ಅತೃಪ್ತರು ಸದನದ ಸದಸ್ಯರೋ, ಅಲ್ಲವೋ ಎಂಬುದು ಸ್ಪಷ್ಟವಾಗಲಿ: ಕೃಷ್ಣಬೈರೇಗೌಡ
ಬೆಂಗಳೂರು, ಜುಲೈ 18: ಶಾಸಕರು ಸದನಕ್ಕೆ ಹಾಜರಾಗುವುದು ಬಿಡುವುದು ಅವರ ವಿವೇಚನೆಗೆ ಬಿಟ್ಟಿದ್ದು ಎಂದು ಸುಪ್ರೀಂಕೋರ್ಟ್ ಹೇಳಿದ್ದು, ಈಗ ಅತೃಪ್ತರು ಸದನದ ಸದಸ್ಯರೋ ಅಲ್ಲವೋ ಎಂಬ ಗೊಂದಲ ಸೃಷ್ಟಿಯಾಗಿದೆ ಎಂದು ಕೃಷ್ಣಬೈರೇಗೌಡ ಹೇಳಿದರು.
ವಿಧಾನಸೌಧದಲ್ಲಿ ನಡೆಯುತ್ತಿರುವ ವಿಶ್ವಾಸಮತ ಯಾಚನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸುಪ್ರೀಂಕೋರ್ಟ್ ಏನೋ ತೀರ್ಪು ನೀಡಿದೆ.
ಆದರೆ ಸಂವಿಧಾನದಲ್ಲಿ ಶಾಸಕರು ಸದನದ ಸದಸ್ಯರು ಅಥವಾ ಅಲ್ಲ ಎರಡಕ್ಕೆ ಮಾತ್ರ ಅವಕಾಶವಿದೆ. ಆದರೆ ಅದು ನಿರ್ಧಾರವಾಗದೆಯೇ ಮತವನ್ನು ವಿಶ್ವಾಸಕ್ಕೆ ಹಾಕುವುದು ಅಪೂರ್ಣವಾಗುತ್ತದೆ ಎಂದರು.
ಸುಪ್ರೀಂಕೋರ್ಟ್ ತೀರ್ಪಿನಿಂದ ಅತೃಪ್ತ ಶಾಸಕರ ಬಗ್ಗೆ ಗೊಂದಲ ಸೃಷ್ಟಿಯಾಗಿದೆ.ಕ್ರಿಯಾ ಲೋಪ ಪುಷ್ಟೀಕರಿಸಲು ಮತ್ತಷ್ಟು ಕಾಲಾವಕಾಶ ಬೇಕಿದೆ. ಸಂವಿಧಾನದಂತೆ ನಡೆಯಬೇಕಾಗಿರುವುದು ಎಲ್ಲರ ಕರ್ತವ್ಯ ಎಂದು ಹೇಳಿದರು.

ಸಮ್ಮಿಶ್ರ ಸರ್ಕಾರದ ಪರವಾಗಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಎಚ್ಕೆ ಪಾಟೀಲ್ ಮಾತನಾಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ ವ್ಹಿಪ್ ನೀಡುವುದು ನಮ್ಮ ಹಕ್ಕು, ಶೆಡ್ಯೂಲ್ 10 ಸಂವಿಧಾನವು ಪಕ್ಷಗಳಿಗೆ ನೀಡಿದ ಹಕ್ಕಾಗಿದ್ದು, ಪ್ರಜಾಪ್ರಭುತ್ವವು ಕಲುಷಿತಗೊಳ್ಳದೆ ತಡೆಯಲು ಪಕ್ಷಾಂತರ ಕಾಯ್ದೆಯನ್ನು ಸೇರಿಸಲಾಗಿದೆ.
ವ್ಹಿಪ್ ನೀಡುವುದು ಶಾಸಕಾಂಗ ಪಕ್ಷದ ನಾಯಕರಾಗಿರುವ ನನ್ನ ಹಕ್ಕು, ಆದರೆ ಸುಪ್ರೀಂಕೋರ್ಟ್ ತೀರ್ಪು ನನ್ನ ಹಕ್ಕಿಗೆ ಚ್ಯುತಿ ತಂದಿದೆ. ಇಲ್ಲಿ ಕ್ರಿಯಾಲೋಪವಾಗಿದ್ದು, ಸ್ಪೀಕರ್ ಅವರ ಸ್ಪಷ್ಟನೆ ಬೇಕಿದೆ ಎಂದು ಹೇಳಿದರು.
ಪಕ್ಷಾಂತರ ಕಾಯ್ದೆಗೆ ಯಾವುದೇ ತಿದ್ದುಪಡಿಯನ್ನು ತಂದಿಲ್ಲ ಹಾಗೂ ಸುಪ್ರೀಂಕೋರ್ಟ್ ಸಹ ಪಕ್ಷಾಂತರ ನಿಷೇಧ ಕಾಯ್ದೆಯ ಬಗ್ಗೆ ಯಾವುದೇ ವ್ಯತಿರಿಕ್ತ ತೀರ್ಪು ನೀಡಿಲ್ಲ ಹಾಗಾಗಿ ವ್ಹಿಪ್ ನೀಡುವುದು ನನ್ನ ಹಕ್ಕಾಗಿದೆ ಎಂದು ಸಿದ್ದರಾಮಯ್ಯ ಸದನಕ್ಕೆ ಹೇಳಿದರು
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ









Click it and Unblock the Notifications