ನಲ್ಲಿ ತುಂಬಿಕೊಂಡು ಬಂದಿದ್ದಾರೆ. ಅವನನ್ನ ಎಷ್ಟು ಮುದ್ದಾಗಿ ಸಾಕಿದ್ದೆ? ಪ್ರಪಂಚದಲ್ಲಿ ಯಾರಿಗೂ ಈ ರೀತಿ ಆಗೋದು ಬೇಡ ಎಂದು ಭೂಮಿಕ್ ತಂದೆ ಆಸ್ಪತ್ರೆಯಲ್ಲಿ ಗೋಳಾಡಿದ್ದಾರೆ. ಕಾಲ್ತುಳಿತದಲ್ಲಿ ಸಾವನ್ನಪ್ಪಿದ ನನ್ನ ಮಗನ ಶವಪರೀಕ್ಷೆ ನಡೆಸಬೇಡಿ, ಅವನ ದೇಹವನ್ನು ಕತ್ತರಿಸಬೇಡಿ ಎಂದು ತಂದೆ ಅಧಿಕಾರಿಗಳಿಗೆ ಅಂಗಾಲಾಚಿದ್ದಾರೆ.

ಕನಿಷ್ಠ ಪಕ್ಷ ಅವನ ಶವವನ್ನಾದರೂ ನನಗೆ ಕೊಡಿ, ಮರಣೋತ್ತರ ಪರೀಕ್ಷೆ ಮಾಡಬೇಡಿ. ಅವನ ಶವವನ್ನು ತುಂಡು ತುಂಡು ಮಾಡಬೇಡಿ. ನನಗೆ ಅವನು ಒಬ್ಬನೇ ಒಬ್ಬ ಮಗ. ಈಗ ನಾನು ಅವನನ್ನು ಕಳೆದುಕೊಂಡಿದ್ದೇನೆ. ಅವನು ನನಗೆ ಹೇಳದೆ ಇಲ್ಲಿಗೆ ಬಂದಿದ್ದ. ಈಗ ಅವನು ಜೀವಂತವಾಗಿಲ್ಲ, ಈಗ ಇಲ್ಲಿಗೆ ಸಿಎಂ, ಡಿಸಿಎಂ ಎಲ್ಲರೂ ಭೇಟಿ ನೀಡಬಹುದು. ಆದ್ರೆ ನನ್ನ ಮಗನನ್ನ ಯಾರೂ ವಾಪಸ್ ತರಲು ಸಾಧ್ಯವಿಲ್ಲ ಎಂದು ಬಿಕ್ಕಳಿಸಿ ಅತ್ತಿದ್ದಾರೆ.
ರಾತ್ರಿ ಹಗಲು ಎನ್ನದೆ ಅವನಿಗಾಗಿ ಕೋಟಿ ಕೋಟಿ ಹಣ ಮಾಡಿಟ್ಟೆ, ಹತ್ತಾರು ಜನಕ್ಕೆ ಅನ್ನ ಹಾಕುತ್ತಿದ್ದೆ. ನೂರು ಕೋಟಿ ರೂಪಾಯಿ ಆಸ್ತಿ ಮಾಡಿದ್ದೀನಿ. ಆದ್ರೆ ಅವನು ಹೊತ್ಕೊಂಡು ಹೋದ್ನಾ? ಅವನಿಗೆ ಸ್ವರ್ಗವೇ ಇಲ್ಲಿತ್ತು, ಅವನು ಹೇಗಿದ್ದನೋ ಹಾಗೆಯೇ ಕಳಿಸಿಕೊಡ್ತೀನಿ, ನನ್ನ ಸಲಹೆಗಳನ್ನು ಅವನೂ ತೆಗೆದುಕೊಳ್ತಿರಲಿಲ್ಲ, ಈಗ ನಾನು ಕೂಡ ಯಾರ ಸಲಹೆಯನ್ನೂ ತೆಗೆದುಕೊಳ್ಳಲ್ಲ ಎಂದು ಅಂತ್ಯಕ್ರಿಯೆ ವೇಳೆ ಭೂಮಿಕ್ ತಂದೆ ಕಣ್ಣೀರಿಟ್ಟಿದ್ದಾರೆ.
ಭೂಮಿಕ್ ಹಿನ್ನೆಲೆ ಏನು?
ಭೂಮಿಕ್ ಲಕ್ಷ್ಮಣ ಹಾಗೂ ಅಶ್ವಿನಿ ದಂಪತಿಯ ಒಬ್ಬನೇ ಮಗ, ಕಳೆದ ಇಪ್ಪತ್ತು ವರ್ಷಗಳಿಂದಲೂ ಲಕ್ಷ್ಮಣ್ ಕುಟುಂಬಸ್ಥರು ಬೆಂಗಳೂರಿನಲ್ಲಿ ನೆಲೆಸಿದ್ದು, ಭೂಮಿಕ್ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ಇಂಜಿನಿಯರಿಂಗ್ ಓದುತ್ತಿದ್ದ. ಬುಧವಾರ ಕೂಡ ಎಂದಿನಂತೆ ಕಾಲೇಜಿಗೆ ತೆರಳಿ ನಂತರ ಸ್ನೇಹಿತರೊಂದಿಗೆ ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗಿದ್ದ. ಅಲ್ಲಿ ಜನದಟ್ಟಣೆ ಹೆಚ್ಚಾಗಿ ಕಾಲ್ತುಳಿತದಲ್ಲಿ ಇಹಲೋಕ ತ್ಯಜಿಸಿದ್ದ. ಇಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಭೂಮಿಕ್ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರಿಸಲಾಯಿತು. ಭೂಮಿಕ್ ಹುಟ್ಟೂರು ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕುಪ್ಪುಗೋಡು ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
-
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
IPL 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಟಿಕೆಟ್ ಮಾರಾಟ ಶುರು; ಇಲ್ಲಿವೆ ಬುಕಿಂಗ್ ಮಾಡುವ ವಿಧಾನಗಳು -
RCB Yash Dayal: ಐಪಿಎಲ್ 2026ರ ಸೀಸನ್ನಿಂದ ಸ್ಟಾರ್ ವೇಗಿ ಯಶ್ ದಯಾಳ್ ಔಟ್; ಆರ್ಸಿಬಿ ಅಧಿಕೃತ ಮಾಹಿತಿ -
Nandini: ಆರ್ಸಿಬಿ ಜೊತೆ ರಾರಾಜಿಸಲಿದೆ ನಮ್ಮ ಹೆಮ್ಮೆಯ 'ನಂದಿನಿ': ಐಪಿಎಲ್-2026ರಲ್ಲಿ ಕನ್ನಡಿಗರಿಗೆ ಡಬಲ್ ಧಮಾಕಾ -
ಐಪಿಎಲ್ನಲ್ಲಿ ಯಾರೂ ಕೊಳ್ಳದಿದ್ದರೂ ಅಯೋಧ್ಯೆಯಲ್ಲಿ ಅಬ್ಬರಿಸಿದ ಆರ್ಸಿಬಿ ಮಾಜಿ ಆಟಗಾರ; 195 ರನ್ ಚಚ್ಚಿದ ಸ್ವಸ್ತಿಕ್ ಚಿಕಾರ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?












Click it and Unblock the Notifications