Bengaluru Rains: ಬೆಂಗಳೂರಿನಲ್ಲಿ ಈ ವರ್ಷ 1,795.5 ಮಿ.ಮೀ ದಾಖಲೆ ಮಳೆ!
ಬೆಂಗಳೂರಿನ ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಲವೆಡೆ ರಸ್ತೆಗಳು ಜಲಾವೃತವಾಗಿವೆ. ಇದೇ ವೇಳೆ ಸುರಿದ ಭಾರಿ ಮಳೆಗೆ ಗೋಡೆ ಕುಸಿದು ರಸ್ತೆ ಬದಿ ನಿಂತಿದ್ದ ವಾಹನಗಳಿಗೆ ಹಾನಿಯಾಗಿದೆ. ಅದೇ ಸಮಯದಲ್ಲಿ ಹವಾಮಾನ ಇಲಾಖೆ ಇಂದು ಹಳದಿ ಎಚ್ಚರಿಕೆಯನ್ನು ನೀಡಿದೆ.
ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ಸಂಜೆಯಿಂದ ಭಾರೀ ಮಳೆಯಾಗುತ್ತಿದ್ದು, ಬೆಳ್ಳಂದೂರು ಐಟಿ ಪ್ರದೇಶ ಸೇರಿದಂತೆ ನಗರದ ಪೂರ್ವ, ದಕ್ಷಿಣ ಮತ್ತು ಮಧ್ಯ ಭಾಗಗಳಲ್ಲಿ ಹಲವಾರು ಪ್ರಮುಖ ರಸ್ತೆಗಳು ಜಲಾವೃತವಾಗಿವೆ. ಹವಾಮಾನ ಇಲಾಖೆ, ''ನಗರದ ಉತ್ತರ ಭಾಗದ ರಾಜಮಹಲ್ ಗುಟ್ಟಹಳ್ಳಿಯಲ್ಲಿ 59 ಮಿ.ಮೀ ಮಳೆ ದಾಖಲಾಗಿದೆ. ಇದರೊಂದಿಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಇಂದು ಹಳದಿ ಅಲರ್ಟ್ ಘೋಷಿಸಿದ್ದು, ಮುಂದಿನ 3 ರಿಂದ 5 ದಿನಗಳವರೆಗೆ ಮಳೆಯಾಗುವ ಸಾಧ್ಯತೆಯನ್ನು ವ್ಯಕ್ತಪಡಿಸಿದೆ.
ಇದೇ ವೇಳೆ ಸುರಿದ ಭಾರಿ ಮಳೆಗೆ ಮೆಜೆಸ್ಟಿಕ್ ಬಳಿ ಗೋಡೆ ಕುಸಿದು ರಸ್ತೆ ಬದಿ ನಿಂತಿದ್ದ ಹಲವು ವಾಹನಗಳು ಜಖಂಗೊಂಡಿವೆ. ಕಳೆದ ತಿಂಗಳ ಆರಂಭದಲ್ಲಿ ಸತತ ಮೂರು ದಿನಗಳ ಮಳೆಯ ನಂತರ ನಗರವು ಜಲಾವೃತವಾಗಿತ್ತು, ಇದು ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ರಾಜಕೀಯ ಜಗಳಕ್ಕೆ ಕಾರಣವಾಯಿತು.

ಬೆಂಗಳೂರಿನಲ್ಲಿ ಬುಧವಾರ 60.5 ಮಿಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಕ್ಟೋಬರ್ 1ರಿಂದ ನಗರದಲ್ಲಿ 311.5 ಮಿಮೀ ಮಳೆಯಾಗಿದೆ. ಇದರೊಂದಿಗೆ ಈ ವರ್ಷ ಇದುವರೆಗೆ 1,795.5 ಮಿ.ಮೀ ಮಳೆ ದಾಖಲಾಗಿದೆ. ಇದಲ್ಲದೇ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನ ಪೂರ್ವ ಪ್ರದೇಶ ಮಳೆಯಿಂದ ಹೆಚ್ಚು ಹಾನಿ
ಇಂದು ಮುಂಜಾನೆ ಸುದ್ದಿಗಾರರೊಂದಿಗೆ ಮಾತನಾಡಿದ ಬೆಂಗಳೂರು ಮಹಾನಗರ ಪಾಲಿಕೆ (ಬಿಎಂಸಿ) ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್, ''ಪೂರ್ವ ಪ್ರದೇಶವು ಮಳೆಯಿಂದ ತೀವ್ರವಾಗಿ ಹಾನಿಗೊಳಗಾಗಿದೆ. ನಮ್ಮ ಅಧಿಕಾರಿಗಳು ಜನರಿಗೆ ಸಹಾಯ ಮಾಡಲು ಎಲ್ಲವನ್ನೂ ಮಾಡುತ್ತಿದ್ದಾರೆ. ಮಳೆ ನೀರು ರಸ್ತೆಯಲ್ಲಿ ನಿಲ್ಲದಂತೆ ರಸ್ತೆ ಬದಿಯ ಚರಂಡಿಗಳ ಅಡೆತಡೆಗಳನ್ನು ತೆಗೆಯುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ'' ಎಂದು ತಿಳಿಸಿದರು.

ವಾಹನ ಮಾಲೀಕರ ನಷ್ಟವನ್ನು ಬಿಎಂಆರ್ಸಿಎಲ್ ಭರಿಸಲಿದೆ
ಈ ಗೋಡೆಯನ್ನು 2015-2016ರಲ್ಲಿ ನಿರ್ಮಿಸಲಾಗಿದ್ದು, ಮೆಟ್ರೋದ ಆಸ್ತಿಯನ್ನು ರಕ್ಷಿಸಲು ನಿರ್ಮಿಸಲಾಗಿದೆ ಎಂದು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಹೇಳಿದ್ದಾರೆ. ಭಾರಿ ಮಳೆಯಿಂದಾಗಿ ಮಣ್ಣಿನ ಹಿಡಿತ ದುರ್ಬಲಗೊಂಡಿದ್ದು, ನೀರು ಹರಿದು ಹೋಗದ ಕಾರಣ ಗೋಡೆ ಕುಸಿದು ಹಲವು ವಾಹನಗಳಿಗೆ ಹಾನಿಯಾಗಿದೆ. ವಾಹನ ಮಾಲೀಕರೊಂದಿಗೆ ಮಾತನಾಡಿ ಹಾನಿ ಪರಿಹಾರದ ಭರವಸೆ ನೀಡಿದ್ದೇವೆ ಎಂದು ಅಂಜುಮ್ ಪರ್ವೇಜ್ ತಿಳಿಸಿದ್ದಾರೆ.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications