ಒಣಮೆಣಸಿನಕಾಯಿ ಹಂಚಿ 'ಆಕ್ರೋಶ್' ವ್ಯಕ್ತಪಡಿಸಿದ ವಾಟಾಳ್
ಬೆಂಗಳೂರು,ನವೆಂಬರ್ 28: ಕೇಂದ್ರದ ಅವ್ಯವಸ್ಥಿತ ಅಪನಗದೀಕರಣ ವಿರೋಧಿಸಿ ನವೆಂಬರ್ 28ರಂದು ಕನ್ನಡ ಚಳವಳಿ ಹೋರಾಟಗಾರ ವಾಟಾಳ್ ನಾಗರಾಜ್ ಬೆಂಗಳೂರಿನ ಮೆಜೆಸ್ಟಿಕ್ ನಲ್ಲಿ ಒಣಮೆಣಸಿನಕಾಯಿ ಹಂಚಿದರು.[ಕಪ್ಪುಹಣ ಇರುವವರಿಗೆ ಮಾತ್ರವಲ್ಲ, ತೆರಿಗೆ ಅಧಿಕಾರಿಗಳಿಗೂ ನಿದ್ದೆಯಿಲ್ಲ!]

ಮೆಜೆಸ್ಟಿಕ್ ನಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ವಾಟಾಳ್, ಕೇಂದ್ರ ಸರ್ಕಾರ ಅಪನಗದೀಕರಣ ಮಾಡಿರುವುದೇನೋ ಒಳ್ಳೆಯದು ಅದರೆ ಅಪನಗದೀಕರಣಕ್ಕೆ ತೆಗೆದುಕೊಂಡ ನಿಲುವುಗಳು ವ್ಯವಸ್ಥಿತವಾಗಿಲ್ಲ. ಹೀಗಾಗಿ ದೇಶದ ಕೋಟಿ ಕೋಟಿ ಜನರಿಗೆ ತೊಂದರೆಯಾಗಿದೆ. ಅರಾಜಕತೆ ತಾಂಡವವಾಡುತ್ತಿದೆ. ನವೆಂಬರ್ 8 ರಿಂದ ಬ್ಯಾಂಕ್, ಪೋಸ್ಟ್ ಆಫೀಸಿನ ಮುಂದೆ ಜನರು ಕುಳಿತು ಆನ್ನಾಹಾರ ವಿಲ್ಲದೆ ಶೌಚಾಲಯದ ವ್ಯವಸ್ಥೆಯಿಲ್ಲದೆ ಗಂಭೀರ ಪರಿಸ್ಥಿತಿ ಅನುಭವಿಸಿದ್ದಾರೆ. ಜನರು ತಮ್ಮ ಹಣವನ್ನು ತಾವೇ ತೆಗೆಯಲಾರದ ಸ್ಥಿತಿಯನ್ನು ತಲುಪಿದ್ದಾರೆ. ಎಷ್ಟೋ ಜನ ಮೃತರಾಗಿದ್ದಾರೆ ಎಂದರು.
ಕೇಂದ್ರ ಸರ್ಕಾರದ ಅಪನಗದೀಕರಣದಿಂದ ಸರ್ಕಾರಿ ಮತ್ತು ಖಾಸಗೀ ಬ್ಯಾಂಕುಗಳು ಹೆಚ್ಚು ಹೆಚ್ಚು ದುಡ್ಡು ಮಾಡಿಕೊಳ್ಳುತ್ತಿವೆ. ಸಾಮಾನ್ಯವರ್ಗ ಮತ್ತೆ ಬಡತನದ ಕಡೆ ಜಾರುತ್ತಿದೆ ಹೀಗಾಗಿ ಕನ್ನಡದ ವಾಟಾಳ್ ಪಕ್ಷ ಅಸಹನೀಯ ಸ್ಥಿತಿಯನ್ನು ತಲುಪಿರುವ ಜನರಿಗೆ ಒಣಮೆಣಸಿನಕಾಯಿಯನ್ನು ಹಂಚಿ ಖಾರವಾದ ಆಕ್ರೋಶ ವ್ಯಕ್ತಪಡಿಸುತ್ತಿದೆ ಎಂದು ತಿಳಿಸಿದರು.[ಕಾವೇರಿಗಾಗಿ ಜಮಖಾನೆ ಮೇಲೆ ವಾಟಾಳ್ ಉರುಳುಸೇವೆ]

ವೈವಿಧ್ಯಮಯವಾದ ಪ್ರತಿಭಟನೆಗಳನ್ನು ಮಾಡುವ ವಾಟಾಳ್ ನಾಗರಾಜ್ ಅವರು ಕೇಂದ್ರದ ಅವ್ಯವಸ್ಥಿತ ನಿರ್ಧಾರದ ವಿರುದ್ಧ ಒಣಮೆಣಸಿನಕಾಯಿ ಹಂಚಿ ಆಕ್ರೋಶ ವ್ಯಕ್ತ ಪಡಿಸಿರುವುದು ವಿಶೇಷವಾಗಿತ್ತು.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications