RCB vs SRH: ಪಂದ್ಯ ನೋಡಲು ವಾಹನ ತೆಗೆದುಕೊಂಡು ಹೋಗ್ತಾ ಇದ್ದೀರಾ? ಈ ಸುದ್ದಿ ನೋಡಿ
ಬೆಂಗಳೂರು, ಏಪ್ರಿಲ್ 15: ಬೆಂಗಳೂರಿನ ಚಿನ್ನಸ್ವಾಮಿ ಅಂಗಳದಲ್ಲಿಂದು ಆರ್ಸಿಬಿ ಮತ್ತು ಎಸ್ಆರ್ಎಚ್ ನಡುವೆ ಪಂದ್ಯ ನಡೆಯಲಿದ್ದು, ಈ ವೇಳೆ ಪಂದ್ಯ ವೀಕ್ಷಣೆಗಾಗಿ ಬರುವವರು ತಮ್ಮ ವಾಹನಗಳನ್ನು ಎಲ್ಲೆಲ್ಲಿ ಪಾರ್ಕಿಂಗ್ ಮಾಡಬಹುದು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು (ಏಪ್ರಿಲ್ 15) ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ ರೈಸರ್ಸ್ ಹೈದರಾಬಾದ್ ನಡುವೆ ಐಪಿಎಲ್ ಪಂದ್ಯ ಇಂದು ನಡೆಯಲಿದ್ದು, ಈ ವೇಳೆ ಟ್ರಾಫಿಕ್ ಸಮಸ್ಯೆಯನ್ನು ಸರಿದೂಗಿಸಲು ಸಂಚಾರ ಪೊಲೀಸರು ಕ್ರಮ ಕೈಗೊಂಡಿದ್ದು, ಕೆಲವು ಮಾರ್ಗಸೂಚಿಗಳ್ನು ಬಿಡುಗಡೆ ಮಾಡಿದ್ದಾರೆ.

ಪಂದ್ಯಕ್ಕೆ ವೀಕ್ಷಿಸಲು ಹೋಗುವವರ ವಾಹನ ನಿಲುಗಡೆಗೆ ಎಲ್ಲೆಲ್ಲಿ ಅವಕಾಶ ನೀಡಲಾಗಿದೆ ಹಾಗೂ ಎಲ್ಲೆಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ ಎನ್ನುವ ಮಾಹಿತಿಯನ್ನು ಟ್ರಾಫಿಕ್ ಪೊಲೀಸರು ಇಲ್ಲಿ ತಿಳಿಸಿದ್ದಾರೆ ಗಮನಿಸಿ. ಈ ಸಂಚಾರ ನಿರ್ಬಂಧ, ಪಾರ್ಕಿಂಗ್ ನಿರ್ಬಂಧ ಹಾಗೂ ಪರ್ಯಾಯ ವಾಹನ ನಿಲುಗಡೆ ಸ್ಥಳಗಳ ಬಗ್ಗೆ ಮಾರ್ಗಸೂಚಿ ಇಂದು (ಏಪ್ರಿಲ್ 15) ಮಧ್ಯಾಹ್ನ 3ರಿಂದ ರಾತ್ರಿ 11ರವರೆಗೆ ಜಾರಿಯಲ್ಲಿರಲಿದೆ.
ಎಲ್ಲೆಲ್ಲಿ ಪಾರ್ಕಿಂಗ್ ಮಾಡಬಹದು?: ಪಸೇಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಗ್ರೌಂಡ್, ಯುಬಿ ಸಿಟಿ ಪಾರ್ಕಿಂಗ್, ಬಿಎಂಟಿಸಿ ಟಿಟಿಎಂಸಿ ಶಿವಾಜಿನಗರ 1 ನೇ ಮಹಡಿ ಮತ್ತು ಹಳೆಯ ಕೆಜಿಐಡಿ ಕಟ್ಟಡ, ಕಿಂಗ್ಸ್ ರಸ್ತೆ.
ಎಲ್ಲೆಲ್ಲಿ ಪಾರ್ಕಿಂಗ್ ನಿಷೇಧ?: ಕ್ವೀನ್ಸ್ ರಸ್ತೆ, ಎಂಜಿ ರಸ್ತೆ, ಎಂಜಿ ರಸ್ತೆಯಿಂದ ಕಬ್ಬನ್ ರಸ್ತೆ ವರೆಗೆ ಮತ್ತು ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಬಾ ರಸ್ತೆ, ಅಂಬೇಡ್ಕರ್ ವೇದಿಕೆ ರಸ್ತೆ, ಟ್ರಿನಿಟಿ ಜೆಎನ್, ಲಾವೆಲ್ ರಸ್ತೆ, ವಿಟ್ಟಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ, ನೃಪತುಂಗ ರಸ್ತೆ.
ಆರ್ಸಿಬಿ ಅಂಕಗಳ ವಿವರ: ಮ್ಯಾಚ್ ವಿವರ ನೋಡುವುದಾದರೆ, ಇದುವರೆಗೂ ಆಡಿರುವ 6 ಪಂದ್ಯಗಳಲ್ಲಿ ಆರ್ಸಿಬಿ ಕೇವಲ ಒಂದೇ ಒಂದು ಗೆದ್ದು, 5ರಲ್ಲಿ ಸೋಲನುಭವಿಸಿದೆ. ಈ ಮೂಲಕ ಆರ್ಸಿಬಿ 2 ಪಾಯಿಂಟ್ ಗಳಿಸಿ, ಪಾಯಿಂಟ್ಸ್ ಟೇಬಲ್ನಲ್ಲಿ ಕೊನೇ ಸ್ಥಾನದಲ್ಲಿದೆ. ಇದೀಗ ಇಂದು (ಏಪ್ರಿಲ್ 15) 7ನೇ ಪಂದ್ಯವನ್ನು ಎಸ್ಆರ್ಎಚ್ ವಿರುದ್ಧ ಸೆಣಸಲಿದ್ದು, ಇದರಲ್ಲಾದರೂ ಗೆದ್ದು ಸೋಲಿನ ಗಾಯವನ್ನು ಸ್ವಲ್ಪನಾದ್ರೂ ವಾಸಿ ಮಾಡಿಕೊಳ್ಳಲಿದೆಯಾ ಎಂದು ಕಾದುನೋಡಬೇಕಿದೆ.
ಎಸ್ಆರ್ಎಚ್ ಅಂಕಗಳ ವಿವರ: ಇನ್ನು ಎಸ್ಆರ್ಎಚ್ ತಂಡ ಇದುವರೆಗೂ ಆಡಿದ 5 ಪಂದ್ಯಗಳಲ್ಲಿ 3 ಗೆದ್ದು, ಇನ್ನೆರಡರಲ್ಲಿ ಸೋಲನುಭವಿಸಿದೆ. ಈ ಮೂಲಕ 6 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಪಾಯಿಂಟ್ಸ್ ಟೇಬಲ್ನಲ್ಲಿ ನಾಲ್ಕನೇ ಸ್ಥಾನವನ್ನು ಅಲಂಕರಿಸಿದೆ. ಇನ್ನು ಇಂದು 6ನೇ ಪಂದ್ಯವನ್ನು ಬೆಂಗಳೂರಿನಲ್ಲಿ ಆರ್ಸಿಬಿ ವಿರುದ್ಧ ಆಡಲಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ












Click it and Unblock the Notifications