RCB vs GT: ಆರ್ಸಿಬಿ ಮ್ಯಾಚ್ ನೋಡೋಕೆ ಹೋಗುವ ಮುನ್ನ ಈ ವಿಷಯ ಗಮನದಲ್ಲಿರಲಿ!
ಬೆಂಗಳೂರು, ಮೇ. 04: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ (ಮೇ. 04) ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಮತ್ತು ಗುಜರಾತ್ ಟೈಟಾನ್ಸ್ (ಜಿಟಿ) ನಡುವಿನ ಹಣಾಹಣಿಗೆ ಮೈದಾನ ಸಿದ್ಧವಾಗಿದೆ. ಈ ನಿಟ್ಟಿನಲ್ಲಿ ಬೆಂಗಳೂರು ಸಂಚಾರಿ ಪೊಲೀಸ್ ಇಲಾಖೆ ಹೊಸ ಸಲಹೆಗಳನ್ನು ಬಿಡುಗಡೆ ಮಾಡಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮ್ಯಾಚ್ ನಡೆಯುವ ಕಾರಣ ಸ್ಟೇಡಿಯಂ ಸುತ್ತ ಮುತ್ತ ಪಾರ್ಕಿಂಗ್ ನಿರ್ಬಂಧಗಳು ಮತ್ತು ಪಾರ್ಕಿಂಗ್ ಸ್ಥಾನಗಳ ಬಗ್ಗೆ ಮಾಹಿತಿ ನೀಡುತ್ತದೆ. ಆರ್ಸಿಬಿ ಪಂದ್ಯ ನೋಡಲು ಸಾವಿರಾರು ಜನರು ಈ ಕಡೆ ಬರುವ ಕಾರಣ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.

ಇಂದಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಪಂದ್ಯದ ಕಾರಣ ಮಧ್ಯಾಹ್ನ 3 ಗಂಟೆಗೆಯಿಂದ ರಾತ್ರಿ 11 ರವರೆಗೆ ಸಂಚಾರ ನಿರ್ಬಂಧವಿರಲಿದೆ. ಎಂಜಿ ರಸ್ತೆಯ ಕಬ್ಬನ್ ಪಾರ್ಕ್ ಬಳಿ ಇರುವ ಚಿನ್ನಸ್ವಾಮಿ ಕ್ರೀಡಾಂಗಣವು ನಗರದ ಹೃದಯ ಭಾಗದಲ್ಲಿದ್ದು, ವಾಹನ ಸವಾರರು ಈ ರಸ್ತೆಗಳಿಗೆ ಇಳಿಯುವ ಮುನ್ನ ಎಚ್ಚರಿಕೆ ವಹಿಸುವುದು ಅಗತ್ಯ.
"ದಿನಾಂಕ 04.05.2024 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಟಾ ಐ.ಪಿ.ಎಲ್ 2024 ಕ್ರಿಕೆಟ್ ಪಂದ್ಯಾವಳಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಧ್ಯಾಹ್ನ 03:00 ಗಂಟೆಯಿಂದ ರಾತ್ರಿ 11:00 ಗಂಟೆಯವರೆಗೆ ರಸ್ತೆ ಬಳಕೆದಾರರ ಅನುಕೂಲಕ್ಕಾಗಿ ಈ ಕೆಳಕಂಡಂತೆ ಸಂಚಾರ ವ್ಯವಸ್ಥೆಯನ್ನು ಮಾಡಲಾಗಿದೆ" ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಪೊಲೀಸರು ತಿಳಿಸಿದ್ದಾರೆ.
ವಾಹನಗಳ ನಿಲುಗಡೆ ನಿಷೇಧವಿರುವ ರಸ್ತೆಗಳ ವಿವರ
ಕೆಳಗಿನ ಸ್ಥಳಗಳು ಮತ್ತು ರಸ್ತೆಗಳಲ್ಲಿ ಯಾವುದೇ ವಾಹನಗಳ ಪಾರ್ಕಿಂಗ್ ಅನ್ನು ಅನುಮತಿಸಲಾಗುವುದಿಲ್ಲ ಎಂದು ಸಂಚಾರಿ ಪೊಲೀಸರು ಹೇಳಿದ್ದಾರೆ.
"Traffic Advisory"
— DCP TRAFFIC WEST (@DCPTrWestBCP) May 3, 2024
"ಸಂಚಾರ ಸಲಹೆ"@BlrCityPolice @blrcitytraffic @Jointcptraffic pic.twitter.com/IHglkPJ7EM
* ಕ್ಲೀನ್ಸ್ ರಸ್ತೆ, ಎಂ.ಜಿ ರಸ್ತೆ, ಎಂ.ಜಿ ರಸ್ತೆ ಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆ.
* ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ
* ಕಸ್ತೂರಿ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ
*ವಿಠಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ ಮತ್ತು ನೃಪತುಂಗ ರಸ್ತೆ.
ಸಾರ್ವಜನಿಕ ವಾಹನಗಳ ನಿಲುಗಡೆ ಸ್ಥಳಗಳು
* ಸೆಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಮೈದಾನ
* ಯು.ಬಿ ಸಿಟಿ ಪಾರ್ಕಿಂಗ್ ಸ್ಥಳ
* ಬಿ.ಎಂ.ಟಿ.ಸಿ ಬಸ್ ನಿಲ್ದಾಣ (ಶಿವಾಜಿ ನಗರ 1 ನೇ ಮಹಡಿ) ಮೊದಲನೆ ಮಹಡಿ & ಓಲ್ಡ್ ಕೆ.ಜಿ.ಐ.ಡಿ ಬಿಲ್ಡಿಂಗ್
*ಕಿಂಗ್ಸ್ ರಸ್ತೆ, (ಕಬ್ಬನ್ ಪಾರ್ಕ್ ಒಳಭಾಗ)
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications