ಉಪೇಂದ್ರ ರಾಜಕೀಯ ಪ್ರವೇಶವೇ ಓಳು ಬರೀ ಓಳು!
ಬೆಂಗಳೂರು, ಏಪ್ರಿಲ್ 20 : ರಿಯಲ್ ಸ್ಟಾರ್ ಆಗುವುದಕ್ಕಿಂತ ಮೊದಲು ಉಪೇಂದ್ರ ನಟಿಸಿ ನಿರ್ದೇಶಿಸಿದ್ದ 'ಎ' ಚಿತ್ರದ ಹಾಡು ನೆನಪಿದೆಯಾ? ಎಂಟಿವಿ ಸುಬ್ಬುಲಕ್ಷ್ಮಿಗೆ ಓಳು ಬರಿ ಓಳು, ಜೀಟಿವಿ ಮಾದೇಗೌಡ್ರಿಗೆ ಓಳು ಬರಿ ಓಳು!
ಈಗ ಅದೇ ಹಾಡನ್ನು ಅವರಿಗಾಗಿಯೇ ಹಾಡುವಂತಾಗಿದ್ದು ಮಾತ್ರ ವಿಪರ್ಯಾಸ. ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ರಿಯಲ್ ಸ್ಟಾರ್ ಉಪೇಂದ್ರ ಕೊನೆಗೆ, ವಿಧಾನಸಭಾ ಚುನಾವಣೆಯಿಂದಲೇ ಹಿಂದೆ ಸರಿಯುವ ಸಾಧ್ಯತೆಗಳು ಗೋಚರಿಸುತ್ತಿವೆ. ಅವರ ಆಶ್ವಾಸನೆಗಳು, ರಂಗುರಂಗಿನ ಮಾತುಗಳು ಓಳು ಬರಿ ಓಳು ಅಂತಾಗಿವೆ.
ಕೆಪಿಜೆಪಿ ಪಕ್ಷ ಸ್ಥಾಪಿಸಿ ರಾಜ್ಯದ ರಾಜಕಾರಣದಲ್ಲಿ ಹೊಸ ಅಲೆ ಸೃಷ್ಟಿಸುವುದಾಗಿ ಘೋಷಿಸಿದ್ದ ಉಪೇಂದ್ರ ಕೊನೆಗೆ ಅದೇ ಪಕ್ಷದಿಂದ ಹೊರಬಿದ್ದು ಇದೀಗ ಪ್ರಜಾಕೀಯ ಎಂಬ ಮತ್ತೊಂದು ರಾಜಕೀಯ ಪಕ್ಷ ಸಂಘಟಿಸಲು ಮುಂದಾಗಿದ್ದರು. ಆದರೆ ಆ ಪಕ್ಷ ಇನ್ನೂ ನೋಂದಣಿಯಾಗದ ಕಾರಣ ಪ್ರಸ್ತುತ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದೇ ಅನುಮಾನ ಎನ್ನಲಾಗುತ್ತಿದೆ.
ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್
ಈ ಕುರಿತು ಶುಕ್ರವಾರ ಬೆಂಗಳೂರಿನಲ್ಲಿ ಹೇಳಿಕೆ ನೀಡಿರುವ ಅವರ ತಾಯಿ ಅನುಸೂಯ, ಈ ಬಾರಿ ಪಕ್ಷೇತರರಾಗಿ ರಿಯಲ್ ಸ್ಟಾರ್ ಉಪೇಂದ್ರ ಸ್ಪರ್ಧಿಸುವುದು ಅನುಮಾನ, ಮುಂದಿನ ಚುನವಣೆಯಲ್ಲಿ ಉಪೇಂದ್ರ ಸ್ಪರ್ಧಿಸಬಹುದು ಎಂಬ ಇಂಗಿತ ವ್ಯಕ್ತಪಡಿಸಿದ್ದಾರೆ.

ಜತೆಗೆ ಸದ್ಯ ಪ್ರಚಾರಕ್ಕೆಲ್ಲ ಸಮಯವಿಲ್ಲ, ಸದ್ಯ ಹೋಮ್ ಮಿನಿಸ್ಟರ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ ಎಂದು ಅನುಸೂಯ ಅವರು ತಿಳಿಸಿದ್ದಾರೆ. ಹಾಗಿದ್ರೆ, ಅವರನ್ನು ನಂಬಿ ಅವರಿಗೆ ಭಾರೀ ಬೆಂಬಲ ನೀಡಿದ್ದವರ, ಖಾಲಿ ದಿರಿಸು ತೊಟ್ಟ ಆಟೋ ಚಾಲಕರ ಆಕಾಂಕ್ಷೆಗಳಿಗೆ ಬೆಲೆಯೇ ಇಲ್ಲವೆ?
ರಾಜಕೀಯವನ್ನು ತಿರುಗಾ ಮುರುಗಾ ಮಾಡುತ್ತೇನೆ, ಪ್ರಜೆಗಳನ್ನು ನಾಯಕರನ್ನಾಗಿ, ನಾಯಕರನ್ನು ಸೇವಕರನ್ನಾಗಿಸಿ ಆಡಳಿತ ಮಾಡುತ್ತೇನೆ ಎಂದು ಅಬ್ಬರಿಸಿ ಬೊಬ್ಬಿರಿದಿದ್ದ ಉಪೇಂದ್ರ, ಚುನಾವಣೆ ಸಮಯ ಹತ್ತಿರ ಬಂದಾಗ ಸಡನ್ನಾಗಿ ಕಣ್ ತಪ್ಪಿಸಿಕೊಂಡಿದ್ದಾರೆ. ತಾವೇ ಮುಂದೆ ನಿಂತು ಕಟ್ಟಿದ್ದ ಕೆಪಿಜೆಪಿ ಪಕ್ಷದಿಂದ ಹೊರಬಂದಿದ್ದಾರೆ.
ಕಾರ್ಮಿಕರು, ರೈತರು, ಬಡವರು ಹಾಗೂ ಶೋಷಿತರ ಪರವಾಗಿ ಹೋರಾಡಲು ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದ ಉಪೇಂದ್ರ ಕೊನೆಗೆ ಆ ಪಕ್ಷದಿಂದ ತಾವೇ ಹೊರಬಂದು ಜನರಲ್ಲಿ ಮೂಡಿಸಿದ್ದ ನಂಬಿಕೆಯನ್ನು ಹುಸಿಗೊಳಿಸಿದ್ದಾರೆ.
-
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications