Get Updates
Get notified of breaking news, exclusive insights, and must-see stories!

ಅಭಿವೃದ್ಧಿಯ ಜೊತೆಗೆ ಜನರ ಸಮಸ್ಯೆ ಆಲಿಸಿ ಪರಿಹರಿಸುವುದೇ ನಿಜವಾದ ಪ್ರಗತಿ: ಕೃಷ್ಣ ಬೈರೇಗೌಡ

ಬೆಂಗಳೂರು ಜನವರಿ 5: ರಾಜ್ಯದ ಅಭಿವೃದ್ಧಿಯ ಜೊತೆಗೆ ಪ್ರತಿಯೊಬ್ಬ ಸಾರ್ವಜನಿಕರ ವೈಯಕ್ತಿಕ ಸಮಸ್ಯೆಗಳನ್ನೂ ಸರ್ಕಾರ ಆಲಿಸಿ ಪರಿಹರಿಸುವುದೇ ನಿಜವಾದ ಪ್ರಗತಿ ಎಂದು ಸಚಿವರಾದ ಕೃಷ್ಣ ಬೈರೇಗೌಡ ಅವರು ಅಭಿಪ್ರಾಯಪಟ್ಟರು.

ಯಲಹಂಕದ ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, "ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವ ಸಲುವಾಗಿಯೇ ಜನ ನಮ್ಮ ಆಯ್ಕೆ ಮಾಡಿ ಅಧಿಕಾರ ನೀಡಿದ್ದಾರೆ. ಹೀಗಾಗಿ ಎಲ್ಲಾ ಕ್ಷೇತ್ರದಲ್ಲೂ ಸರ್ವಾಂಗೀಣ ಅಭಿವೃದ್ಧಿಯನ್ನು ಸಾಕಾರಗೊಳಿಸುವುದು ನಮ್ಮ ಕರ್ತವ್ಯ. ಆದರೆ, ಅಭಿವೃದ್ದಿಯೊಂದೇ ಸಾಲದು" ಎಂದು ತಿಳಿಸಿದರು.

Real progress is to listen to peoples problems and solve them: Krishna Byre gowda

ಜೊತೆಗೆ "ನಾಡಿನ ಪ್ರತಿಯೊಬ್ಬ ವ್ಯಕ್ತಿಗೂ ಸರ್ಕಾರ ಅವರ ಮನೆ ಬಾಗಿಲಿಗೆ ತಲುಪಬೇಕು. ಪ್ರತಿಯೊಬ್ಬರಿಗೂ ವ್ಯಯಕ್ತಿಕ ಸಮಸ್ಯೆಗಳಿದ್ದೂ ಸರ್ಕಾರ ಅದನ್ನೂ ಆಲಿಸಬೇಕು. ಜನರ ಸಮಸ್ಯೆಗೆ ಸ್ಪಂದಿಸುವ ಮೂಲಕ ಪರಿಹಾರವನ್ನೂ ನೀಡಬೇಕು. ಆಗ ಮಾತ್ರ ನಿಜವಾದ ಅಭಿವೃದ್ಧಿ-ಪ್ರಗತಿ ಸಾಧ್ಯ. ಇದೇ ಕಾರಣಕ್ಕೆ ಜನಸ್ಪಂದನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಜನರು ಇದರ ಉಪಯೋಗವನ್ನು ಪಡೆದುಕೊಳ್ಳಬೇಕು" ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮನವಿ ಮಾಡಿದರು.

ಜನರ ಅಹವಾಲುಗಳನ್ನು ಸ್ವೀಕರಿಸಿದರೆ ಮಾತ್ರ ಸಾಲದು, ಅವರ ಸಮಸ್ಯೆಗಳಿಗೆ ಸಾಧ್ಯವಾದಷ್ಟು ಪರಿಹಾರವನ್ನೂ ನೀಡಬೇಕು. ಇಲ್ಲದಿದ್ದರೆ ಈ ಕಾರ್ಯಕ್ರಮಕ್ಕೆ ಅರ್ಥವೇ ಇರುವುದಿಲ್ಲ. ಈ ನಿಟ್ಟಿನಲ್ಲಿ ಅಧಿಕಾರಿಗಳೂ ಸಾಕಷ್ಟು ಶ್ರಮವಹಿಸಿ ಜನರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕಿದೆ ಎಂದು ಅವರು ಕಿವಿಮಾತು ಹೇಳಿದರು.

Real progress is to listen to peoples problems and solve them: Krishna Byre gowda

ಬೆಂಗಳೂರಿಗೆ ಹೊಸ ದಿಕ್ಕು-ಹೊಸ ಲುಕ್ಕು:

ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಅಭಿವೃದ್ಧಿಗೆ ಹೊಸ ದಿಕ್ಕು-ಹೊಸ ಲುಕ್ಕು ನೀಡಲು ಶ್ರಮಿಸುತ್ತಿದ್ದಾರೆ ಎಂದು ಈ ವೇಳೆ ಸಚಿವ ಕೃಷ್ಣ ಬೈರೇಗೌಡ ಅವರು ಪ್ರಶಂಸಿಸಿದರು. ರಫ್ತು ಸೇರಿದಂತೆ ಹಲವು ವಿಭಾಗಗಳಲ್ಲಿ ಬೆಂಗಳೂರು ಇಡೀ ದೇಶಕ್ಕೆ ಆದಾಯದ ಮೂಲವಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲೂ ಸಾಕಷ್ಟು ಹೆಸರು ಮಾಡಿದೆ. ಆದರೆ, ಬೆಂಗಳೂರಿನ ಅಭಿವೃದ್ಧಿ ವೇಗಕ್ಕಿಂತ ಇಲ್ಲಿನ ಜನಸಂಖ್ಯೆ ವೇಗ ಭಾರೀ ಪ್ರಮಾಣದಲ್ಲಿ ಹೆಚ್ಚುತ್ತಿದೆ.

ಎಲ್ಲಾ ರಾಜ್ಯದ ಜನರಿಗೂ ಬೆಂಗಳೂರು ಬದುಕು ಕಟ್ಟಿಕೊಡುತ್ತಿದೆ. ಹೀಗಾಗಿ ಜನರ ವಲಸೆಯೂ ಅಧಿಕವಾಗಿದ್ದು, ಅವಶ್ಯಕತೆಗೆ ತಕ್ಕಂತೆ ಅಭಿವೃದ್ಧಿ ಸಾಧ್ಯವಾಗುತ್ತಿಲ್ಲ. ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಆ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದು, ರಾಜ್ಯ ರಾಜಧಾನಿಯ ಅಭಿವೃದ್ಧಿಗೆ ಹೊಸ ದಿಕ್ಕು ತೋರಲು ಯೋಜನೆ ರೂಪಿಸಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

Real progress is to listen to peoples problems and solve them: Krishna Byre gowda

ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಮಾತನಾಡಿ, "ಕಾಂಗ್ರೆಸ್ ಸರ್ಕಾರ ನೀಡಿದ ಮಾತಿನಂತೆ ಐದೂ ಗ್ಯಾರಂಟಿ ಯೋಜನೆಗಳನ್ನೂ ಯಶಸ್ವಿಯಾಗಿ ಜಾರಿಗೆ ತಂದಿದೆ. ಈ ಮೂಲಕ ನಮ್ಮದು ಜನಪರ ಸರ್ಕಾರ ಎಂಬುದನ್ನು ಸಾಭೀತುಪಡಿಸಲಾಗಿದೆ. ಅಲ್ಲದೆ, ಜನಸ್ಪಂದನ ಕಾರ್ಯಕ್ರಮದ ಮೂಲಕ ಸರ್ಕಾರವನ್ನು ಜನಸಾಮಾನ್ಯರ ಮನೆ ಬಾಗಿಲಿಗೇ ತರಲಾಗಿದೆ. ಎಲ್ಲರ ಸಮಸ್ಯೆಯನ್ನೂ ಆಲಿಸಿ ಪರಿಹಾರವನ್ನೂ ನೀಡಲಾಗುವುದು" ಎಂದರು.

ಕಾರ್ಯಕ್ರಮದಲ್ಲಿ 4,000 ಕ್ಕೂ ಅಧಿಕ ಜನ ಭಾಗವಹಿಸಿದ್ದರು. ಬಿಬಿಎಂಪಿ, ಬಿಡಿಎ, ಬೆಸ್ಕಾಂ, ಬಿಎಂಟಿಸಿ, ಕಂದಾಯ ಇಲಾಖೆ, ಜಲಮಂಡಲಿ ಹಾಗೂ ಮೂಲಭೂತ ಸೌಕರ್ಯ ಸೇರಿದಂತೆ ಬೆಂಗಳೂರು ನಗರ ವ್ಯಾಪ್ತಿಗೆ ಸಂಬಂಧಿಸಿದ ಹಲವು ಸಮಸ್ಯೆಗಳ ಅಹವಾಲುಗಳನ್ನು ಸ್ವೀಕರಿಸಲಾಯಿತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+