ಕಂಟೋನ್ಮೆಂಟ್-ವೈಟ್ ಫೀಲ್ಡ್ ಮಾರ್ಗದಲ್ಲಿ ಮತ್ತೆರಡು ಜೋಡಿ ಹಳಿ
ಬೆಂಗಳೂರು, ಡಿಸೆಂಬರ್ 20 : ನಗರದ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣ ಹಾಗೂ ವೈಟ್ ಫೀಲ್ಡ್ ನಡುವೆ 4 ರೈಲು ಹಳಿ ನಿರ್ಮಾಣ ಪ್ರಸ್ತಾವಣೆಗೆ ಮರುಜೀವ ಬಂದಿದೆ. ಈ ಹಿಂದೆ ವೈಟ್ ಫೀಲ್ಡ್ ಗೆ ಜೋಡಿ ಹಳಿ ನಿರ್ಮಾಣ ಮಾಡುವ ಪ್ರಸ್ತಾವನೆಗೆ ಅನುಮತಿ ದೊರೆತಿದ್ದರೂ ಕಾಲಕೂಡಿಬಂದಿರಲಿಲ್ಲ.
ಬೆಂಗಳೂರು ಉಪನಗರ ರೈಲು ಯೋಜನೆಯ ಪ್ರಮುಖ ಭಾಗವಾಗಿರುವ ಕಂಟೋನ್ಮೆಂಟ್-ವೈಟ್ ಫೀಲ್ಡ್ ನಡುವೆ 4 ರೈಲು ಹಳಿ ನಿರ್ಮಾಣ ಪ್ರಸ್ತಾವನೆ ಮರು ಜೀವ ಪಡೆದಿದೆ. ಉಪನಗರ ರೈಲಿಗೆ ಆಗ್ರಹ ಹೆಚ್ಚುತ್ತಿದ್ದಂತೆಯೇ ಕಾಮಗಾರಿ ಸಂಬಂಧ ನೈಋತ್ಯ ರೈಲ್ವೆ ವಿಸ್ತೃತ ಯೋಜನಾ ವೆಚ್ಚದ ವರದಿಯನ್ನು ರೈಲ್ವೆ ಬೋರ್ಡುಗಳಿಗೆ ಕಳುಹಿಸಿದೆ.

ವೈಟ್ ಫೀಲ್ಡ್ ವರೆಗೆ 2 ಜೋಡಿ ಹಳಿ ನಿರ್ಮಾಣ ಪ್ರಸ್ತಾವಣೆಗೆ ಬೋರ್ಡ್ ಬಹಳ ಹಿಂದೆಯೇ ಅನುಮತಿ ನೀಡಿತ್ತು. ಲಭ್ಯವಿರುವ ಭೂಮಿ ಬಳಸಿಕೊಂಡು ಕಾಮಗಾರಿ ಪ್ರಾರಂಭಿಸಲು ಸಾಧ್ಯವಿದೆ. ಈ ಹಿನ್ನೆಲೆಯಲ್ಲಿ ೪೯೩ ಕೋಟಿ ರೂ. ಯೋಜನಾ ವೆಚ್ಚದ ವರದಿ ತಯಾರಿಸಿ ಸಲ್ಲಿಸಲಾಗಿದೆ ಎಂದು ನೈಋತ್ಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೂಲತಃ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ-ವೈಟ್ ಫೀಲ್ಡ್ ನಡುವೆ 2 ಜೋಡಿ ಹಳಿ ನಿರ್ಮಾಣಕ್ಕೆ ದಶಕದ ಹಿಂದೆ ಪ್ರಸ್ತಾವನೆಯಿತ್ತು. ದಿನಕಳೆದಂತೆ ರೈಲು ಹಳಿಯ ಇಕ್ಕೆಲಗಳಲ್ಲಿ ಕಟ್ಟಡಗಳ ಸಂಖ್ಯೆ ಏರಿಕೆಯಾಗಿದ್ದು, ನಗರದಿಂದ ಕಂಟೋನ್ಮೆಂಟ್ ವರೆಗೆ ೪ ಹಳಿ ಅಳವಡಿಕೆ ಅಸಾಧ್ಯ ಎನ್ನುವ ಸ್ಥಿತಿ ಉಂಟಾಗಿದೆ. ಹೀಗಾಗಿ ಕೊನೆಯಲ್ಲಿ ಕಂಟೋನ್ಮೆಂಟ್-ವೈಟ್ ಫೀಲ್ಡ್ ನಡುವೆ ಮಾತ್ರ ಕಾಮಗಾರಿ ಕೈಗೆತ್ತಿಕೊಳ್ಳಲು ನೈಋತ್ಯ ರೈಲ್ವೆ ತೀರ್ಮಾಣಿಸಿದೆ.
ಕಂಟೋನ್ಮೆಂಟ್-ವೈಟ್ ಫೀಲ್ಡ್ ನಡುವೆ ಸಂಪೂರ್ಣ ವಿದ್ಯುದೀಕರಣಗೊಂಡ ಜೋಡಿ ಹಳಿಯಿದೆ. ಈ ಮಾರ್ಗದಲ್ಲಿ ಪ್ಯಾಸೆಂಜರ್ ರೈಲುಗಳಷ್ಟೇ ಗೂಡ್ಸ್ ರೈಲುಗಳ ಓಡಾಟವೂ ಇದೆ. ಹೀಗಾಗಿ 4 ಹಳಿ ನಿರ್ಮಾಣ ಮಾಡಿದರೆ ಪ್ಯಾಸೆಂಜರ್ ರೈಲುಗಳ ಸಂಚಾರ ಹೆಚ್ಚಲಿದ್ದು, ನಿಲ್ದಾಣಗಳ ನಡುವಿನ ಪ್ರಯಾಣಾವಧಿ ಇಳಿಕೆಯಾಗಲಿದೆ. 2 ಜೋಡಿ ಹಳಿ ಆಟೋಮ್ಯಾಟಿಕ್ ಸಿಗ್ನಲಿಂಗ್ ಆದರೆ5-10 ನಿಮಿಷಕ್ಕೊಂದು ರೈಲು ಓಡಾಟ ಸಾದ್ಯವಾಗಲಿದೆ.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ನಮ್ಮ ಮೆಟ್ರೋ ಪ್ರಯಾಣಿಕರೇ ಗಮನಿಸಿ: ಏ.5ರಂದು ಈ ಭಾಗದಲ್ಲಿ ರೈಲು ಸಂಚಾರ ಸ್ಥಗಿತ, ಕಾರಣವೇನು? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ











Click it and Unblock the Notifications